ಭಟ್ಕಳ: ಕಳೆದ ಎಪ್ರಿಲ್ ತಿಂಗಳಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯದ ದ್ವಿತೀಯ ಬಿ. ಕಾಂ. ಪರೀಕ್ಷೆಯಲ್ಲಿ ಇಲ್ಲಿನ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿಯರಾದ ಅಕ್ಷತಾ ಆರ್. ಪ್ರಭು, ಶೇ. 92.88 ಅಂಕ ದೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಪ್ರಾಂಶುಪಾಲ ನಾಗೇಶ್ ಭಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿವ್ಯಾ ಶೆಟ್ಟಿ ಶೇ. 91.75 ಅಂಕದೊಂದಿಗೆ ದ್ವಿತೀಯ ಸ್ಥಾನವನ್ನು ಹಾಗೂ ಮಹಾಲಕ್ಷ್ಮಿ ಶೇ. 89.13 ಅಂಕದೊಂದಿಗೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇದರೊಂದಿಗೆ ಕಾರ್ಪೋರೇಟ್ ಅಕೌಂಟಿಂಗ್ ವಿಷಯದಲ್ಲಿ 6 ವಿದ್ಯಾರ್ಥಿಗಳು, ಫಂಡಮೆಂಟಲ್ಸ ಆಫ್ ಫೈನಾನ್ಶಿಯಲ್ ಮ್ಯಾನೇಜ್ಮೇಂಟ್ ವಿಷಯದಲ್ಲಿ 7 ವಿದ್ಯಾರ್ಥಿಗಳು 100 ಕ್ಕೆ 100 ಅಂಕಗಳನ್ನು ಗಳಿಸಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಭಟಕಳ ಎಜ್ಯುಕೇಶನ್ ಟೃಸ್ಟ್ನ ಅಧ್ಯಕ್ಷರಾದ ಡಾ|| ಸುರೇಶ್ ವಿ. ನಾಯಕ್, ಕಾಲೇಜಿನ ವಾಣಿಜ್ಯ ಹಾಗೂ ಕಲಾ ವಿಭಾಗದ ಸಂಯೋಜಕರಾದ ಫ್ರೊ|| ಫಣಿಯಪ್ಪಯ್ಯ ಹೆಬ್ಬಾರ್, ಶಿಕ್ಷಕ-ಶಿಕ್ಷಕೇತರ ವೃಂದದವರು ಹರ್ಷ ವ್ಯಕ್ತಪಡಿಸಿರುತ್ತಾರೆ.