ದ್ವಿತೀಯ ಬಿಕಾಂ ಪರೀಕ್ಷೆಯಲ್ಲಿ ಅಕ್ಷತಾ ಪ್ರಭು ಪ್ರಥಮ

Source: sonews | By Staff Correspondent | Published on 11th July 2018, 6:05 PM | Coastal News | Don't Miss |

ಭಟ್ಕಳ: ಕಳೆದ ಎಪ್ರಿಲ್ ತಿಂಗಳಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯದ ದ್ವಿತೀಯ ಬಿ. ಕಾಂ. ಪರೀಕ್ಷೆಯಲ್ಲಿ ಇಲ್ಲಿನ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿಯರಾದ ಅಕ್ಷತಾ ಆರ್. ಪ್ರಭು, ಶೇ. 92.88 ಅಂಕ ದೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಪ್ರಾಂಶುಪಾಲ ನಾಗೇಶ್ ಭಟ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿವ್ಯಾ ಶೆಟ್ಟಿ ಶೇ. 91.75 ಅಂಕದೊಂದಿಗೆ ದ್ವಿತೀಯ ಸ್ಥಾನವನ್ನು ಹಾಗೂ ಮಹಾಲಕ್ಷ್ಮಿ ಶೇ. 89.13 ಅಂಕದೊಂದಿಗೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇದರೊಂದಿಗೆ ಕಾರ್ಪೋರೇಟ್ ಅಕೌಂಟಿಂಗ್ ವಿಷಯದಲ್ಲಿ 6 ವಿದ್ಯಾರ್ಥಿಗಳು, ಫಂಡಮೆಂಟಲ್ಸ ಆಫ್ ಫೈನಾನ್ಶಿಯಲ್ ಮ್ಯಾನೇಜ್ಮೇಂಟ್ ವಿಷಯದಲ್ಲಿ 7 ವಿದ್ಯಾರ್ಥಿಗಳು 100 ಕ್ಕೆ 100 ಅಂಕಗಳನ್ನು ಗಳಿಸಿರುತ್ತಾರೆ. 
    
ವಿದ್ಯಾರ್ಥಿಗಳ ಈ ಸಾಧನೆಗೆ ಭಟಕಳ ಎಜ್ಯುಕೇಶನ್ ಟೃಸ್ಟ್‍ನ ಅಧ್ಯಕ್ಷರಾದ ಡಾ|| ಸುರೇಶ್ ವಿ. ನಾಯಕ್, ಕಾಲೇಜಿನ ವಾಣಿಜ್ಯ ಹಾಗೂ ಕಲಾ ವಿಭಾಗದ ಸಂಯೋಜಕರಾದ ಫ್ರೊ|| ಫಣಿಯಪ್ಪಯ್ಯ ಹೆಬ್ಬಾರ್, ಶಿಕ್ಷಕ-ಶಿಕ್ಷಕೇತರ ವೃಂದದವರು ಹರ್ಷ ವ್ಯಕ್ತಪಡಿಸಿರುತ್ತಾರೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...