ಕೃಷ್ಣಾನಂದ ಭಟ್ಟ ಬಲ್ಸೆಗೆ ಹವ್ಯಕ ವೇದ ರತ್ನ ಬಿರುದು

Source: sonews | By Staff Correspondent | Published on 30th December 2018, 11:31 PM | Coastal News |

ಭಟ್ಕಳ: ಹೊನ್ನಾವರ ಮಂಡಳ ವ್ಯಾಪ್ತಿಯ ಭಟ್ಕಳ ಹವ್ಯಕ ವಲಯದ ಅಧ್ಯಕ್ಷ  ಕೃಷ್ಣಾನಂದ ಭಟ್ಟ ಬಲ್ಸೆ ಅವರಿಗೆ ಬೆಂಗಳೂರಿನಲ್ಲಿ ನಡೆದ ಅಖಿಲ ಹವ್ಯಕ ಮಹಾಸಭಾದ ಅಮೃತ ಮಹೋತ್ಸವ ಹಾಗೂ ವಿಶ್ವಹವ್ಯಕ ಸಮ್ಮೇಳನದಲ್ಲಿ ಹವ್ಯಕ ವೇದ ರತ್ನ ಬಿರುದು ನೀಡಿ ಸನ್ಮಾನಿಸಲಾಯಿತು. 

ಕೃಷ್ಣಾನಂದ ಭಟ್ಟ ಬಲ್ಸೆ ಇವರು ಬೈಲೂರಿನ ಬಲ್ಸೆಯವರಾಗಿದ್ದು ತಮ್ಮ ಚಿಕ್ಕ ವಯಸ್ಸಿನಿಂದಲೇ ಪೌರೋಹಿತ್ಯವನ್ನು ಮಾಡುತ್ತಾ, ವೇದಾಧ್ಯಯನವನ್ನು ಮಾಡಿದವರು. ಮುರ್ಡೇಶ್ವರ ದೇವಸ್ಥಾನದ ಉಪಾದಿಯನ್ನು ಹೊಂದಿರುವ ಇವರು ತಮ್ಮ ಪೌರೋಹಿತ್ಯದೊಂದಿಗೆ ಸಮಾಜ ಸೇವೆಯನ್ನು ಮೈಗೂಡಿಸಿಕೊಂಡು ಬಂದಿದ್ದಾರೆ. ಪ್ರತಿ ವರ್ಷ ಅನೇಕ ಅಶಕ್ತ ಕುಟುಂಬಗಳಿಗೆ ದಾನ ನೀಡುತ್ತಾ ಬಂದಿರುವ ಇವರು ಅನೇಕ ವಿದ್ಯಾರ್ಥಿಗಳಿಗೂ ಕೂಡಾ ವಿದ್ಯಾಭ್ಯಾಸಕ್ಕೆ ನೆರವಾಗಿದ್ದಾರೆ. 

ಶ್ರೀ ರಾಮಚಂದ್ರಾಪುರ ಮಠದ ಪರಮ ಶಿಷ್ಯರಾದ ಇವರು ಕಳೆದ ಹಲವಾರು ವರ್ಷಗಳಿಂದ ಶ್ರೀ ಮಠದ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...