ಶರೀಅತ್ ಸಂರಕ್ಷಣೆಗಾಗಿ ಸಾಂವಿಧಾನಿಕ ಹೋರಾಟಕ್ಕೆ ಸಜ್ಜಾಗಲು ಮೌಲಾನ ರಾಬೆಅ್ ನದ್ವಿ ಕರೆ

Source: S O News service | By Staff Correspondent | Published on 22nd December 2016, 12:21 AM | Coastal News | State News | National News | Islam | Don't Miss |

ಭಟ್ಕಳ,: ಇಸ್ಲಾಮ್ ಕುರಿತ ಅಜ್ಞಾನದಿಂದಾಗಿ ಕೆಲ ಅವಿವೇಕಿಗಳು ಮುಸ್ಲಿಮ್ ಪರ್ಸನಲ್ ಲಾ ವನ್ನು ಕೋರ್ಟಿನಲ್ಲಿ ಪ್ರಶ್ನಿಸಿದ್ದು ಇದಕ್ಕಾಗಿ ಸರ್ಕಾರ ಏಕರೂಪ ನಾಗರೀಕ ಸಂಹಿತೆ ಹೇರಲು ಮುಂದಾಗಿರುವುದರ ವಿರುದ್ಧ ದೇಶದ ಮುಸ್ಲಿಮರು ಸಾಂವಿಧಾನಿಕ ರೀತಿಯಲ್ಲಿ ಹೋರಾಟಕ್ಕೆ ಸಜ್ಜಾಗುವಂತೆ ಆಲ್ ಇಂಡಿಯಾ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ ಅಧ್ಯಕ್ಷ ಮೌಲಾನ ಸೈಯ್ಯದ್ ಮುಹಮ್ಮದ್ ರಾಬೆಅ ಹಸನಿ ನದ್ವಿ ಹೇಳಿದರು.

 

ಅವರು ಭಟ್ಕಳದ ಜಾಮಿಯಾ ಇಸ್ಲಾಮಿಯಾ ಕಾಲೇಜ್ ಆವರಣದಲ್ಲಿ ಇಲ್ಲಿನ ಮುಸ್ಲಿಮ್ ಸಾಮಾಜಿಕ, ರಾಜಕೀಯ ಐಕ್ಯವೇದಿಕೆಯಾಗಿರುವ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಆಯೋಜಿಸಿದ್ದ ಬೃಹತ್ ಶರಿಯತ್ ಸಂರಕ್ಷಣಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಇಸ್ಲಾಮ್ ಧರ್ಮ ಸಾರ್ವತ್ರಿಕವಾಗಿದ್ದು ಇದು ಮನುಷ್ಯ ಮನುಷ್ಯರಲ್ಲಿ ಎಂದಿಗೂ ಬೇಧವನ್ನುಂಟು ಮಾಡುವುದಿಲ್ಲ. ಮಾನವರ ಮಾರ್ಗದರ್ಶನಕ್ಕಾಗಿ, ಜನರಿಗೆ ಬದುಕಲು ಕಲಿಸುವ ಧರ್ಮವಾಗಿದ್ದು ಇದರಲ್ಲಿ ಯಾವದೇ ರೀತಿಯ ಹಸ್ತಕ್ಷೇಪವನ್ನು ಮುಸ್ಲಿಮ ಸಮುದಾಯ ಎಂದಿಗೂ ಸಹಿಸದು. ಯಾವಾಗೆಲ್ಲ ಮುಸ್ಲಿಮ್ ಪರ್ಸನಲ್ ಲಾ ಗೆ ಧಕ್ಕೆಯನ್ನುಂಟು ತರುವ ಪ್ರಯತ್ನ ನಡೆದಿದೆಯೋ ಆಗ ಇಡೀ ದೇಶದ ಮುಸ್ಲಿಮರು ಒಕ್ಕೂರಲಿನಿಂದ ಖಂಡಿಸಿದ್ದಾರೆ. ಈಗ ಮತ್ತೇ ಮುಸ್ಲಿಮರ ವೈಯಕ್ತಿಕ ಕಾನೂನಿನಲ್ಲಿ ಮೂಗು ತೂರಿಸುವ ಕೆಲಸಕ್ಕೆ ಕೆಲವರು ಕೈಹಾಕುತ್ತಿದ್ದಾರೆ ಇದನ್ನು ನಾವು ಸಹಿಸುವುದಿಲ್ಲ. ಈ ಕುರಿತು ಕಾನೂನು ಹೋರಾಟ ಮುನ್ನೆಡಯುತ್ತಿದೆ ಎಂದರು. ಸಂವಿಧಾನ ನಮಗೆ ನಮ್ಮ ಧರ್ಮದ ಮೇಲೆ ನೆಲೆನಿಲ್ಲುವ ಅದನ್ನು ಆಚರಿಸುವ ಮತ್ತು ಅದರಂತೆ ಜೀವಿಸುವ ಹಕ್ಕು ನೀಡಿದೆ. ಇಸ್ಲಾಮ್ ನಲ್ಲಿ ಯಾವುದೇ ಬದಲಾವಣೆ ತರುವುದು ಸಲ್ಲ. ನಮಗೆ ನಮ್ಮ ಜೀವಕ್ಕಿಂತ ನಮ್ಮ ಧರ್ಮ ದೊಡ್ಡದು. ಆದ್ದರಿಂದ ನಾವು ಪ್ರಾಣ ನೀಡಬಲ್ಲೇವು ಆದರೆ ಧರ್ಮದಲ್ಲಿ ಹಸ್ತಕ್ಷೇಪವನ್ನು ಸಹಿಸೇವು ಎಂದ ಮೌಲಾನ ರಾಬೇ ಧರ್ಮದ ಕುರಿತಂತೆ ಅನೇಕಾರು ತಪ್ಪುಕಲ್ಪನೆಗಳಿದ್ದು ಅದನ್ನು ದೂರಮಾಡುವ ಅಗತ್ಯವಿದೆ. ನಿಕಾ, ತಲಾಖ್ ಇದೂ ಕೂಡ ಧರ್ಮದ ಭಾಗವೇ ಆಗಿದ್ದು ಇದನ್ನು ಧಾರ್ಮಿಕ ರೀತಿಯಲ್ಲೇ ಆಚರಿಸಲಾಗುವುದು. ಯಾರಾದರೂ ಇದರಲ್ಲಿ ಬದಲಾವಣೆ ಬಯಸಿದರೆ ಅದು ಅವರ ಶುದ್ಧ ಮೂರ್ಖತನವಾದೀತು. ಬಲಪ್ರದರ್ಶನದ ಮೂಲಕ ಮನಷ್ಯನ ಹೊರರೂಪವನ್ನು ಬದಲಾಯಿಸಬಹುದು. ಆದರೆ ಆತನ ಮನಸ್ಸನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ಈ ಸಂದರ್ಭಧಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ರಾಷ್ಟ್ರೀಯ ಉಪಾಧ್ಯಕ್ಷ ಸೈಯ್ಯದ್ ಸಾದತುಲ್ಲಾ ಹುಸೇನಿ, ಮೌಲಾನ ವಾಝ್ಹೆ ರಷೀದ್ ನದ್ವಿ, ಡಾ.ವಲಿ ರಹ್ಮಾನಿ, ಡಾ.ತೌಖಿರ್ ರಝಾ, ಮುಹಮ್ಮದ್ ಖಾಲಿದ್ ಘಾಜಿಪುರಿ, ಮೌಲಾನ ಖಾಲಿದ್ ಸೈಫುಲ್ಲಾ ಸೇರಿದಂತೆ ವಿವಿಧ ವಿದ್ವಾಂಸರು ಉಪಸ್ಥಿತಿದ್ದರು.

ತಂಝೀಮ್ ಅಧ್ಯಕ್ಷ ಮುಝಮ್ಮಿಲ್ ಖಾಝಿಯ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಅಲ್ತಾಫ್ ಖರೂರಿ ಪ್ರಸ್ತಾವಿಕವಾಗಿ ಮಾತನಾಡಿದರು. ಮೌಲಾನ ಖ್ವಾಜಾ ಅಕ್ರಮಿ ಮದನಿ ಕಾರ್ಯಕ್ರಮ ನಿರೂಪಿಸಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಈದ್-ಉಲ್-ಫಿತರ್ ಪ್ರತಿನಿಧಿಸುವ ಮೌಲ್ಯಗಳು; ಮನುಷ್ಯ ಪ್ರೇಮ, ಕರುಣೆ, ಅನುಕಂಪ  ಮತ್ತು ಸಹಾನುಭೂತಿ

ಕೋಮು ಧ್ರುವೀಕರಣ ಮತ್ತು ಧಾರ್ಮಿಕ ಅಸಹಿಷ್ಣುತೆಯ ಹಿನ್ನೆಲೆಯಲ್ಲಿ, ಈದ್-ಉಲ್-ಫಿತರ್‌ನ ಮಹತ್ವವು ಹೆಚ್ಚಿನ ಪ್ರಾಮುಖ್ಯತೆಯನ್ನು ...

ಭಟ್ಕಳ: ಕುರಾನ್ ಕಂಠಪಾಠ ಮಾಡಿದ ಮರ್ಕಝಿ ಖಲಿಫಾ ಜಮಾಅತುಲ್ ಮುಸ್ಲಿಮೀನ್ ಚೀಫ್ ಖಾಝಿ

ಭಟ್ಕಳ: ಇಲ್ಲಿನ ಖಲಿಫಾ ಮರ್ಕಝಿ ಜಮಾಅತುಲ್ ಮುಸ್ಲಿಮೀನ್ ನ ಚೀಫ್ ಖಾಜಿ ಹಾಗೂ ಜಾಮಿಯಾ ಇಸ್ಲಾಮಿ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಮೌಲಾನ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...