ಭಟ್ಕಳೀಗರ ಮಾನವೀಯ ಕಳಕಳಿ; ಸೌದಿ ಆಸ್ಪತ್ರೆಯಲ್ಲಿ ಕೋಮಾ ಸ್ಥಿತಿಯಲ್ಲಿದ್ದ ವ್ಯಕ್ತಿಗೆ ಸಹಾಯಹಸ್ತ 

Source: S O News service | By Staff Correspondent | Published on 8th February 2017, 7:29 PM | Coastal News | National News | Gulf News | Special Report | Don't Miss |

ಭಟ್ಕಳ: ಒಂದು ಕೋಟಿಗೂ ಮಿಕ್ಕಿದ ಆಸ್ಪತ್ರಯ ಬಿಲ್ ಭರಿಸದೆ ಕಳೆದ ೯ತಿಂಗಳುಗಳಿಂದ ಕೋಮಾ ಸ್ಥತಿಯಲ್ಲಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಭಟ್ಕಳ ಮೂಲಕದ ಅಬುಬಕರ್ ಮಾಕಡೆ ಭಟ್ಕಳಿಗರ ನಿರತಂರ ಪ್ರಯತ್ನದಿಂದಾಗಿ ಕೊನೆಗೂ ಭಾರತಕ್ಕೆ ಮರಳುವ ಅವಕಾಶ ಪಡೆದುಕೊಂಡಿದ್ದು ಶುಕ್ರವಾರ ಬೆಂಗಳೂರಿಗೆ ಸ್ಥಳಾಂತರಿಸುವುದಾಗಿ ಅವರ ಕುಟುಂಬ ಮೂಲಗಳು ತಿಳಿಸಿವೆ.

ಇಲ್ಲಿನ ಹೆಬಳೆ ಗ್ರಾ.ಪಂ. ಉಪಾಧ್ಯಕ್ಷ ಇಬ್ಬು ಅಲಿ ಎಂಬುವವರ ಅಳಿಯ(ಪುತ್ರಿಯ ಪತಿ) ಶಿರೂರು ನಿವಾಸಿ ಅಬುಬಕರ್ ಮಾಕಡೆ ಎಂಬುವವರು ಸೌದಿ ಅರೇಬಿಯಾದಲ್ಲಿ ಉದ್ಯೋಗಿಯಾಗಿದ್ದು ಅಪಘಾತವೊಂದರಲ್ಲಿ ಕೋಮಾ ಅವಸ್ಥೆಗೆ ತಲುಪಿದ್ದು ಅಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಸರ್ಕಾರಿ ಆಸ್ಪತ್ರೆಯಂದರೆ ಉಚಿತ ಚಿಕಿತ್ಸೆ ಎಂದು ಭಾವಿಸಿದ ಅವರ ಸಂಬಂಧಿಕರು ಚಿಕಿತ್ಸೆಯನ್ನು ಪ್ರಾರಂಭಿಸಿದರು. ಕಳೆದ ಒಂಬತ್ತು ತಿಂಗಳಿಂದ ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಕಾಣದೆ ಇರುವಾಗ ಅವರನ್ನು ಭಾರತಕ್ಕೆ ತರವು ಪ್ರಯತ್ನಕ್ಕೆ ಕುಟುಂಬದವರು ಪ್ರಯತ್ನಿಸಿದರಾದರೂ ಆಸ್ಪತ್ರೆಯ ಒಂದು ಕೋಟಿ ರೂ ಬಿಲ್ ನೋಡಿ ದಂಗಾದರು. ಜೀವನಮಾನವಿಡಿ ದುಡಿದರೂ ಒಂದು ಕೋಟಿ ರೂ ಒದಗಿಸಲು ಸಾಧ್ಯವಗುವುದಿಲ್ಲ ಎಂದು ತಿಳಿದು ತಮ್ಮ ಅಳಿಯ ಸ್ವದೇಶಕ್ಕೆ ಮರಳುವ ಆಸೆಯನ್ನು ಕೈಬಿಟ್ಟಿದ್ದರು. 

ಆದರೆ ಇತ್ತಿಚೆಗೆ ಇಲ್ಲಿನ ಸಾಹಿಲ್ ಆನ್ ಲೈನ್ ಅಂತರಜಾಲ ತಾಣವು ಈ ಕುರಿತಂತೆ ವಿಸೃತ ವರದಿಯನ್ನು ಪ್ರಕಟಿಸಿದ್ದು ಇದರ ಪರಿಣಾಮವಾಗಿ ಸೌದಿಯಲ್ಲಿರುವ ಭಟ್ಕಳ ಹಾಗೂ ಮುರುಡೇಶ್ವರದ ನವಾಯತ್ ಸಮುದಾಯ ಇದಕ್ಕಾಗಿ ಹಗಲಿರುಳು ಪ್ರಯತ್ನಿಸಿದ್ದರು. ಇವರ ಪ್ರಯತ್ನಕ್ಕೀಗ ಯಶಸ್ಸು ದೊರೆಕಿದ್ದು ಆಶ್ಚರ್ಯಕರ ಬೆಳವಣೆಗೆಯೊಂದರಲ್ಲಿ ಸೌದಿ ಆಸ್ಪತ್ರೆಯ ಅಧಿಕರಿಗಳು ಒಂದು ಕೋಟಿ ರೂ ಬಿಲ್ಲನ್ನು ಮನ್ನಾ ಮಾಡಿದ್ದಲ್ಲದೆ ಈ ವ್ಯಕ್ತಿಯನ್ನು ಸೂಕ್ತ ಚಿಕತ್ಸೆ ಮಾಡಿ ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕಾಗಿ ಅನಿವಾಸಿ ಭಾರತೀಯರಾದ ಭಟ್ಕಳದ ಡಾ. ಝಹೀರ್ ಕೋಲಾ ಹಾಗೂ ಡಾ.ವಸೀಮ್ ಮಾಣಿಯವರು ಬೆಂಗಳೂರಿನ ಮಣೀಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದು ಅಬುಬಕರ್ ಮಾಕಡೆಯವರ ಕುಟುಂಬ ಈಗ ನಿಟ್ಟುಸಿರು ಬಿಡುವಂತೆ ಮಾಡಿದೆ. 

ಈ ನಡುವೆ ಸೌದಿ ಅರೇಬಿಯಾದ ರಿಯಾಝ್ ನಲ್ಲಿ ಡಾ.ಝಹೀರ್ ಹಾಗೂ ಡಾ.ವಸೀಮ್ ಸಭೆಯೊಂದನ್ನು ಆಯೋಜಿಸಿದ್ದು ಅಲ್ಲಿ ಅಬುಬಕರ್ ಮಾಕಡೆಯ ಚಕಿತ್ಸೆಗಾಗಿ ಸಹಾಯಹಸ್ತ ಚಾಚುವಂತೆ ವಿನಂತಿಸಿಕೊಂಡಿದ್ದು ಇದಕ್ಕೆ ಅಭೂತಪೂರ್ವ ಬೆಂಬಲ ದೊರೆತಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲಿ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ದಾನಿಗಳು ನೀಡುವ ವಾಗ್ದಾನ ಮಾಡಿದ್ದರಿಂದಾಗಿ ಮಾನಸಿಕವಾಗಿ ಕುಗ್ಗಿ ಹೋಗಿರುವ ಭಟ್ಕಳದಲ್ಲಿರುವ ಅಬುಬಕರ್ ಕುಟುಂಬ ಈಗ ಸ್ವಲ್ಪಮಟ್ಟಿಗೆ ಉಸಿರಾಡುವಂತಾಗಿದೆ. 

ರಿಯಾದ್ ನ ಸಭೆಯನ್ನುದ್ದೇಶಿಸಿ ಮಾತನಾಡಿದ ಮುರಡೇಶ್ವರ ಮುಸ್ಲಿಮ್ ಜಮಾ‌ಅತ್ ರಿಯಾದ್ ಇದರ ಅಧ್ಯಕ್ಷ ಅಶ್ಫಾಖ್ ಕೋಟೇಶ್ವರ, ಡಾ.ಝಹೀರ್ ಹಾಗೂ ಡಾ.ವಸೀಮ್ ರ ಕಾರ್ಯ ಶ್ಲಾಘನೀಯವಾಗಿದ್ದು ಮುಂಬರುವ ದಿನಗಳಲ್ಲಿ ನಾವು ಒಟ್ಟಾಗಿ ಇಂತಹ ಸಮಸ್ಯೆಗಳಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ. ಭಟ್ಕಳದ ಎಲ್ಲ ಸಮುದಾಯದದವರು ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ನಮ್ಮಿಂದಾದ ಸಹಾಯ ಸಹಕಾರ ಮಾಡಬೇಕಾಗಿದೆ ಎಂದು ತಿಳಿಸಿದರು. 

ಮಾಧ್ಯಮ ಪ್ರತಿನಿಧಿಯೊಂದಿಗೆ  ದೂರವಾಣಿ ಮೂಲಕ ಮಾತನಾಡಿದ ಡಾ.ವಸೀಮ್ ಮಾಣಿ, ಅಬುಬಕರ್ ಮಾಕಡೆಯವರಿಗೆ ಶುಕ್ರವಾರ ಬೆಂಗಳೂರಿಗೆ ಸ್ಥಳಾಂತರಿಸಲಾಗುತ್ತಿದ್ದು ಅಲ್ಲಿ ತಜ್ಞ ವೈದ್ಯರ ಸೇವೆಯನ್ನು ಪಡೆದುಕೊಳ್ಳಲಾಗುವುದು, ಅವರು ಸಂಪೂರ್ಣ ಚಿಕಿತ್ಸೆ ಆಗುವವರೆಗೂ ನಾವು ಪ್ರಯತ್ನ ಮಾಡುತ್ತೇವೆ. ಗಲ್ಫ್ ನಲ್ಲಿರುವ ಭಟ್ಕಳದ ಎಲ್ಲ ಜಮಾ‌ಅತ್ ಮುಖಂಡರಿಗೆ ಧನಸಹಾಯಕ್ಕೆ ಮನವಿ ಮಾಡಿಕೊಳ್ಳಲಾಗುವುದು. ಚಿಕಿತ್ಸೆಯಲ್ಲಿ ಯಾವುದಕ್ಕೂ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು. 

ಭಟ್ಕಳದ ನವಾಯತ್ ಸಮುದಾಯದ ಮಾನವೀಯ ಮುಖ, ಕಳಕಳಿ, ಅವರ ಅಂತಃಕರಣ ಈ ಒಂದು ಘಟನೆಯಿಂದಾಗಿ ಜಗತ್ತಿಗೆ ಪರಿಚಯವಾದಂತಾಗದೆ. ಸದಾ ಭಟ್ಕಳದ ಸಮುದಾಯದ ಕುರಿತು ಇಲ್ಲಸಲ್ಲದ ಆರೋಪ ಮಾಡುತ್ತಿರುವರಿಗೆ ಈ ಘಟನೆ ಪಾಠಕಲಿಸಿದಂತಾಗಿದೆ. 

ಎಂ.ಆರ್.ಮಾನ್ವಿ

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆಗೆ ಮುಂದುವರಿದ ಆಕ್ರೋಶ; 17 ದೇಶಗಳ ಖಂಡನೆ; ಗಲ್ಫ್ ಸಹಕಾರ ಮಂಡಳಿಯಿಂದಲೂ ಆಕ್ಷೇಪ

ತಾನು ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ ಎಂದು ಒತ್ತಿ ಹೇಳುವ ಮೂಲಕ ವಿವಿಧ ದೇಶಗಳಲ್ಲಿ ಭುಗಿಲೆದ್ದಿರುವ ಕ್ರೋಧದ ಅಲೆಯನ್ನು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...