ನ್ಯೂ ಇಂಗ್ಲಿಷ್ ಪಿಯು ಕಾಲೇಜಿನಲ್ಲಿ ಹೊಸ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Source: sonews | By Staff Correspondent | Published on 17th July 2017, 11:47 PM | Coastal News | Don't Miss |

ಭಟ್ಕಳ: ವಿದ್ಯಾರ್ಥಿಗಳು  ವಿದ್ಯಾರ್ಥಿ ಜೀವನದಲ್ಲಿ ಕೇವಲ ಹೆಚ್ಚಿನ ಅಂಕಗಳನ್ನು ಗಳಿಸುವುದೊಂದೇ ಗುರಿಯನ್ನಾಗಿಸಿಕೊಳ್ಳದೇ ಜೀವನದಲ್ಲಿ ಬದುಕಲು ಬೇಕಾಗುವ ಕಲೆಯನ್ನು ಕಲಿಯಬೇಕಿದೆ ಎಂದು ಕುಂಟವಾಣಿ ಸರಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ  ಎಸ್. ಎಮ್. ಹೆಗಡೆ ಹೇಳಿದರು. 
ಅವರು ದಿ. ನ್ಯೂ ಇಂಗ್ಲಿಷ್ ಪಿ.ಯು.ಕಾಲೇಜಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಮತ್ತು ದ್ವೀತೀಯ ಪಿ.ಯು.ಸಿ.ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾಥಿಗಳನ್ನು ಅಭಿನಂದಿಸುವ ’ಸಮಾಗಮ’  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. 
ಮನುಷ್ಯನಿಗೆ ಬದುಕಲು ಅತೀ ಅವಶ್ಯಕವಾಗಿ ಬೇಕಾಗಿರುವುದು ಒಳ್ಳೇಯ ಮಾತು ಮತ್ತು ಹೊಂದಾಣಿಯ ಸ್ವಭಾವ. ಒಳ್ಳೆಯ ಮಾತು ಎಲ್ಲರ ಸ್ನೇಹ ಸಂಪಾದಿಸಲು ಸಹಕಾರಿಯಾದರೆ ಹೊಂದಾಣಿಕೆಯ ಸ್ವಭಾವ ಎಲ್ಲರೊಂದಿಗೆ ಬೆರೆತು ಗುರಿ ಮುಟ್ಟಲು ಸಹಾಯ ಮಾಡುತ್ತದೆ ಎಂದೂ ಹೇಳಿದ ಅವರು ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ಇವುಗಳನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು. 
ದ್ವಿತಿಯ ಪಿ.ಯು.ಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸನ್ಮಾನಿತ ವಿದ್ಯಾರ್ಥಿಗಳಿಗೆ ಬಹುಮಾನದ ಜೊತೆ ಒಂದೊಂದು ಗಿಡವನ್ನು ನೀಡಿ ಪರಿಸರ ಪ್ರಜ್ಞೆಯನ್ನು ಕಾಲೇಜಿನ ವತಿಯಿಂದ ಪ್ರದರ್ಶಿಸಲಾಯಿತು. 
ಕಾರ್ಯಕ್ರಮದಲ್ಲಿ ಭಟ್ಕಳ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ  ಡಾ. ಸುರೇಶ ನಾಯಕ್ ಅಧ್ಯಕ್ಷತೆ ವಹಿಸಿದ್ದರು.  ಪ್ರಾಂಶುಪಾಲ  ವೀರೇಂದ್ರ ಶ್ಯಾನಭಾಗ ಮತ್ತು ಶೈಕ್ಷಣಿಕ ಸಲಹೆಗಾರ ಬಿ.ಆರ್.ಕೆ.ಮೂರ್ತಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರತೀಕ್ಷಾ ಮತ್ತು ಸಂಗಡಿಗರು ಪ್ರಾರ್ಥಿಸಿದರು, ಮೇಘನಾ ಸ್ವಾಗತಿಸಿದರು, ಮಹಾಮಾಯಿ ನಿರೂಪಿಸಿದರು,  ಗೌರವ ವಂದಿಸಿದರು. ನಂತರ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರನ್ನು ಮೆಚ್ಚಿಸುವಲ್ಲಿ ಯಶಸ್ವೀಯಾಯಿತು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...