ಜು.8ರಂದು ಹವ್ಯಕ ಬ್ರಾಹ್ಮಣ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ
ಭಟ್ಕಳ: ಭಟ್ಕಳ ತಾಲೂಕ ಹವ್ಯಕ ಬ್ರಾಹ್ಮಣ ನೌಕರರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಸಭೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ ಹಾಗೂ ಸಂಗೀತ ಕಾರ್ಯಕ್ರಮ ಜು.8ರಂದು ಮುರ್ಡೇಶ್ವರದ ಮಾನಾಸ್ಮøತಿಯಲ್ಲಿ ಸಂಜೆ 2.30ರಿಂದ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶಂಭು ನಾರಾಯಣ ಹೆಗಡೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಪ್ತಕ ಬೆಂಗಳೂರಿನ ಜಿ.ಎಸ್. ಹೆಗಡೆ, ವೈದ್ಯ ಡಾ. ವಾದಿರಾಜ ಭಟ್ಟ, ಸಂಘದ ಗೌರವಾಧ್ಯಕ್ಷ ಅಶೋಕ ಭಟ್ಟ ಉಪಸ್ಥಿತರಿರುವರು ಎಂದೂ ತಿಳಿಸಲಾಗಿದೆ.
ನಂತರ ಸಪ್ತಕ ಬೆಂಗಳೂರು ಇವರ ಸಹಯೋಗದೊಂದಿಗೆ ಕುಮಾರಿ ರಶ್ಮಿ ರವೀಂದ್ರ ಹೆಗಡೆ ಯಲ್ಲಾಪುರ ಇವರ ಗಾಯನ ಕಾರ್ಯಕ್ರಮವಿದ್ದು ಸಂವಾದಿನಿ ಸತೀಶ ಭಟ್ಟ ಹೆಗ್ಗಾರ, ತಬಲಾ ಗುರುರಾಜ ಹೆಗಡೆ ಆಡುಕಳ ಇವರು ಸಾಥ್ ನೀಡಲಿದ್ದಾರೆ ಎಂದೂ ತಿಳಿಸಲಾಗಿದೆ.
ಕಾರ್ಯಕ್ರಮಕ್ಕೆ ಸಂಘದ ಸದಸ್ಯರುಗಳು, ಹಿತೈಷಿಗಳು ಹಾಗೂ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಪಾಲಕರು ಆಗಮಿಸುವಂತೆಯೂ ಕೋರಲಾಗಿದೆ.