ಭಟ್ಕಳ: ಇಲ್ಲಿನ ರೈಲು ನಿಲ್ದಾಣದಲ್ಲಿ ಮುಖ್ಯ ದ್ವಾರಕ್ಕೆ ಅಳವಡಿಸಿದ್ದ ಕ್ಯಾಟಲ್ ಗಾರ್ಡ್ (ಜಾನುವಾರುಗಳು ಒಳ ಹೋಗದಿರಲು ಅಳವಡಿಸುವ ಸರಳು) ಪ್ರಯಾಣಿಕರಿಗೆ ಕಿರುಕುಳವನ್ನುಂಟು ಮಾಡುತ್ತಿದೆ ಎಂದು ಹಲವಾರು ಪ್ರಯಾಣಿಕರು ಮಾಧ್ಯಮಗಳಿಗೆ ದೂರಿದ್ದಾರೆ.
ಭಟ್ಕಳದ ಕೊಂಕಣ ರೈಲ್ವೆ ನಿಲ್ದಾಣಕ್ಕೆ ತೆರಳುವ ಗೇಟ್ ಬಳಿ ಯಾವುದೇ ಜಾನುವಾರುಗಳು ರೈಲ್ವೆ ನಿಲ್ದಾಣದೊಳಗೆ ಬರಬಾರದು ಎಂಬ ಉದ್ದೇಶದಿಂದ ಎರಡು ಕಡೆಗಳಲ್ಲಿ ಅಳವಡಿಸಲಾದ ಕ್ಯಾಟಲ್ ಗಾರ್ಡ್ ನ ಸರಳುಗಳು ತುಂಡಾಗಿದ್ದು, ೪ ತಿಂಗಳಿನಿಂದ ಈ ಭಾಗದ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದೆ. ಈ ಬಗ್ಗೆ ರೈಲ್ವೆ ಅಧಿಕಾರಿಗಳ ಗಮನಕ್ಕೆ ತಂದರೂ ಹಾಳಾದ ಕ್ಯಾಟಲ್ ಗಾರ್ಡ ಸರಿಪಡಿಸುವ ಕಾರ್ಯ ಮಾಡದೇ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜಾನುವಾರುಗಳು ರೈಲು ನಿಲ್ದಾಣಕ್ಕೆ ಪ್ರವೇಶ ಮಾಡಬಾರದು ಎಂಬ ಉದ್ದೇಶದಿಂದ ಅಳವಡಿಸಲಾಗಿರುವ ಈ ಸರಳುಗಳು ಈಗ ಪ್ರಯಾಣಿಕರ ಪ್ರವೇಶಕ್ಕೆ ತೊಂದರೆ ನೀಡುತ್ತಿವೆ. ನಡೆದುಕೊಂಡು, ದ್ವಿಚಕ್ರ ವಾಹನ ಅಥವಾ ಅಟೋರಿಕ್ಷಾ ದಲ್ಲಿ ಬರುವ ಪ್ರಯಾಣಿಕರಿಗೆ ಇದೊಂದು ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಬಾಯಿತೆರೆದುಕೊಂಡ ಸರಳುಗಳ ಸಂಧುಗಳಲ್ಲಿ ಬೈಕ್ ಅಥವಾ ಅಟೋ ರಿಕ್ಷಾದ ಚಕ್ರಗಳು ಸಿಲುಕಿಕೊಂಡು ಅವಾಂತವನ್ನು ಸೃಷ್ಟಿಸುತ್ತಿವೆ.
ನಾಲ್ಕು ತಿಂಗಳಿಂದ ಕ್ಯಾಟಲ್ ಗಾರ್ಡ ಸಂಪೂರ್ಣ ಹಾಳಾಗಿದ್ದು, ಅಳವಡಿಸಲಾಗಿದ್ದ ಸರಳುಗಳೆಲ್ಲ ತುಂಡಾಗಿ ಆಕಾಶ ಕಾಣುವಂತಾಗಿದೆ. ಇದರಿಂದ ರೈಲ್ವೆ ನಿಲ್ದಾಣಕ್ಕೆ ಬಂದು ಹೋಗುವ ಪ್ರಯಾಣಿಕರಿಗೆ, ಸ್ಥಳಿಯರಿಗೆ ಸೇರಿದಂತೆ ಮುಖ್ಯವಾಗಿ ಎಲ್ಲಾ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಇದರ ಪರಿಣಾಮ ಅದೆಷ್ಟೋ ವಾಹನ ಸವಾರರು ಈ ಕ್ಯಾಟಲ್ ಗಾರ್ಡ ದಾಟುವ ಸಂಧರ್ಭದಲ್ಲಿ ಬಿದ್ದು ಕೈಕಾಲುಗಳೆಲ್ಲ ಗಾಯವಾದ ಉದಾಹರಣೆಗಳಿವೆ.
ಶುಕ್ರವಾರ ಪ್ರಯಾಣಿಕರನ್ನು ಸಾಗಿಸುವ ಆಟೋ ರಿಕ್ಷಾವೂ ಈ ಕ್ಯಾಟಲ್ ಗಾರ್ಡನಲ್ಲಿ ಬಿದ್ದಿದ್ದು, ಬಳಿಕ ಇಲ್ಲಿನ ಸ್ಥಳಿಯರೆಲ್ಲ ಸೇರಿ ಆಟೋಗೆ ಹಗ್ಗ ಕಟ್ಟಿ ಎಳೆದು ಮೆಲಕ್ಕೆತ್ತಿದ್ದಾರೆ. ಹಾಗೂ ಬೈಕ್ ಸವಾರ ಸಹ ಬಿದ್ದು ಸಣ್ಣ ಪುಟ್ಟ ಗಾಯಗಳಾಗಿರುವುದು ಇದೆ. ಈ ಬಗ್ಗೆ ಇಲ್ಲಿನ ಕ್ಯಾಟಲ್ ಗಾರ್ಡನ ಸರಳು ತುಂಡಾಗಿರುವ ಪರಿಣಾಮ ಸಾಕಷ್ಟು ಬಾರಿ ರೈಲ್ವೆ ಅಧಿಕಾರಿಗಳ ಗಮನಕ್ಕೆ ತಂದರೂ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾನಿಯಾದ ಕ್ಯಾಟಲ್ ಗಾರ್ಡ ಸರಿಪಡಿಸುವ ಬಗ್ಗೆ ರೈಲ್ವೆ ಅಧಿಕಾರಿಗಳು ಗಮನ ಹರಿಸದೇ ಸುಮ್ಮನಿರುವದು ಇಲ್ಲಿನ ಆಟೋ ರಿಕ್ಷಾ ಚಾಲಕರು, ಪ್ರಯಾಣಿಕರು ಹಾಗೂ ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈಲ್ವೆ ಅಧಿಕಾರಿಗಳು ಸಮಸ್ಯೆ ಇದ್ದರು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ. ಈ ಬಗ್ಗೆ ಸ್ಥಳಿಯ ಆಟೋ ರಿಕ್ಷಾ ಚಾಲಕ ಆನಂದ ನಾಯ್ಕ ಮಾತನಾಡಿದ್ದು, “ ಈಗಾಗಲೇ ಮೌಖಿಕವಾಗಿ ೪ ರಿಂದ ೫ ಬಾರಿ ಮನವಿಯನ್ನು ಮಾಡಿದ್ದು, ಸಮಸ್ಯೆಯೂ ಇನ್ನಷ್ಟು ದೊಡ್ಡದಾಗಿದೆ. ಈ ಬಗ್ಗೆ ರೈಲ್ವೆ ಅಧಿಕಾರಿಗಳಿಗೆ ತಿಳಿಸಿದರೆ ಅವರು ಬೇಜವಾಬ್ದಾರಿ ಉತ್ತರ ನೀಡಿ ಸ್ಥಳಿಯರ ಬಾಯಿ ಮುಚ್ಚಿಸುತ್ತಾರೆ. ಹಗಲು ರಾತ್ರಿ ತಿರುಗಾಡುವ ಜನರಿಗೆ ಈ ಮಾರ್ಗ ತಲೆನೋವಾಗಿ ಪರಿಣಮಿಸಿದೆ. “ ಎಂದರು.
ಈ ಬಗ್ಗೆ ಮಾಧ್ಯಮದವರು ರೈಲ್ವೆ ಅಧಿಕಾರಿಯನ್ನು ಸಂಪರ್ಕಿಸಿದಾಗ ಸಮಸ್ಯೆಯ ಬಗ್ಗೆ ನಮಗೆ ಅರಿವಿದ್ದು, ಕ್ಯಾಟಲ್ ಗಾರ್ಡನ್ನು ಸೋಮವಾರದೊಳಗಾಗಿ ಸರಿಪಡಿಸಿಕೊಡುವುದಾಗಿ ಭರವಸೆಯನ್ನು ನೀಡಿದ್ದಾರೆ.
Read These Next
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...
ಕಾರವಾರ: ಚುನಾವಣಾ ಕಂಟ್ರೋಲ್ ರೂಂ ಗೆ ವೆಚ್ಚ ವೀಕ್ಷಕರ ಭೇಟಿ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರದಿರುವ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ...
ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು
ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...
ಬಳ್ಳಾರಿ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು.
ಬಳ್ಳಾರಿ : 09-ಬಳ್ಳಾರಿ (ಪ.ಪಂ) ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ದಿನವಾದ ಸೋಮವಾರದಂದು, ಓರ್ವ ...
ಪಟ್ಟಣ ಗ್ರಾಮದಲ್ಲಿ ಎತ್ತಿನ ಬಂಡಿಗಳ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಕಲಬುರಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ...
ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು
ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...
ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ
ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...
ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡಲು ಒಪ್ಪಿದ ಕೇಂದ್ರ ಸರ್ಕಾರ
ನವದೆಹಲಿ/ಬೆಂಗಳೂರು: ಕರ್ನಾಟಕಕ್ಕೆ ಸೋಮವಾರದ ಏಪ್ರಿಲ್ 29ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ...