ಮೋಸ ಮಾಡಿದ ಬಿಜೆಪಿಯನ್ನು ನಾಮಧಾರಿ ಸಮಾಜ ಬೆಂಬಲಿಸದು-ಆರ್.ಎನ್.ನಾಯ್ಕ

Source: sonews | By Staff Correspondent | Published on 23rd April 2018, 6:48 PM | Coastal News | State News | Don't Miss |

ಭಟ್ಕಳ:  ತಾಲೂಕಿನಲ್ಲಿ ಮುಂಬರುವ ವಿದಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಹಲವಾರು ಊಹಾ ಪೋಹಗಳೂ ಕೇಳಿ ಬಂದಿದ್ದು ಎಲ್ಲವಕ್ಕೂ ಕೂಡಾ ಮಾಜಿ ಸಚಿವ ಆರ್. ಎನ್. ನಾಯ್ಕ ಅವರು ತೆರೆ ಎಳೆದಿದ್ದಾರೆ.  

ಇತ್ತೀಚಿನ ವರೆಗೂ ಕೂಡಾ ಬಿ.ಜೆ.ಪಿ.ಯಲ್ಲಿ ಗುರುತಿಸಿಕೊಂಡು ಕೆಲಸವನ್ನು ಮಾಡುತ್ತಿದ್ದ ಆರ್. ಎನ್. ನಾಯ್ಕ ಅವರು ಇತ್ತೀಚೆಗೆ ಶಾಸಕ ಮಂಕಾಳ ವೈದ್ಯ ಅವರ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಪುನ ಸೇರ್ಪಡೆಗೊಂಡಿದ್ದು ಭಟ್ಕಳದಲ್ಲಿ ಅವರು ನಾಮಧಾರಿ ಸಮಾಜದ ಪ್ರಮುಖರೊಂದಿಗೆ ಕಾಂಗ್ರೆಸ್ ಪಕ್ಷದ ಸಭೆ ನಡೆಸಿದರು. 
ಈ ಸಭೆಯಲ್ಲಿ ಬಿ.ಜೆ.ಪಿ. ನಾಮಧಾರಿಗಳಿಗೆ ಒಗ್ಗಟ್ಟಾಗುವಂತೆ ಕರೆ ನೀಡಿದ ಕುರಿತು ಚರ್ಚಿಸಿದ ಅವರು ಯಾವುದೇ ಕಾರಣಕ್ಕೂ ಪಕ್ಷಕ್ಕೆ ದ್ರೋಹ ಬಗೆಯುವ ಪ್ರಶ್ನೆಯೇ ಬರದು ಎಂದರಲ್ಲದೇ ಬಿ.ಜೆ.ಪಿ.ಯಿಂದ ನಾಮಧಾರಿ ಸಮಾಜದ ಅನೇಕ ಆಕಾಂಕ್ಷಿಗಳಿಗೆ ಅನ್ಯಾಯವಾಗಿದ್ದು ನಮ್ಮ ಪಕ್ಷದಲ್ಲಿ ಸಮಾಜಿ ನ್ಯಾಯ ಕಾಪಾಡಿಕೊಂಡು ಬರಲಾಗಿದೆ ಎಂದರು. 

ಬಿ.ಜೆ.ಪಿ.ಯಲ್ಲಿ ಕೊನೆಯ ಕ್ಷಣದ ತನಕವೂ ಕೂಡಾ ಟಿಕೆಟ್ ನೀಡುವುದಾಗಿ ಭರವಸೆಯನ್ನು ನೀಡಿ ಟಿಕೆಟ್ ತಪ್ಪಿಸುವಲ್ಲಿ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆಯವರ ಕೈವಾಡವಿದ್ದು ಎಲ್ಲಾ ಕಾರ್ಯಕರ್ತರು ಕೂಡಾ ತಿರುಗಿ ಬಿದ್ದಿದ್ದಾರೆ. ಈ ಹಿಂದಿನಿಂದಲೂ ನಮ್ಮ ಸಮಾಜ ಕಾಂಗ್ರೆಸ್ ಬೆಂಬಲಿಸುತ್ತಾ ಬಂದಿದ್ದು ಈ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಿ ಜನಪ್ರಿಯತೆಯನ್ನು ಗಳಿಸಿಕೊಂಡು ಎಲ್ಲರೊಂದಿಗೆ ಬೆರೆತು ಬಡವರ ಕಷ್ಟಗಳನ್ನು ಆಲಿಸುವ ಮಂಕಾಳ ವೈದ್ಯ ಅವರನ್ನೇ ಬೆಂಬಲಿಸಬೇಕು ಎಂದು ಕೋರಿದರು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...