ಭಟ್ಕಳ: ವೈಜ್ಞಾನಿಕವಾಗಿ ಚಿಂತಿಸುವುದರ ಬದಲು ಎಲ್ಲರು ಅವೈಜ್ಞಾನಿಕವಾಗಿ ಚಿಂತಿಸುವುದರಿಂದ ದೇಶದ ಅಭಿವೃದ್ದಿ ಕುಂಠಿತವಾಗುತ್ತಿದೆಂದು ವೈಜ್ಞಾನಿಕ ವಿಶ್ಲೇಷಕ, ವಿಚಾರವಾದಿ ನರೇಂದ್ರ ನಾಯಕ ಹೇಳಿದರು.
ಅವರು ಇಲ್ಲಿನ ಶಿರಾಲಿಯಲ್ಲಿ ಜನತಾ ವಿದ್ಯಾಲಯ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಹಾಗು ಉತ್ತರ ಕನ್ನಡ ಚಿಂತನ ಮಂಥನ ಸಮಿತಿಯಿಂದ ಆಯೋಜಿಸಲಾದ ಪವಾಡ ಬಯಲು ಕಾರ್ಯಕ್ರಮ ಹಾಗು ವೈಜ್ಞಾನಿಕ ಉಪನ್ಯಾಸ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಇಂದಿನ ಯುವ ಜನತೆ ಎಲ್ಲವನ್ನು ವೈಜ್ಞಾನಿಕ ದೃಷ್ಟಿಕೋನದಿಂದ ನೋಡಬೇಕಾಗಿದೆ. ನಾವು ವೈಜ್ಞಾನಿಕವಾಗಿ ಚಿಂತಿಸುವುದರಿಂದ ಮಾತ್ರ ಅಭಿವೃದ್ದಿಯನ್ನು ಹೊಂದಲು ಸಾಧ್ಯ. ವೈಯಕ್ತಿಕ ಬೆಳವಣಿಗೆಯ ಜೊತೆಗೆ ಈಗಿನ ಯುವ ಜನತೆ ದೇಶದ ಸರ್ವತೋಮುಖ ಅಭಿವೃದ್ಧಿಯತ್ತ ಕಾರ್ಯ ಸಾಧಿಸಬೇಕಾಗಿದೆ. ಯುವಕರು ತಮ್ಮ ಚಿಂತನೆಯ ಪ್ರದರ್ಶನ ಮಾಡಬೇಕು ಎಂದು ಕರೆ ನೀಡಿದು.
ಕಾರ್ಯಕ್ರಮದಲ್ಲಿ ಬ್ರಹ್ಮಾವರದಲ್ಲಿನ ಡಿವೈನ್ ಪಾರ್ಕ ಸಂಸ್ಥೆಯಿಂದ ಆಗಮಿಸಿದ ಮಹೇಶ ಮಾತನಾಡಿದ್ದು ರಾಮಕೃಷ್ಣ ಪರಮ ಹಂಸರಿಗೆ ಒಬ್ಬ ಶಿಷ್ಯನ ಅವಶ್ಯಕತೆ ಇತ್ತು. ಆ ಸಮಯದಲ್ಲಿ ರಾಮಕೃಷ್ಣ ಪರಮಹಂಸರಿಗೆ ದೊರೆತ ಶಿಷ್ಯರೇ ವಿವೇಕಾನಂದರಾಗಿದ್ದಾರೆ. ವಿವೇಕಾನಂದರನ್ನು ರಾಮಕೃಷ್ಣ ಪರಮಹಂಸರು ಭೀಮ ಪ್ರತಿಭೆ ಎಂದು ಕರೆಯುತ್ತಿದ್ದರು. ಅವರಲ್ಲಿನ ಪ್ರತಿಭೆ, ಚಿಂತನೆ ಯುವ ಪೀಳಿಗೆ ಬೆಳೆಸಿಕೊಳ್ಳಬೇಕು. ವಿವೇಕಾನಂದರು ಗುರುವಿನಲ್ಲಿ ನಿಷ್ಟರಾಗಿದ್ದವರು ಈಗಿನ ವಿದ್ಯಾರ್ಥಿಗಳು ತಮ್ಮ ಗುರುವಿಗೆ ನಿಷ್ಟರಾಗಿರಬೇಕು ಎಂದು ಹೇಳಿದರು.
ಇದೇ ಸಂಧರ್ಬದಲ್ಲಿ ವೈಜ್ಞಾನಿಕ ವಿಶ್ಲೇಷಕ, ವಿಚಾರವಾದಿ ನರೇಂದ್ರ ನಾಯಕ ವಿದ್ಯಾರ್ಥಿಗಳಿಗೆ ಯಾವ ರೀತಿಯಲ್ಲಿ ಪವಾಡವನ್ನು ಮಾಡಲಾಗುತ್ತದೆ. ಮತ್ತು ಅದನ್ನು ಹೇಗೆ ಬಯಲು ಮಾಡಬಹುದು ಎಂಬ ಪವಾಡ ಬಯಲು ಕಾರ್ಯಕ್ರಮದಲ್ಲಿ ವಿವರಿಸಿದರು.
ಈ ಸಂದರ್ಬದಲ್ಲಿ ಸಿ.ಐ.ಟಿ.ಯು ಮುಖಂಡ ಸುಭಾಸ್ ಕೊಪ್ಪಿಕರ್, ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಉಪ ಪ್ರಾಂಶುಪಾಲ ಕೆ. ಮರಿಸ್ವಾಮಿ, ಸಾಹಿತಿ ಹಾಗೂ ವೈದ್ಯ ಡಾ. ಆರ್.ವಿ.ಸರಾಫ್, ಜನತಾ ವಿದ್ಯಾಲಯ ಪದಚಿ ಪೂರ್ವ ಕಾಲೇಜು ಪ್ರಾಂಶುಪಾಲ ಎ.ಬಿ.ರಾಮರಥ, ಜನತಾ ವಿದ್ಯಾಲಯ ಪ್ರೌಢಶಾಲೆ ಮುಖ್ಯಾಧ್ಯಾಪಕರು, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.
Read These Next
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...
ಮನೆಯಿಂದ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ
ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...
ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ "ಮತದಾನ ಜಾಗೃತಿ ಜಾಥಾ ...
ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್
ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...
ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ಸಕಲ ಸಿದ್ದತೆಗೆ ಸೂಚನೆ
ಶಿವಮೊಗ್ಗ : ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ...
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಸಿ ಸುಳ್ಳು : ಸಿ lಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು : ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ...