ನ್ಯೂ ಇಂಗ್ಲಿಷ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮ

Source: sonews | By Staff Correspondent | Published on 16th July 2018, 5:05 PM | Coastal News | Don't Miss |

ಜಾತಿ ಧರ್ಮ ಎನ್ನುವ ಬೇಧಭಾವವಿಲ್ಲದೆ ಇಂದಿನ “ಸಮಾಗಮ” ಎನ್ನುವ ಕಾರ್ಯಕ್ರಮದ  ಮೂಲಕ ಒಂದಾದ ಪ್ರÀಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ, ಈ ಕಾರ್ಯಕ್ರಮ ಶೈಕ್ಷಣಿಕ ಏಳ್ಗೆಯಲ್ಲಿ ಸಹಕಾರಿಯಾಗಲಿ ಎಂದು ಭಟ್ಕಳ  ಎಜ್ಯುಕೇಶನ್  ಟ್ರಸ್ಟ್‍ನ  ಅಧ್ಯಕ್ಷ  ಡಾ. ಸುರೇಶ ನಾಯಕ್ ಹೇಳಿದರು.

ಅವರು ದಿ. ನ್ಯೂ ಇಂಗ್ಲಿಷ್ ಪಿ.ಯು.ಕಾಲೇಜಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಮತ್ತು ದ್ವಿತೀಯ ಪಿ.ಯು.ಸಿ ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾಥಿಗಳಿಗೆ ಅಭಿನಂದಿಸುವ ‘ ಸಮಾಗಮ’ ಎನ್ನುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. 
            
ಮುಖ್ಯ ಅತಿಥಿಗಳಾದ ದುರ್ಗಾಪರಮೇಶ್ವರಿ ಫ್ರೌಢಶಾಲೆಯ ಮುಖ್ಯಾಧ್ಯಾಪಕ ಕೆ. ಬಿ. ಮಡಿವಾಳ ಮತ್ತು ಸರಕಾರಿ ಫ್ರೌಢಶಾಲೆ, ಬಂದರನ ಮುಖ್ಯಾಧ್ಯಾಪಕ ವಿನಾಯಕ ಜಿ. ಅವಧಾನಿ ಮಾತನಾಡುತ್ತ ವಿದ್ಯಾರ್ಥಿಗಳಿಗೆ ಶಿಸ್ತು, ಸಮಯ ಪಾಲನೆ, ನಿರಂತರ ಅಧ್ಯಯನ, ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ ಮತ್ತು ಮೊಬೈಲ್ ನ ನಿಯಮಿತ ಬಳಕೆಯಿಂದ ಯಶಸ್ಸನ್ನು ಗಳಿಸಲು ಸಾಧ್ಯ ಎಂದು ಹೇಳಿದರು.

ದ್ವಿತಿಯ ಪಿ.ಯು.ಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಮತ್ತು ದ್ವಿತೀಯ ಪಿಯುಸಿಯಲ್ಲಿ 100 ಪ್ರತಿಶತ ಫಲಿತಾಂಶ ದಾಖಲಿಸಿದ ಮಹಾವಿದ್ಯಾಲಯದ ಉಪನ್ಯಾಸಕರುಗಳನ್ನು ಸನ್ಮಾನಿಸಲಾಯಿತು.

ಪ್ರಾಂಶುಪಾಲ ವೀರೇಂದ್ರ ಶ್ಯಾನಭಾಗ ಮತ್ತು ಶೈಕ್ಷಣಿಕ ಸಲಹೆಗಾರ ಬಿ.ಆರ್.ಕೆ.ಮೂರ್ತಿ ಮತ್ತು ಹಳೆ ವಿದ್ಯಾರ್ಥಿ ಅಕ್ಷಯ ಕೊಲ್ಲೆ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶ್ರೇಯಾ ಮತ್ತು ಸಂಗಡಿಗರು ಪ್ರಾರ್ಥಿಸಿದರು, ಅಕ್ಷತಾ ಸ್ವಾಗತಿಸಿದರು, ದಿವ್ಯಾ ಪ್ರಭು ನಿರೂಪಿಸಿದರು ಮತ್ತು ಐಶ್ವರ್ಯ  ವಂದಿಸಿದರು. ನಂತರ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...