ತಾಲೂಕಾಡಳಿತದಿಂದ ವಿಶ್ವಕರ್ಮ ದಿನಾಚರಣೆ

Source: sonews | By Staff Correspondent | Published on 19th September 2017, 12:03 AM | Coastal News | Don't Miss |

ಭಟ್ಕಳ: ಇಲ್ಲಿನ ತಾಲೂಕಾ ಆಡಳಿತ, ಪುರಸಭೆ, ಭಟ್ಕಳ ಹಾಗೂ ಪಟ್ಟಣ ಪಂಚಾಯತ್ ಭಟ್ಕಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಎರ್ಪಡಿಸಲಾಗಿದ್ದ ದೇವಶಿಲ್ಪಿ ಶ್ರೀ ವಿಶ್ವಕರ್ಮ ಜಯಂತಿಯನ್ನು ತಾಲೂಕಾ ಪಂಚಾಯತ್ ಉಪಾಧ್ಯಕ್ಷೆ ರಾಧಾ ವೈದ್ಯ ಉದ್ಘಾಟಿಸಿದರು. 
ನಂತರ ಮಾತನಾಡಿದ ಅವರು ವಿಶ್ವಕರ್ಮ ಸಮಾಜರು ಅತ್ಯಂತ ಕಷ್ಟ ಜೀವಿಗಳಾಗಿದ್ದು ಸರಕಾರ ಅನೇಕ ಸೌಲಭ್ಯಗಳನ್ನು ಕೊಡ ಮಾಡಿದೆ.  ಅವುಗಳನ್ನು ಸಮಾಜದ ಎಲ್ಲರೂ ಬಳಕೆ ಮಾಡಿಕೊಂಡು. ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು. 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ ವಿಭಾಗಾಧಿಕಾರಿ ಎಂ. ಎನ್. ಮಂಜುನಾಥ ವಹಿಸಿದ್ದರು. 
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ತಹಸೀಲ್ದಾರ್ ಬಿ.ಎಚ್. ಗುನಗ, ಆರ್.ಎನ್.ಎಸ್. ಪಾಲಿಟೆಕ್ನಿಕ್ ಉಪನ್ಯಾಸಕ ಸಂತೋಷ ಎಂ. ಆಚಾರ್ಯ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ನಿರ್ದೇಶಕ ದೇವಿದಾಸ ವಿ. ಆಚಾರ್ಯ, ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಸದಾನಂದ ಆಚಾರ್ಯ ಮಾತನಾಡಿದರು. 
ಸುರೇಶ ಆಚಾರ್ಯ ನಿರೂಪಿಸಿದರು. ರಾಜು ನಾಯ್ಕ ವಂದಿಸಿದರು. 

Read These Next

ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ...

ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೂಕ್ಷ್ಮ ಬೋಧನೆ, ಲಲಿತಕಲೆ ಮತ್ತು ರಂಗಭೂಮಿ ಕಾರ್ಯಾಗಾರ ಮುಕ್ತಾಯ

ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಸಂಸ್ಕಾರ, ಮಾನವೀಯ ಮೌಲ್ಯ, ಪರಸ್ಪರ ಗೌರವ ನೀಡುವುದು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವ ...