ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ
ಭಟ್ಕಳ: ಇಲ್ಲಿನ ಮಣ್ಕುಳಿಯಲ್ಲಿ ಮಾನಸಿಕವಾಗಿ ಮನನೊಂದ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಶುಕ್ರವಾರದಂದು ಮಧ್ಯಾಹ್ನ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ನಾಗೇಶ ಗಣಪತಿ ನಾಯ್ಕ (26) ಇಲ್ಲಿನ ಮಣ್ಕುಳಿಯ ನಿವಾಸಿಯಾಗಿದ್ದು, ಟೈಲರಿಂಗ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಕೆಲಸಕ್ಕೆ ಹೋಗದೇ ಮನೆಯಲ್ಲಿ ಇದ್ದ ಯುವಕ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದು, ಮಧ್ಯಾಹ್ನ ಮನೆಗೆ ಮೃತ ಯುವಕನ ಸಹೋದರ ಊಟಕ್ಕೆ ಬಂದ ವೇಳೆ ತಿಳಿದು ಬಂದಿದೆ. ತಕ್ಷಣಕ್ಕೆ ಯುವಕನನ್ನು ಸರಕಾರಿ ಆಸ್ಪತ್ರೆಗೆ ಕರೆತಂದರಾದರೂ ಮಾರ್ಗ ಮಧ್ಯದಲ್ಲಿ ಮೃತನಾಗಿದ್ದಾನೆ ಎಂದು ತಿಳಿದು ಬಂದಿದೆ. ಮೃತ ಯುವಕನ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ ಕುರಿತು ಇಲ್ಲಿನ ನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.