ಭಟ್ಕಳ: ದೊಂಬಿ, ಆತ್ಮಹತ್ಯ, ಪೊಲೀಸರ ಮೇಲೆ ಹಲ್ಲೆ ಸಂಬಂಧಿಸಿದಂತೆ ೪ ಪ್ರಕರಣ ದಾಖಲು

Source: sonews | By Staff Correspondent | Published on 15th September 2017, 6:51 PM | Coastal News | State News | Don't Miss |

ಭಟ್ಕಳ: ಪುರಸಭೆ ಅಂಗಡಿ ಮಳಿಗೆ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಆಕ್ರೋಷಿತರು ಪುರಸಭೆ ಕಟ್ಟಡದ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪೊಲೀಸ್ ಸಿಬ್ಬಂಧಿಗಳ ಮೇಲೆ ಹಲ್ಲೆ, ಆತ್ಮಹತ್ಯೆಗೆ ಯತ್ನ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಸಂಬಂಧಿಸಿದಂತೆ ಒಟ್ಟು ನಾಲ್ಕು ವಿವಿಧ ಪ್ರಕರಣಗಳು ಭಟ್ಕಳ ನಗರಠಾಣೆಯಲ್ಲಿ ದಾಖಲಾಗಿವೆ. 

ಪೊಲೀಸ್ ಸಿಬ್ಬಂಧಿ ಗೌತಮ್ ನೀಡಿದ ದೂರಿನಲ್ಲಿ ಗುರುವಾರ ಬೆಳಿಗ್ಗೆ ಅಂಗಡಿ ಕಬ್ಜಾ ತೆಗೆದುಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ವಿಡಿಯೋ ಚಿತ್ರಿಕರಣ ಮಾಡುತ್ತಿದ್ದಾಗ ಬಿಜೆಪಿ ಮುಖಂಡ ಗೋವಿಂದ ನಾಯ್ಕ ಸೇರಿದಂತೆ ರಾಘವೇಂದ್ರ ನಾಯ್ಕ, ಮಾರೂತಿ ನಾಯ್ಕ, ಶ್ರೀನಿವಾಸ ನಾಯ್ಕ, ಸುಧಾಕರ್ ನಾಯ್ಕ, ಕೃಷ್ಣಾನಂದ ಸಾಣಿಕಟ್ಟೆ, ತುಳಸಿದಾಸ ನಾಯ್ಕ, ಕುಮಾರ್ ನಾಯ್ಕ, ಉದಯ ನಾಯ್ಕ ಹಾಗೂ ನಾಗರಾಜ ನಾಯ್ಕ ಎನ್ನುವವರು ಅವಾಚ್ಯ ಶಬ್ಧಗಳಿಂದ ಬೈಯ್ದು, ನೀರನ್ನು ಮುಖಕ್ಕ ಎರಚಿ ಕಾಲಿಗೆ ಗಾಯ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. 
ಪುರಸಭೆಯ ಕಿರಿಯ ಇಂಜಿನೀಯರ್ ಉಮೇಶ್ ಮಡಿವಾಳ ದೂರನ್ನು ನೀಡಿದ್ದು, ಗುರುವಾರ ಅಂಗಡಿಗಳನ್ನು ಕಬ್ಜಾ ಪಡೆಯುವ ಸಂದರ್ಭದಲ್ಲಿ ಯಾರೋ ಕಿಡಿಗೇಡಿಗಳು ಪುರಸಭೆಯ ಕಚೇರಿ ಕಿಟಕಿ ಗಾಜುಗಳನ್ನು ಒಡೆದು ರೂ.೨ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತನ್ನು ನಾಶಪಡಿಸಿದ್ದಾರೆ ಎಂದು ದೂರಿದ್ದಾರೆ. 

ಮತ್ತೊಂದು ದೂರಿನಲ್ಲಿ ನಗರಠಾಣೆಯ ಪಿ.ಎಸ್.ಐ ಅಣ್ಣಪ್ಪ ಮೊಗೇರ್, ಗುರುವಾರ ಬೆಳಿಗ್ಗೆ ೬.೧೫ಕ್ಕೆ ಪುರಸಭೆ ಎದುರು ಅಂಗಡಿ ಕಬ್ಜಾ ಪಡೆಯುತ್ತಿರುವ ಸಂದಂರ್ಭದಲ್ಲಿ ರಾಮಚಂದ್ರ ನಾಯ್ಕ ಎಂಬಾತ ಪುರಸಭೆ ಕಚೇರಿ ಬಳಿ ಬಂದು ಆವೇಶದಿಂದ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಈ ಸಂದರ್ಭದಲ್ಲಿ ರಕ್ಷಿಸಲು ಬಂದ ಈಶ್ವರ್ ನಾಯ್ಕ ಎಂಬುವವರಿಗೆ ಗಾಯಗಳಾಗಿವೆ ಎಂದು ಆತ್ಮಹತ್ಯೆಗೆ ಯತ್ನ ಪ್ರಕರಣ ದಾಖಲಿಸಿದ್ದಾರೆ.

ರಾಮಚಂದ್ರ ನಾಯ್ಕ  ಅತ್ಮಹತ್ಯೆಗೆ ಪುರಸಭೆಯ ಅಧಿಕಾರಿಗಳೇ ಕಾರಣ ಎಂದು ಆರೋಪಿಸಿ ಪ್ರಕರಣವೊಂದು ದಾಖಲಾಗಿದ್ದು ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಆಬಿಯಂತರ ಆರ್.ಪಿ.ನಾಯ್ಕ ಹಾಗೂ ಭಟ್ಕಳ ಪುರಸಭೆ ಅಧಿಕಾರಿಗಳ ವಿರುದ್ಧ ವೆಂಕಟೇಶ್ ನಾಯ್ಕ ಎಂಬುವವರು ದೂರು ದಾಖಲಿಸಿದ್ದಾರೆ. 
 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...