ಭಟಕಳ ಅರ್ಬನ್ ಬ್ಯಾಂಕಿನಲ್ಲಿ ಸೌರ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆ

Source: sonews | By Staff Correspondent | Published on 19th June 2018, 4:23 PM | Coastal News | State News | Don't Miss |

ಭಟ್ಕಳ:  ಈಗಾಗಲೇ ಹತ್ತು ಹಲವು ಕಾರ್ಯಚಟುವಟಿಕೆಗಳಿಂದ ಮನೆ ಮಾತಾಗಿರುವ ಭಟಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ವಿದ್ಯುತ್ ಸ್ವಾವಲಂಬಿಯಾಗುವುದರ ಮೂಲಕ ಇನ್ನೊಂದು ಮೈಲಿಗಲ್ಲು ಸ್ಥಾಪಿಸಿದೆ. 

ಬ್ಯಾಂಕಿನ ಕೇಂದ್ರ ಕಛೇರಿಯ ಆವರಣದಲ್ಲಿ ಅಳವಡಿಸಿದ ಸೌರ ವಿದ್ಯುತ್ ಉತ್ಪಾದನಾ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಬ್ಯಾಂಕಿನ ಅಧ್ಯಕ್ಷ ಅಬ್ದುಲ್ ಮಜೀದ ಚೌಗುಲೆ,  

ಈ ಸೌರ ವಿದ್ಯುತ್ ಉತ್ಪಾದನಾ ಘಟಕವು 25 ಮೆಗಾ ವ್ಯಾಟ್ ಸಾಮಥ್ರ್ಯವನ್ನು ಹೊಂದಿದ್ದು, ನೆಟ್ ಮೀಟರ್ ತಾಂತ್ರಿಕತೆಯನ್ನು ಹೊಂದಿರುತ್ತದೆ.  ಬ್ಯಾಂಕು ಈ ಸೌರ ವಿದ್ಯುತ್ ಘಟಕದಿಂದ ಉತ್ಪತ್ತಿಯಾದ ವಿದ್ಯುತ್‍ನ್ನು ತನ್ನ ಪ್ರತಿನಿತ್ಯದ ಚಟುವಟಿಕೆಗಳಿಗೆ ಉಪಯೋಗಿಸಿದ ನಂತರ ಹೆಚ್ಚಿಗೆ ಉಳಿದ ವಿದ್ಯುತ್‍ನ್ನು ಯುನಿಟ್ ಒಂದಕ್ಕೆ ರೂ.6/- ರಂತೆ ಹೆಸ್ಕಾಂ ಗ್ರಿಡ್‍ಗೆ ವರ್ಗಾವಣೆ ಮಾಡುವುದರ ಮೂಲಕ ವಿದ್ಯುತ್ ಗಳಿಕೆಯಲ್ಲಿ ಸ್ವಾವಲಂಬಿಯಾಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು. ಬ್ಯಾಂಕಿನ ಕಟ್ಟಡದ ಮೇಲ್ಛಾವಣಿಯು ಅತೀ ಎತ್ತರದಲ್ಲಿದ್ದು, ವಿಶಾಲವಾಗಿರುವುದರಿಂದ ಅತೀ ಹೆಚ್ಚು ಯುನಿಟ್ ವಿದ್ಯುತ್ ಉತ್ಪಾದಿಸಲು ಅನುಕೂಲವಾಗಲಿದೆ ಎಂದೂ ಅವರು ತಿಳಿಸಿದರು. 

ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಶೇಖ ಶಬ್ಬೀರ್ ಕಾದಿರ ಬಾಷಾ, ಆಡಳಿತ ಮಂಡಳಿಯ ನಿರ್ದೇಶಕರಾದ ಮಾಸ್ತಿ ಮೊಗೇರ್, ಅಬ್ದುಲ್ ಖಾಲಿದ್ ಸೌದಾಗರ್,  ಶ್ರೀಧರ ನಾಯ್ಕ, ಇಮ್ತಿಯಾಜ್ ಜುಬಾಪು, ಜಗದೀಶ ಪೈ, ಜಾಫರ ಸಾಧಿಕ್ ಶಾಬಂದ್ರಿ ಹಾಗೂ ಬ್ಯಾಂಕಿನ ಪ್ರಧಾನ ಕಾರ್ಯನಿರ್ವಾಹಕ ಎಸ್.ಅಬ್ದುಲ ರಜಾಕ್, ಸಹಾಯಕ ಪ್ರಧಾನ ಕಾರ್ಯನಿರ್ವಾಹಕ ಸುಭಾಷ ಎಮ್. ಶೆಟ್ಟಿ ಮತ್ತು ಪ್ರಧಾನ ಕಛೇರಿಯ ಕಾರ್ಯನಿರ್ವಾಹಕ ಶಂಭು ಹೆಗಡೆ ಉಪಸ್ಥಿತರಿದ್ದರು.  

 

Read These Next

ಕಾಂಗ್ರೆಸ್‌ನ ಅಭೂತಪೂರ್ವ ಕಾರ್ಯಗಳಿಗೆ ಶುಭಾಶಯ ತಿಳಿಸಿದ ಹಿಂದುತ್ವ ನಾಯಕ ಚಕ್ರವರ್ತಿ ಸೂಲಿಬೆಲೆ

“ಕೆಲವು ವಿಚಾರ ನಾನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ಕಾಂಗ್ರೆಸಿಗರಿಗೆ ಶುಭಾಶಯ ತಿಳಿಸುತ್ತೇನೆ. ನೀವು ...

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ; ಶೇ.73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ರಾಜ್ಯಾದ್ಯಂತ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.73.40ರಷ್ಟು ಉತ್ತೀರ್ಣತೆ ದಾಖಲಾಗಿದೆ. ...

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ; 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

ಈ ವರ್ಷದ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ 94 ರಷ್ಟು ಪ್ರಥಮ ಹಾಗೂ ದಕ್ಷಿಣ ಕಾಂಡ ಶೇ 92.12 ರಷ್ಟು ಫಲಿತಾಂಶದೊಂದಿಗೆ ದ್ವಿತೀಯ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...