ಭಟ್ಕಳ, ಆ ೧೬: ಎಪ್ಪತ್ತೊಂದನೇಯ ಸ್ವಾತಂತ್ರ್ಯೋತ್ಸವದ ಅಂಗವಾಗಿ ಭಟ್ಕಳ ತಾಲೂಕಾಡಳಿತದಿಂದ ಆಯೋಜಿಸಲ್ಪಟ್ಟ ‘ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಕ್ರಾಂತಿಕಾರಿಗಳ ಪಾತ್ರ ‘ ಎನ್ನುವ ತಾಲೂಕಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದಿ ನ್ಯೂ ಇಂಗ್ಲಿಷ್ ಪಿ.ಯು.ಕಾಲೇಜಿನ ಮಮತಾ ಇರಪ್ಪಾ ನಾಯ್ಕ ಪ್ರಥಮ ಮತ್ತು ಕುಸೂಮಾ ನಾರಾಯಣ ನಾಯ್ಕ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ವಿಜೇತರಿಗೆ ಮಾನ್ಯ ಶಾಸಕರಾದ ಶ್ರೀ ಮಂಕಾಳ ವೈಧ್ಯ ಅವರು ಪ್ರಶಸ್ತಿ ಪತ್ರ ಮತ್ತು ಸ್ಮರಣ ಕೆಯನ್ನು ನೀಡಿ ಗೌರವಿಸಿದರು.
ವಿದ್ಯಾರ್ಥಿಗಳ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುರೇಶ ನಾಯಕ್ ಟ್ರಸ್ಟಿ ಮೆನೇಜರ್ ಶ್ರೀ ರಾಜೇಶ ನಾಯಕ್ ಹಾಗೂ ಪ್ರಾಂಶುಪಾಲ ವಿರೇಂದ್ರ ಶಾನಭಾಗ ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.