ರಜೆ ಅಮಾನ್ಯಗೊಂಡಿದ್ದರಿಂದ ಸಿಐಎಸ್‌ಎಫ್ ಯೋಧನಿಂದ ನಾಲ್ವರು ಯೋಧರ ಗುಂಡಿಟ್ಟು ಕೊಲೆ

Source: S O News service | By Staff Correspondent | Published on 12th January 2017, 11:31 PM | National News | Incidents | Don't Miss |

ಬಹಾರ್ : ರಜೆಯ ವಿಚಾರಕ್ಕೆ ಸಂಬಂದಿಸಿ ಸಿಐಎಸ್‌ಎಫ್ ಜವಾನನೊಬ್ಬ ಇತರ ನಾಲ್ವರು ಯೋಧರನ್ನು  ಗುಂಡು ಹಾರಿಸಿ ಕೊಂದ ಘಟನೆ ಬಿಹಾರದ ಔರಂಗಬಾದಿನಲ್ಲಿ ನಡೆದಿದೆ. ಆರೋಪಿಯನ್ನು ಬಲಬೀರ್ ಎಂದು ಗುರುತಿಸಲಾಗಿದೆ.

 ಈ ಘಟನೆಯು ನಬಿನಗರ್ ಪವರ್ ಜೆನೆರೇಟಿಂಗ್ ಕಂಪೆನಿಯಲ್ಲಿ ನಡೆದಿದ್ದು ಆರೋಪಿಯನ್ನು ಬಂಧಿಸಲಾಗಿದೆ  ಎಂದು ಪೊಲೀಸ್ ಅಧೀಕ್ಷ ಡಾ.ಸತ್ಯಪ್ರಕಾಶ್ ತಿಳಿಸಿದ್ದಾರೆ.

 ಬಲಬೀರ್ ರಜೆಗಾಗಿ ಅರ್ಜಿ ಸಲ್ಲಿಸಿದ್ದ, ಆದರೆ ರಜೆ ಮಂಜೂರಾಗಲಿಲ್ಲ. ಈ ಸಂದರ್ಭದಲ್ಲಿ ಇನ್ನೋರ್ವ ಸಹೋದ್ಯೋಗಿ ಈ ಬಗ್ಗೆ ಅಪಹಾಸ್ಯ ಮಾಡಿದ್ದ. ಇದರಿಂದ ಸಿಟ್ಟಿಗೆದ್ದ ಬಲಬೀರ್ ಗುಂಡು ಹಾರಿಸಿದ್ದಾನೆ  ದಾಳಿಯಿಂದ ಬಚ್ಚಾ ಶರ್ಮಾ ಹಾಗೂ ಎನ್.ಮಿಶ್ರಾ ಇಬ್ಬರು ಯೋಧರು ಸ್ಥಳದಲ್ಲೇ ಮೃತ ಪಟ್ಟರೆ ಅರವಿಂದ್ ಕುಮಾರ್ ಮತ್ತು ಜಿ.ಎಸ್.ರಾಮ್ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ ಎಂದು ಡಾ.ಸತ್ಯಪ್ರಕಾಶ್ ತಿಳಿಸಿದ್ದಾರೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...