ಮುರ್ಡೇಶ್ವರ:ಮೀನು ಲಾರಿ ಕಾರು ಮುಖಾಮುಖಿ ಡಿಕ್ಕಿ ಒರ್ವ ಸ್ಥಳದಲ್ಲಿ ಸಾವು 

Source: sonews | By MV Bhatkal | Published on 10th September 2017, 8:59 PM | Coastal News | Don't Miss |

ಭಟ್ಕಳ: ಕೇರಳದಿಂದ ದೇವಸ್ಥಾನಗಳಿಗೆ ಬಂದಿದ್ದ ಕಾರೊಂದು ಮುರ್ಡೇಶ್ವರ ಬಸ್ತಿಯಲ್ಲಿ ಲಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಓರ್ವರು ಮೃತ ಪಟ್ಟು ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. 
ಕೇರಳದಿಂದ ಎರಡು ಕಾರುಗಳಲ್ಲಿ ದೇವಸ್ಥಾನಗಳಿಗೆ ಬಂದಿದ್ದ ತಂಡ ಕೊಲ್ಲೂರಿಗೆ ಹೋಗಿ ಅಲ್ಲಿಂದ ಮುರ್ಡೇಶ್ವರಕ್ಕೆ ಬಂದಿದೆ.  ಮುರ್ಡೇಶ್ವರದಿಂದ ವಾಪಾಸು ಹೋಗುತ್ತಿರುವ ಸಂದರ್ಭದಲ್ಲಿ ಬಸ್ತಿಯಲ್ಲಿ ಕಾರು ಮತ್ತು ಲಾರಿಯ ನಡುವೆ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ  ಭಾಸ್ಕರನ್ (70) ಎನ್ನುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಕಾರಿನ ಚಾಲಕ ಸರೀಶ್ (34), ಹಾಗೂ ಪ್ರಯಾಣಿಕ ರವೀಂದ್ರನ್ (65) ಹಾಗೂ ಶೆಜು (40) ಗಂಭೀರ ಗಾಯಗೊಂಡಿದ್ದು ಪ್ರಥಮ ಚಿಕಿತ್ಸೆಯನ್ನು ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಬಾಗ ಸಂಪೂರ್ಣ ಜಖಂ ಗೊಂಡಿದೆ. ಸ್ಥಳಕ್ಕೆ ಸಿ.ಪಿ.ಐ. ಸುರೇಶ ನಾಯಕ ಭೇಟಿ ನೀಡಿ ಮಾಹಿತಿ ಪಡೆದರು. ಇನ್ನೋಂದು ಕಾರು ಇದರ ಹಿಂದೆಯೇ ಬರುತ್ತಿದ್ದು ಡಿಕ್ಕಿಯಾಗಿದ್ದನ್ನು ಕಣ್ಣಾರೆ ಕಂಡ ಅವರಿಗೆ ಮಾತೇ ಹೊರಡದಂತಾಗಿದೆ.  ಎರಡೂ ಕಾರಿನಲ್ಲಿದ್ದವರು ಪರಸ್ಪರ ಸಂಬಂಧಿಕರು ಎಂದೂ ತಿಳಿದು ಬಂದಿದೆ. ಮುರ್ಡೇಶ್ವರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...