ಅತ್ಯಾಚಾರಿ ಗುರ್ಮಿತ್ ಸಿಂಗ್ ಗೆ ೧೦ ವರ್ಷ ಜೈಲು

Source: sonews | By Staff Correspondent | Published on 28th August 2017, 5:01 PM | National News | Special Report | Don't Miss |

ರೋಹ್ಟಕ್:ಇಬ್ಬರು ಸಾಧ್ವಿಗಳ ಮೇಲೆ ಮೂರು ವರ್ಷಗಳ ಕಾಲ ನಿರಂತರ ಅತ್ಯಾಚಾರ ನಡೆಸಿರುವ ಪ್ರಕರಣದಲ್ಲಿ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮಿತ್ ಸಿಂಗ್ ಗೆ ಸಿಬಿಐ ವಿಶೇಷ   ನ್ಯಾಯಾಲಯ 10  ವರ್ಷ ಜೈಲು ಶಿಕ್ಷೆ ವಿಧಿಸಿದೆ.

 

ರೋಹ್ಟಕ್ ನ ಸುನಾರಿಯಾ ಜೈಲಿನ ಆವರಣದಲ್ಲಿರುವ ಜೈಲು ಸಿಬಿಐನ ವಿಶೇಷ ನ್ಯಾಯಾಲಯದಲ್ಲಿ ಇಂದು   ನ್ಯಾಯಾಧೀಶ  ಜಗದೀಪ್ ಸಿಂಗ್ ಅವರು  ಗುರ್ಮಿತ್ ಸಿಂಗ್  ಶಿಕ್ಷೆಯ ಪ್ರಮಾಣ ನಿರ್ಧರಿಸಲು ಎರಡೂ ಕಡೆಯ ವಕೀಲರ ವಾದವನ್ನು ಆಲಿಸಿದ ಬಳಿಕ ಶಿಕ್ಷೆಯ ಪ್ರಮಾಣ ಪ್ರಕಟಿಸಿದರು. ಪ್ರಾಸಿಕ್ಯೂಷನ್ ಪರ ವಾದವನ್ನು ಎತ್ತಿ ಹಿಡಿದ  ನ್ಯಾ. ಜಗದೀಪ್ ಸಿಂಗ್ ದೋಷಿ ಗುರ್ಮಿತ್ ಸಿಂಗ್ ಗೆ ಐಪಿಸಿ  ಸೆಕ್ಷನ್ 376(ಅತ್ಯಾಚಾರ) , 506 (ಜೀವ ಬೆದರಿಕೆ) , 511 ರ ಪ್ರಕಾರ ಅಪರಾಧಕ್ಕೆ ಯತ್ನದ ಹಿನ್ನೆಲೆಯಲ್ಲಿ ಗುರ್ಮಿತ್ ಸಿಂಗ್ ಗೆ  ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

  ಮೊದಲು ಗುರ್ಮಿತ್ ಪರ ವಕೀಲರಿಗೆ ವಾದ ಮಂಡಿಸಲು ಅವಕಾಶ ನೀಡಲಾಗಿತ್ತು. " ಗುರ್ಮಿತ್ ವಯಸ್ಸು , ಆರೋಗ್ಯ  ಪರಿಗಣಿಸಿ  ಕಡಿಮೆ ಶಿಕ್ಷೆ ಕೊಡಿ'' ಎಂದು ಗುರ್ಮಿತ್ ಪರ ವಕೀಲ ಎಸ್ ಕೆ ಗಾರ್ಗ್ ನರ್ವಾನ್ ವಾದ  ಮಂಡಿಸಿದ್ದರು.

ಪ್ರಾಸಿಕ್ಯೂಷನ್ ಪರ ವಕೀಲರು  "ಅತ್ಯಾಚಾರ  ಪ್ರಕರಣದ ಅಪರಾಧಿ ಗುರ್ಮಿತ್ ಗೆ ಅತೀ ಹೆಚ್ಚಿನ ಪ್ರಮಾಣದ ಶಿಕ್ಷೆ,  ಜೀವಾವಧಿ ಶಿಕ್ಷೆ ನೀಡುವಂತೆ ವಾದಿಸಿದರು.  

ವಿಚಾರಣೆ  ನಡೆಯುವ ಹೊತ್ತಿಗೆ ಗುರ್ಮಿತ್ ಸಿಂಗ್ ನ್ಯಾಯಾಲಯದಲ್ಲಿ ಕೈ ಕಟ್ಟಿ ನಿಂತಿದ್ದ ಗುರ್ಮಿತ್ ತನ್ನ ಬಗ್ಗೆ ಕನಿಕರ ತೋರುವಂತೆ ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟು ಮನವಿ ಮಾಡಿದ್ದನು.  ಆದರೆ ನ್ಯಾಯಾಲಯವು ಆತನ ಮನವಿಯನ್ನು ತಿರಸ್ಕರಿಸಿತು. 

ಶಿಕ್ಷೆಯ ಪ್ರಮಾಣ ಪ್ರಕಟಗೊಂಡ ಬೆನ್ನೆಲ್ಲೆ ಗುರ್ಮಿತ್ ಸಿಂಗ್ ನನ್ನು ವೈದ್ಯಕೀಯ ತಪಾಸಣೆ ಗೊಳಪಡಿಸಲಾಯಿತು.

Read These Next

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...