ಗಣಿತ ಕಲಿಕೆ ವೇಳೆ ಮಗುವಿಗೆ ಥಳಿತದ ವೀಡಿಯೊ ವೈರಲ್

Source: sonews | By Staff Correspondent | Published on 20th August 2017, 10:48 PM | State News | National News | Special Report | Don't Miss | NewsVoir |

ಹೊಸದಿಲ್ಲಿ: ಪುಟ್ಟ ಮಗುವೊಂದು ಗಣಿತ ಅಭ್ಯಾಸ ಮಾಡುತ್ತಿದ್ದ ವೇಳೆ ಮಗುವಿಗೆ ಬೈದು, ಹೊಡೆಯುತ್ತಿರುವ ಘಟನೆ ಕುರಿತ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹಿಂಸೆ ವಿರುದ್ಧ ಸಮಾಜದ ವಿವಿಧೆಡೆಗಳಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಕೂಡಾ ಮಕ್ಕಳ ಮೇಲಿನ ಇಂತಹ ದೌರ್ಜನ್ಯವನ್ನು ಖಂಡಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಈ ವೀಡಿಯೊ ಹಾಕಿದವರ ಪೈಕಿ ಕೊಹ್ಲಿ ಕೂಡಾ ಸೇರಿದ್ದು, "ಮಗುವಿನ ನೋವು ಹಾಗೂ ಸಿಟ್ಟನ್ನು ನಿರ್ಲಕ್ಷಿಸಿ, ಕೆಲವರ ’ಇಗೊ’ (ಪ್ರತಿಷ್ಠೆ) ಮಗುವನ್ನು ಕಲಿಯುವಂತೆ ಮಾಡಿದೆ. ಇಲ್ಲಿ ಅನುಕಂಪಕ್ಕೆ ಜಾಗವೇ ಇಲ್ಲ. ಇದು ಆಘಾತಕಾರಿ ಹಾಗೂ ಬೇಸರದ ಸಂಗತಿ. ಇಂಥ ಹಿಂಸೆಯಿಂದ ಮಗು ಖಂಡಿತಾ ಕಲಿಯಲಾರದು. ಇದು ಹೃದಯವಿದ್ರಾವಕ" ಎಂದು ಕೊಹ್ಲಿ ಬರೆದಿದ್ದಾರೆ.

ಅರು ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊ ಪೋಸ್ಟ್ ಮಾಡಿದ ಕೆಲವೇ ನಿಮಿಷಗಳಲ್ಲಿ 19 ಲಕ್ಷ ಮಂದಿ ಇದನ್ನು ವೀಕ್ಷಿಸಿದ್ದಾರೆ. ಕೊಹ್ಲಿಗೆ 15.1 ಲಕ್ಷ ಅನುಯಾಯಿಗಳಿದ್ದಾರೆ. 18 ಸಾವಿರ ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಆದರೆ 69 ಸೆಕೆಂಡ್‌ನ ಈ ವೀಡಿಯೊವನ್ನು ಮೊಟ್ಟಮೊದಲು ಯಾವಾಗ ಪೋಸ್ಟ್ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ.

ಐದು ವರ್ಷಕ್ಕಿಂತ ಕೆಳಗಿನ ಮಗು ಬೆಡ್ ಮೇಲೆ ಪುಸ್ತಕ ಹಿಡಿದುಕೊಂಡು ಲೆಕ್ಕ ಕಲಿಯುತ್ತಾ ಅಂಕಿಗಳನ್ನು ಕಂಠಪಾಠ ಮಾಡುತ್ತಿದೆ. ಆ ಮಗುವಿಗೆ ಮಹಿಳೆಯೊಬ್ಬರು ಬೈಯುತ್ತಿದ್ದು, ಪುಟ್ಟ ಮಗು ಧಾರಾಕಾರ ಕಣ್ಣೀರು ಸುರಿಸುತ್ತಿದೆ. ದೈನ್ಯದಿಂದ ಬೇಡುತ್ತಿರುವ ಮಗುವನ್ನು ಮಹಿಳೆ ಹೊಡೆಯುತ್ತಿದ್ದಾಳೆ.

ಕ್ರಿಕೆಟರ್ ಶಿಖರ್ ಧವನ್ ಹಾಗೂ ರಾಬಿನ್ ಉತ್ತಪ್ಪ ಅವರೂ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಫೇಸ್‌ಬುಕ್ ಪೇಜ್‌ನಲ್ಲಿ ವೈರಲ್ ಸರ್ಕೇಸಮ್ ವೀಡಿಯೊವನ್ನು 17 ಗಂಟೆಗಳಲ್ಲಿ 52 ಸಾವಿರ ಮಂದಿ ವೀಕ್ಷಿಸಿದ್ದಾರೆ.

ಕೃಪೆ:ವಾರ್ತಾಭಾರತಿ

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

'ದಾರಿ ತಪ್ಪಿಸುವ ಜಾಹೀರಾತು' ಸಾರ್ವಜನಿಕ ಕ್ಷಮಾಪಣೆ ಕೇಳಲು ರಾಮ್‌ದೇವ್‌ಗೆ 1 ವಾರದ ಗಡುವು

ಅಲೋಪತಿ ವೈದ್ಯಕೀಯ ಪದ್ಧತಿಯ ವಿರುದ್ಧ ಅಪಪ್ರಚಾರ ಮಾಡದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಯೋಗ ಗುರು ರಾಮ್ ದೇವ್ ಮತ್ತು ಪತಂಜಲಿ ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...

ಜಿಲ್ಲೆಯಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯವ ನೀರು ಪೂರೈಸಲು ಅಗತ್ಯ ಕ್ರಮ : ಸಚಿವ ಮಧು ಎಸ್ ಬಂಗಾರಪ್ಪ

ಶಿವಮೊಗ್ಗ : ಪ್ರಸಕ್ತ ಸಾಲಿನ ಮುಂಗಾರು ವಿಫಲವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ...