ಕ್ರಿಕೇಟ್ ಶ್ರೇಷ್ಠ ನಾಯಕ ವಿವಾದ: ರವಿ ಶಾಸ್ತಿ ಹೇಳಿಕೆ ಬಾಲಿಷಾ- ‌ಅಝರ್

Source: S O News service | By Staff Correspondent | Published on 11th January 2017, 6:28 PM | National News | Sports News | Don't Miss |

ಹೊಸದಿಲ್ಲಿ: ಭಾರತದ ಶ್ರೇಷ್ಠ ನಾಯಕ ಯಾರು ಎಂಬ ಕುರಿತು ರವಿ ಶಾಸ್ತ್ರಿ ನೀಡಿರುವ ಹೇಳಿಕೆ ‘ಮೂರ್ಖತನದಿಂದ ಕೂಡಿದೆ’ ಎಂದು ಭಾರತದ ಮಾಜಿ ನಾಯಕ ಮುಹಮ್ಮದ್ ಅಝರುದ್ದೀನ್ ಕಿಡಿಕಾರಿದ್ದಾರೆ.

ರವಿ ಶಾಸ್ತ್ರಿ ಅವರು ಇತ್ತೀಚೆಗೆ ಭಾರತದ ಶ್ರೇಷ್ಠ ನಾಯಕರು ಯಾರು ಎಂಬ ಕುರಿತು ನೀಡಿರುವ ಹೇಳಿಕೆ ಎಲ್ಲರನ್ನು ಅಚ್ಚರಿಗೊಳಿಸಿತ್ತು. ಎಂ.ಎಸ್. ಧೋನಿ ಭಾರತ ಕಂಡ ಶ್ರೇಷ್ಠ ನಾಯಕ ಎಂದು ಬಣ್ಣಿಸಿದ್ದ ಶಾಸ್ತ್ರಿ ಶ್ರೇಷ್ಠ ನಾಯಕರ ಪಟ್ಟಿ ಮಾಡಿದ್ದರು. ಅದರಲ್ಲಿ ಸೌರವ್ ಗಂಗುಲಿ ಹೆಸರನ್ನು ಕೈಬಿಟ್ಟಿದ್ದರು. ಕಪಿಲ್‌ದೇವ್, ಅಜಿತ್ ವಾಡೇಕರ್ ಹಾಗೂ ಎಂಎಸ್‌ಕೆ ಪಟೌಡಿ ಹೆಸರನ್ನು ಪಟ್ಟಿಯಲ್ಲಿ ನಮೂದಿಸಿದ್ದರು.

ಭಾರತೀಯ ಕ್ರಿಕೆಟ್‌ನಲ್ಲಿ ಧೋನಿಯ ನಾಯಕತ್ವದ ಸಾಧನೆಗೆ ಯಾರೊಬ್ಬರೂ ಹೋಲಿಕೆಯಾಗುವುದಿಲ್ಲ್ಲ ಎಂದು ರವಿ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದರು.

ಶಾಸ್ತ್ರಿಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಅಝರುದ್ದೀನ್,‘‘ಇಂತಹ ಹೇಳಿಕೆ ಅತ್ಯಂತ ಮೂರ್ಖತನದ್ದು. ಶಾಸ್ತ್ರಿ ಅವರು ಭಾರತದ ಶ್ರೇಷ್ಠ ನಾಯಕರ ಹೆಸರನ್ನು ಉಲ್ಲೇಖಿಸುವಾಗ ವೈಯಕ್ತಿಕ ತಾರತಮ್ಯವನ್ನು ತೋರ್ಪಡಿಸಬಾರದು. ಭಾರತೀಯ ಕ್ರಿಕೆಟ್‌ಗೆ ಸಾಕಷ್ಟು ಕೊಡುಗೆ ನೀಡಿದವರನ್ನು(ಗಂಗುಲಿ) ಅವಮಾನಿಸಬಾರದು ಎಂದು ‘ದಿ ಹಿಂದೂಸ್ತಾನ್ ಟೈಮ್ಸ್’ಗೆ ಅಝರುದ್ದೀನ್ ತಿಳಿಸಿದ್ದಾರೆ.

ಶಾಸ್ತ್ರಿಯ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ್ದ ಶ್ರೀಲಂಕಾದ ಸ್ಪಿನ್ ದಂತಕತೆ ಮುತ್ತಯ್ಯ ಮುರಳೀಧರನ್, ಗಂಗುಲಿ ಶ್ರೇಷ್ಠ ನಾಯಕ ಎಂದು ಬಣ್ಣಿಸಿದ್ದರು.

‘‘ಖಂಡಿತವಾಗಿಯೂ ಗಂಗುಲಿ ಭಾರತದ ನಾಯಕನಾದ ಬಳಿಕ ಉತ್ತಮ ಕೆಲಸ ಮಾಡಿದ್ದಾರೆ. ನನ್ನ ಪ್ರಕಾರ ಅವರು ಶ್ರೇಷ್ಠ ನಾಯಕ’’ ಎಂದು ಬಂಗಾಳ ಕ್ರಿಕೆಟ್ ಸಂಸ್ಥೆಯ ವಿಷನ್ 2020ರ ಕಾರ್ಯಕ್ರಮದ ಸ್ಪಿನ್ ಬೌಲಿಂಗ್ ಸಲಹೆಗಾರನಾಗಿರುವ ಮುರಳಿ ಹೇಳಿದರು.

ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್ ಆಗಿದ್ದ ಅಝರುದ್ದೀನ್ ಭಾರತದ ಪರ 99 ಟೆಸ್ಟ್ ಪಂದ್ಯಗಳನ್ನು ಆಡಿದ್ದು 24 ಶತಕಗಳ ಸಹಿತ 6,000 ರನ್ ಗಳಿಸಿದ್ದರು.

ಅಝರುದ್ದೀನ್ ಮಂಗಳವಾರ ಹೈದರಾಬಾದ್ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಮೂಲಕ ವಿಶ್ವ ಕ್ರಿಕೆಟ್‌ನ ರಾಜಕೀಯಕ್ಕೆ ಪ್ರವೇಶಿಸುವ ಸೂಚನೆ ನೀಡಿದ್ದಾರೆ. ಲೋಧಾ ಸಮಿತಿಯ ಶಿಫಾರಸುಗಳನ್ನ ಜಾರಿಗೆ ತರುವಂತೆ ಸುಪ್ರೀಂಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಅರ್ಷದ್ ಅಯೂಬ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...