ಸ್ವೀಪ್ ವತಿಯಿಂದ ಚೆಕ್ ಪೋಸ್ಟ್‍ಗಳಲ್ಲಿ ಚುನಾವಣಾ ತಪಾಸಣಾ ಕೇಂದ್ರ ತರೆದು ನಾಗರೀಕರಿಗೆ ಅರಿವು

Source: so news | By MV Bhatkal | Published on 17th March 2019, 11:16 PM | State News | Don't Miss |

ಮೈಸೂರು :ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ 2019 ರ ಏಪ್ರಿಲ್ 18 ರಂದು ನಡೆಯಲಿರುವ ಮೈಸೂರು ಮತ್ತು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಇರುವ ಚೆಕ್ ಪೋಸ್ಟ್‍ಗಳಲ್ಲಿ ಚುನಾವಣಾ ತಪಾಸಣಾ ಕೇಂದ್ರ(ಎಸ್.ಎಸ್.ಟಿ)ಗಳನ್ನು ತೆರೆಯಲಾಗುತ್ತಿದೆ.
ನೈತಿಕ ಚುನಾವಣ ಬೆಂಬಲಿಸಿ ಎಂಬ ಅಭಿಯಾನ ಕೈಗೊಳ್ಳಲೂ ಚೆಕ್ ಪೋಸ್ಟ್‍ಗಳಲ್ಲಿ ಚುನಾವಣೆಯ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ತಂಡಗಳು ರಸ್ತೆಯಲ್ಲಿ ಸಂಚಾರ ಮಾಡುವ ನಾಗರೀಕರಿಗೆ ಮತದಾನದ ಅರಿವು ಮೂಡಿಸಲು ಕ್ರಮವಹಿಸಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ರಸ್ತೆ ಮೂಲಕ ಪ್ರತಿನಿತ್ಯ ಸಂಚಾರ ನಡೆಸುವವರೂ 18 ವರ್ಷ ತುಂಬಿರುವ ಮತದಾರರ ಪಟ್ಟಿಯಲ್ಲಿ ನೋದಾಯಿಸಿ ಕೊಂಡಿರುವವರು ಚುನಾವಣ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನದ ಕಡೆ ನಮ್ಮ ನಡೆ , ನಮ್ಮ ಮತ ನಮ್ಮ ಹಕ್ಕು , ಪ್ರಜಾಪ್ರಭುತ್ವದ ಉಳಿವಿಗೆ ಮತ ಚಲಾಯಿಸಿ, ಜಾಗೃತ ಮತದಾರ ಪ್ರಜಾ ಪ್ರಭುತ್ವದ ನೇತಾರ ಹೀಗೆ ಅರಿವು ಮೂಡಿಸುವ ಅಭಿಯಾನವನ್ನು ಕೈಗೊಂಡಿದೆ.
1950 ಸಂಖ್ಯೆಗೆ ಕರೆ ಮಾಡಿ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯಾ, ತಮ್ಮ ಮತದಾನ ಕೇಂದ್ರ ಹಾಗೂ ಮತದಾರರ ಪಟ್ಟಿಯಲ್ಲಿ ತಮ್ಮ ವಿಳಾಸ, ಹೆಸರುಗಳ ಬಗ್ಗೆ ಪರಿಶೀಲನೆ ಮಾಡಿಕೊಳ್ಳಬಹುದು ಎಂಬ ಮಾಹಿತಿಯನ್ನು ನಾಗರೀಕರಿಗೆ ತಿಳಿಸಲಾಗುತ್ತದೆ.
ಯಾವುದೇ ಮತದಾರ ಮತದಾನದಿಂದ ಹೊರಗುಳಿಬಾರದು, ಮತಚಲಾಯಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ತಪ್ಪದೇ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಬೇಕು. ನಿಮ್ಮ ಮತ ಅಮೂಲ್ಯ ಅದನ್ನು ವ್ಯರ್ಥಮಾಡಬೇಡಿ ಸೂಕ್ತ ಸಮಾಜಿಕ ಕಳಕಳಿಯುಳ್ಳ ವ್ಯಕ್ತಿಯನ್ನು ಆರಿಸಲು ಮತದಾನ ಅಸ್ತ್ರವಾಗಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...