ಭಟ್ಕಳ: ಸ್ವತಂತ್ರ್ಯೋತ್ಸವದ ಅಂಗವಾಗಿ ಇಲ್ಲಿನ ಮಜ್ಲಿಸೆ-ಇಸ್ಲಾಹ್-ವ-ತಂಝೀಮ್ ಸಂಸ್ಥೆಯಿಂದ ಮದರಸಾ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಉದು ಮತ್ತು ನವಾಯತಿ ಭಾಷೆಯಲ್ಲಿ ದೇಶ ಪ್ರೇಮವನ್ನು ಸಾರುವ ಗೀತೆಗಳ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ತಂಝೀಮ್ ಸಂಸ್ಥೆಯ ಶೈಕ್ಷಣಿಕ ಮತ್ತು ಸಾಂಸ್ಕೃತಿ ಸಮಿತಿ ಸಂಚಾಲಕ ಎಸ್.ಎಂ.ಅಬ್ದುಲ್ ಅಝೀಮ್ ಅಂಬಾರಿ ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಭಟ್ಕಳ ತಾಲೂಕಿನ 11 ಉರ್ದು ಮತ್ತು ಆಂಗ್ಲ ಮಾಧ್ಯಮ ಶಾಲೆ ಹಾಗೂ ಮದರಸಾ ಶಿಕ್ಷಣದ ವಿದ್ಯಾರ್ಥಿಗಳಿಗಾಗಿ ಈ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು ಪ್ರತಿ ಶಾಲೆಯಿಂದ ಉರ್ದು ಹಾಗೂ ನವಾಯತಿ ಭಾಷೆಯಲ್ಲಿ ನಾಲ್ಕು ವಿದ್ಯಾರ್ಥಿಗಳ 2 ತಂಡಗಳು ಭಾಗವಹಿಸಲು ಅವಕಾಶವಿದೆ. ಆಸಕ್ತ ಶಾಲಾ ಮುಖ್ಯಸ್ಥರು ತಮ್ಮ ಶಾಲೆಯನ್ನು ನೊಂದಾಯಿಸಿಕೊಳ್ಳಬೇಕೆಂದು ಅವರು ಕೋರಿದ್ದಾರೆ. ಪ್ರಥಮ,ದ್ವಿತೀಯಾ ಹಾಗೂ ತೃತೀಯಾ ಬಹುಮಾನಗಳೊಂದಿಗ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿಯನ್ನು ನೀಡಲಾಗುವುದು.
ತಂಝೀಮ್ ಕಾರ್ಯಾಲಯದ ಸಭಾಂಗಣದಲ್ಲಿ ರಾತ್ರಿ 9ಗಂಟೆಗೆ ಸ್ಪರ್ಧಾ ಕಾರ್ಯಕ್ರಮ ಆರಂಭಗೊಳ್ಳುವುದು. ಜಾಮಿಯಾ ಇಸ್ಲಾಮಿಯಾ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಮೌಲಾನ ಮಖ್ಬೂಲ್ ಆಹ್ಮದ್ ನದ್ವಿ ಕೋಬಟ್ಟೆ, ಅಂಜುಮನ್ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಕೆ.ಸಿ.ನಝೀರ್ ಆಹ್ಮದ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ. ಹೆಚ್ಚಿನ ವಿವರಗಳಿಗಾಗಿ 9448629398 ಸಂಪರ್ಕಿಸಬೇಕೆಂದು ಕೋರಿದ್ದಾರೆ.