ಆರ್ಯವೈಶ್ಯ ಮಹಾಮಂಡಳಿಯಿಂದ ಮುಖ್ಯಮಂತ್ರಿಗಳಿಗೆ ಅಭಿನಂದನೆ

Source: so news | By MV Bhatkal | Published on 7th July 2018, 7:20 PM | State News |

ಕೋಲಾರ:ಕರ್ನಾಟಕದ ಇತಿಹಾಸದಲ್ಲಿ ಪ್ರಪಥಮ ಬಾರಿಗೆ ಆರ್ಯವೈಶ್ಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಶ್ರಮಪಟ್ಟವರಲ್ಲಿ ವಿಧಾಪರಿ ಪರಿಷತ್ ಸದಸ್ಯರಾದ ಡಾ|| ಟಿ.ಎ.ಶರವಣರವರು ಪ್ರಮುಖ ಪಾತ್ರವಹಿಸಿದ್ದು, ಅವರ ಶ್ರಮದ ಫಲವಾಗಿ ಇಂದು ಆರ್ಯವೈಶ್ಯ ಜನಾಂಗಕ್ಕೆ ಉಪಕಾರವಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿ ಜಿಲ್ಲಾಧ್ಯಕ್ಷರಾದ ಅಮರ್‍ನಾಥ್ ತಿಳಿಸಿದರು

ನಗರದ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ಆರ್ಯವೈಶ್ಯ ಸಮುದಾಯದವರು ಪೂಜೆ ಸಲ್ಲಿಸಿ ನಂತರ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಹಿಳೆಯರು, ಮಹನೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಛೇರಿ ತಲುಪಿ ಪ್ರಭಾರ ಜಿಲ್ಲಾಧಿಕಾರಿ ಶುಭಕಲ್ಯಾಣ್‍ರವರ ಮುಖಾಂತರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿರವರಿಗೆ ಅಭಿನಂಧನಾ ಪತ್ರವನ್ನು ಸಲ್ಲಿಸಿದರು.

ಮುಂದಿನ ದಿನಗಳಲ್ಲಿ ಆರ್ಯವೈಶ್ಯ ಯುವ ಸಮುದಾಯಕ್ಕೆ ಮೀಸಲಾತಿ ಮುಂತಾದ ಸೌಲಭ್ಯಗಳನ್ನು ಸಹ ಕಲ್ಪಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ನೇತೃತ್ವ ವಹಿಸಿದ್ದ ವಿ.ಪಿ.ಮುರಳಿಧರ್, ನಾಗಣಿ, ರವಿ, ಡಿ.ಜೆ.ಮನೋಹರ್, ಎ.ಎಂ. ಶ್ರೀನಿವಾಸಮೂರ್ತಿ, ರೂಪೇಶ್ ಮತ್ತು ವಾಸವಿ ಕ್ಲಬ್‍ನ ಓಂ ಪ್ರಕಾಶ್, ವಿ.ಪಿ.ಸೋಮಶೇಖರ್,ಸಿ.ಬಿ.ಎಸ್.ಆರ್.ಗುಪ್ತ ಅಲ್ಲದೆ ಮಹಿಳಾ ವಿಭಾಗದ ಭಾನುರೇಖಾ, ಶೋಭ, ದೀಪಿಕಾಲಕ್ಷ್ಮಿ ಮುಂತಾದವರು ಭಾಗವಹಿಸಿದ್ದರು

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...