ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 600 ಮನೆಗಳ ನಿರ್ಮಾಣ- ದಿಂಬಾಲ ಅಶೋಕ್‌

Source: sonews | By Staff Correspondent | Published on 1st November 2018, 8:20 PM | State News | Don't Miss |

ಶ್ರೀನಿವಾಸಪುರ: ಪಟ್ಟಣದಲ್ಲಿ ಸರ್ವರಿಗೂ ಸೂರು ಯೋಜನೆಯಡಿ ವಿವಿಧ ಕೊಳೆಗೇರಿಗಳಲ್ಲಿ ವಾಸಿಸುತ್ತಿರುವ ವಸತಿ ರಹಿತರಿಗೆ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 600 ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಪಿಎಲ್ಡಿ ಬ್ಯಾಂಕ್ಅಧ್ಯಕ್ಷ ದಿಂಬಾಲ ಅಶೋಕ್ಹೇಳಿದರು.

ಪಟ್ಟಣದ ಪಿಎಲ್ಡಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕಾಂಗ್ರೆಸ್ಮುಖಂಡರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಂಜೂರಾಗಿರುವ ಮನೆಗಳ 600 ಮನೆಗಳ ಪೈಕಿ ಕಟ್ಟೆ ಕೆಳಗಿನ ಪಾಳ್ಯಕ್ಕೆ 67, ಜನಜೀವನ ಪಾಳ್ಯಕ್ಕೆ 148, ಜಾಕೀರ್ಹುಸೇನ್ಮೊಹಲ್ಲಾಗೆ 150, ಸಂತೆ ಮೈದಾನಕ್ಕೆ 184 ಹಾಗೂ ಅಂಬೇಡ್ಕರ್ಪಾಳ್ಯಕ್ಕೆ 51 ಮನೆಗಳನ್ನು ಹಂಚಿಕೆ ಮಾಡಲಾಗಿದೆ. .2 ರಂದು ಬೆಳಿಗ್ಗೆ 11.30 ಗಂಟೆಗೆ ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್ಕುಮಾರ್ಅವರು 600 ಮನೆಗಳ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವರು ಎಂದು ಹೇಳಿದರು.

ಪುರಸಭಾ ಸದಸ್ಯ ಬಿ.ಎಲ್‌.ಪ್ರಕಾಶ್ಮಾತನಾಡಿ, ನಿಯಮಾನುಸಾರ ಪಕ್ಷಾತೀತವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಆಯಾ ಕೊಳಚೆ ಪ್ರದೇಶದಲ್ಲಿ ವಾಸಿಸುವ ವಸತಿ ರಹಿತರಿಗೆ ಮಾತ್ರ ಸೌಲಭ್ಯ ಕಲ್ಪಿಸಲಾಗಿದೆ. ಸಂತೆ ಮೈದಾನದಲ್ಲಿ ನೆಲ ಹಾಗೂ ಮಹಡಿ ಮನೆಗಳನ್ನು ನಿರ್ಮಿಸಲಾಗುವುದು. ಮನೆ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ರೂ.10ಸಾವಿರ ಹಾಗೂ ಇತರರು ರೂ.15 ಸಾವಿರ ಶುಲ್ಕ ನೀಡಬೇಕಾಗುತ್ತದೆ. ಮನೆ ನಿರ್ಮಿಸಿಕೊಡುವುದರ ಜೊತೆಗ ಅಗತ್ಯವಾದ ಎಲ್ಲ ಮೂಲ ಸೌಲಭ್ಯ ಒದಗಿಸಲಾಗುವುದು ಎಂದು ಹೇಳಿದರು.

ಪುರಸಭಾಧ್ಯಕ್ಷ ಮುಕ್ತಿಯಾರ್ ಅಹ್ಮದ್ಮಾತನಾಡಿ, ಪುರಸಭೆಯ ವ್ಯಾಪ್ತಿಗೆ ಸೇರಿಸಿಕೊಳ್ಳಲಾಗಿರುವ 4 ಗ್ರಾಮಗಳ ಅಭಿವೃದ್ಧಿಗೆ ಸರ್ಕಾರ ರೂ.4.20 ಕೋಟಿ ಮಂಜೂರು ಮಾಡಿದೆ. ಹಣದಲ್ಲಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗುವುದು. ರಾಜೀವ್ಗಾಂಧಿ ಗೃಹನಿರ್ಮಾಣ ಯೋಜನೆಯಡಿ 500ಮನೆಗಳು ಮಂಜೂರಾಗಿದ್ದು, ನಿವೇಶನ ಹೊಂದಿರುವ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು ಎಸ್ಸಿ, ಎಸ್್ಟಿಗೆ ತಲಾ ರೂ.3.30 ಲಕ್ಷ ಹಾಗೂ ಇತರರಿಗೆ ರೂ.2.70 ಲಕ್ಷ ನೀಡಲಾಗುವುದು ಎಂದು ಹೇಳಿದರು.

ಎಪಿಎಂಸಿ ಅಧ್ಯಕ್ಷ ಎನ್‌.ರಾಜೇಂದ್ರ ಪ್ರಸಾದ್‌, ಬ್ಲಾಕ್ಕಾಂಗ್ರೆಸ್ಅಧ್ಯಕ್ಷ ಅಕ್ಬರ್ಷರೀಫ್‌, ಮುಖಂಡರಾದ ಗಂಗಾಧರ್‌, ವೆಂಕಟರೆಡ್ಡಿ, ಮುನಿರಾಜು, ಸರ್ದಾರ್, ನವಾಬ್‌, ಜಯಣ್ಣ

 

 

 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...