ಬೇಲಿಗದ್ದೆ ತೆರದ ಬಾವಿಯಲ್ಲಿ ಅನುಮಾಸ್ಪದ ರೀತಿಯಲ್ಲಿ ಮೃತ ದೇಹ ಪತ್ತೆ

Source: sonews | By Staff Correspondent | Published on 4th September 2018, 10:36 PM | Coastal News | Don't Miss |

ಭಟ್ಕಳ: ಅ.30ರಂದು ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ಸೋಮವಾರ ಬೇಲಿಗದ್ದೆ 2ನೆ ಕ್ರಾಸ್ ನ ಅರಣ್ಯ ಜಾಗದ ತೆರೆದ ಬಾವಿಯೊಂದರಲ್ಲಿ ಅನುಮಾಸ್ಪದ ರೀತಿಯಲ್ಲಿ ದೊರೆತಿದ್ದು ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಶಂಕೆ ಕುಟುಂಬದ ಸದಸ್ಯರು ವ್ಯಕ್ತಪಡಿಸುತ್ತಿದ್ದಾರೆ.

ಮೃತ ವೈಕ್ತಿಯನ್ನು ಹೆಬಳೆ ಪಂಚಾಯತ್ ವ್ಯಾಪ್ತಿಯ ಹನೀಫಾಬಾದ್ ತಹಲಾ ಪಳ್ಳಿ ಹತ್ತಿರದ ನಿವಾಸಿ ರಿಝ್ವಾನ್ ಜಲೀಲ್ ಸಾಬ್ ಅತ್ತಾರ್(46) ಎಂದು ಗುರುತಿಸಲಾಗಿದೆ. 
ಅ.27ರಂದು ಮಗಳ ಮದುವೆ ಮಾಡಿ ಮಾಡಿದ ಸಾಲವನ್ನಲ್ಲಾ ತೀರಿಸಿ ಅಗಸ್ಟ್ 30 ರಂದು ಮನೆಯಿಂದ ಕಾಣೆಯಾಗಿದ್ದ ರಿಝ್ವಾನ್ ಜಲೀಲ್ ಸಾಬ್ ಅತ್ತಾರ್(46) ಎಂಬ ವ್ಯಕ್ತಿಯ ಮೃತದೇಹ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿರುವ ತೆರದ ಬಾವಿಯಲ್ಲಿ ಪತ್ತೆಯಾಗಿರುವುದು ಹಲವು ಸಂಶಯಗಳಿಗೆ ಎಡೆಮಾಡಿದಂತಾಗಿದೆ. ಈ ಕುರಿತಂತೆ ಸೆ.1 ರಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಈ ಮಧ್ಯೆ ಕಾಣೆಯಾದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. 
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡಿದ್ದಾರೆ. 
 

Read These Next

ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ...

ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೂಕ್ಷ್ಮ ಬೋಧನೆ, ಲಲಿತಕಲೆ ಮತ್ತು ರಂಗಭೂಮಿ ಕಾರ್ಯಾಗಾರ ಮುಕ್ತಾಯ

ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಸಂಸ್ಕಾರ, ಮಾನವೀಯ ಮೌಲ್ಯ, ಪರಸ್ಪರ ಗೌರವ ನೀಡುವುದು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವ ...