ನಾವು ಎಷ್ಟು ದಿನ ಸಹಿಸಿಕೊಂಡಿರಲು ಸಾಧ್ಯ: ಸಾಮಾಜಿಕ ಜಾಲತಾಣದಲ್ಲಿ ಯೋಧ ತನ್ನ ಆಕ್ರೋಶ

Source: S O News service | By Staff Correspondent | Published on 7th March 2017, 11:22 PM | National News | Special Report | Don't Miss |

ಹೊಸದಿಲ್ಲಿ: ದೇಶದ ಗಡಿಕಾಯುವ ಯೋಧರಿಗೆ ಕಳಪೆಆಹಾರವನ್ನು ನೀಡಲಾಗುತ್ತಿರುವ ಬಗ್ಗೆ ಜನವರಿಯಲ್ಲಿ ಬಿಎಸ್‌ಎಫ್ ತೇಜ್‌ಪಾಲ್‌ಯಾದವ್ ಪ್ರಸಾರ ಮಾಡಿದ ವಿಡಿಯೋ, ದೇಶಾದ್ಯಂತ ಕೋಲಾಹಲ ಸೃಷ್ಟಿಸಿದ ನೆನಪು ಮಾಸುವ ಮುನ್ನವೇ, ಮಂಗಳವಾರ ಇನ್ನೋರ್ವ ಯೋಧ ಸೇನಾಪಡೆಯಲ್ಲಿ ಅಸ್ತಿತ್ವದಲ್ಲಿರುವ ‘ಬ್ಯಾಟ್‌ಮ್ಯಾನ್’ ಅಥವಾ ‘ಸಹಾಯಕ್’ ವ್ಯವಸ್ಥೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತನ್ನ ಆಕ್ರೋಶವನ್ನು ವ್ಯಕ್ತಪಡಿಸಿದ್ದಾನೆ. ಸೈನಿಕರನ್ನು ಮೇಲಾಧಿಕಾರಿಗಳು ಸೇವಕರಂತೆ ನೋಡಿಕೊಳ್ಳುತ್ತಿದ್ದು, ಅವರಿಗೆ ಅತ್ಯಂತ ಕಳಪೆ ದರ್ಜೆಯ ಆಹಾರವನ್ನು ಒದಗಿಸಲಾಗುತ್ತಿದೆಯೆಂದು ದೂರಿದ್ದಾನೆ.

 

 ಪ್ರಧಾನಿ ಕಾರ್ಯಾಲಯ ಹಾಗೂ ರಕ್ಷಣಾ ಸಚಿವಾಲಯಕ್ಕೆ ತಾನು ಈ ಬಗ್ಗೆ ದೂರು ನೀಡಿದ್ದರೂ, ಅದಕ್ಕೆ ಯಾವುದೇ ಸ್ಪಂದನೆ ವ್ಯಕ್ತವಾಗದಿರುವ ಹಿನ್ನೆಲೆಯಲ್ಲಿ ತನ್ನ ಆಹವಾಲುಗಳನ್ನು ಸಾರ್ವಜನಿಕರ ಮುಂದಿಡುತ್ತಿರುವುದಾಗಿ ಆರ್ಮಿ ಮೆಡಿಕಲ್ ಕಾರ್ಪ್ಸ್‌ನ ಯೋಧ ಸಿಂಧವ್ ಜೋಗಿದಾಸ್ ಹೇಳಿದ್ದಾರೆ.

  ಬ್ಯಾಟ್‌ಮ್ಯಾನ್ ಅಥವಾ ಸಹಾಯಕ್ ಕೆಲಸದ ಹೆಸರಿನಲ್ಲಿ ಕೆಲವು ಅಧಿಕಾರಿಗಳು ಸೈನಿಕರಿಂದ ತಮ್ಮ ಮನೆಕೆಲಸಗಳನ್ನು ಮಾಡಿಸುತ್ತಾರೆ ಎಂದು ಜೋಗಿದಾಸ್ ಅಳಲು ತೋಡಿಕೊಂಡಿದ್ದಾರೆ. ಇದನ್ನು ಎಷ್ಟು ದಿನ ಸಹಿಸಿಕೊಂಡಿರಲು ಸಾಧ್ಯವೆಂದು ಆತ ಹತಾಶೆ ವ್ಯಕ್ತಪಡಿಸಿದ್ದಾರೆ. ಸೇನಾಜವಾನರು ಮೇಲಿನ ಆದೇಶಗಳನ್ನು ಪಾಲಿಸಲೇಬೇಕಾಗುತ್ತದೆ. ಯಾಕೆಂದರೆ. ಅದರ ವಿರುದ್ಧ ಮಾತನಾಡಿದಲ್ಲಿ ಅವರನ್ನು ಪೀಡನೆಗೊಳಗಾಗುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾನೆ.ಈ ಬಗ್ಗೆ ತಾನು ಪ್ರಧಾನಿ ಮೋದಿಯವರ ಕಾರ್ಯಾಲಯ ಹಾಗೂ ರಕ್ಷಣಾ ಸಚಿವಾಲಯಕ್ಕೆ ತೆರಳಿ ದೂರು ನೀಡಿದ್ದೆ. ಆದರೆ ಆ ಬಳಿಕ ತನ್ನ ವಿರುದ್ಧ ಶಿಸ್ತು ಕ್ರಮದ ಪ್ರಕರಣವನ್ನು ದಾಖಲಿಸಲಾಯಿತು ಹಾಗೂ ಎರಡು ಬಾರಿ ತನಿಖೆಗಳನ್ನು ನಡೆಸಲಾಯಿತು. ಸುಮಾರು ಒಂದು ವರ್ಷದವರೆಗೂ ತನಗೆ ಕಿರುಕುಳ ನೀಡಲಾಗಿತ್ತೆಂದವರು ಹೇಳಿದ್ದ್ಜಾರೆ.

ನ್ಯಾಯ ಕೋರಿ ಸೇನಾಭವನಕ್ಕೆ ತೆರಳಿದರೂ ತನಗೆ ಪ್ರವೇಶವನ್ನು ನಿರಾಕರಿಸಲಾಗಿತ್ತು ಮತ್ತು ಸೇನಾವರಿಷ್ಠ ಬಿಪಿನ್ ರಾವತ್ ಅವರಿಗೆ ಈ ಬಗ್ಗೆ ಪತ್ರ ಬರೆದರೂ ಯಾವುದೇ ಉತ್ತರ ಬಂದಿಲ್ಲವೆಂದು ಜೋಗಿದಾಸ್ ಹೇಳಿದ್ದಾರೆ. ಅಧಿಕಾರಿಗಳ ವಿರುದ್ಧ ದೂರು ನೀಡಿದ್ದೇನೆಂಬ ಕಾರಣಕ್ಕಾಗಿ ತನಗೆ 14 ದಿನಗಳ ವೇತನವನ್ನು ಕಡಿತಗೊಳಿಸಲಾಗಿತ್ತು. ಸಾಮಾನ್ಯ ಸೈನಿಕರು ನಿಯಮ ಮುರಿದಲ್ಲಿ ಕೂಡಲೇ ಶಿಕ್ಷೆಯನುಭವಿಸುವರು ಅದರೆ ಅಧಿಕಾರಿಗಳಿಗೆ ಯಾವುದೇ ಕಾನೂನು ಅಥವಾ ನಿಯಮಗಳು ಇಲ್ಲವೆಂದು ಜೋಗಿದಾಸ್ ಹತಾಶೆ ವ್ಯಕ್ತಪಡಿಸಿದ್ದಾರೆ.

ವಿಡಿಯೋ ಕುಟುಕು ಕಾರ್ಯಾಚರಣೆಯಲ್ಲಿ ಸೇನಾಪಡೆಯ ಸಹಾಯಕ್ ಪದ್ಧತಿಯನ್ನು ಟೀಕಿಸಿದ್ದ ಯೋಧ ಲಾನ್ಸ್ ನಾಯ್ಕ್ ರಾಯ್ ಮ್ಯಾಥ್ಯೂ, ನಿಗೂಢವಾಗಿ ಮೃತಪಟ್ಟ ಘಟನೆಯ ಬೆನ್ನಲ್ಲೇ ಜೋಗಿದಾಸ್‌ನ ಈ ವಿಡಿಯೋ ಫೇಸ್‌ಬುಕ್‌ನಲ್ಲಿ ಪ್ರಸಾರವಾಗಿದೆ. ಕಳೆದ ಜನವರಿಯಲ್ಲಿ ಲಾನ್ಸ್ ನಾಯ್ಕ್ ಹುದ್ದೆಯ ಯಜ್ಞಪ್ರತಾಪ್ ಎಂಬ ಯೋಧ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ವಿಡಿಯೋದಲ್ಲಿ ಕೂಡಾ ಸೈನಿಕರನ್ನು ಅಧಿಕಾರಿಗಳು ಶೋಷಿಸುತ್ತಿದ್ದಾರೆಂದು ಆರೋಪಿಸಿದ್ದನು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...