ಕೋಲಾರ: ಕಾರ್ಮಿಕರಿಗೆ ವೇತನ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ನಿರ್ಲಕ್ಷ ಮಾಡುತ್ತಿದ್ದ ಶಿವಂ ಆಟೋಟೆಕ್ ಕಂಪನಿ ಮುಂದೆ ಪ್ರಗತಿಪರ ಸಂಘಟನೆಗಳು ಮತ್ತು ಕಾರ್ಮಿಕರಿಂದ ಸಾಂಕೇತಿಕವಾಗಿ ಧರಣಿ ಮಾಡಿ, ಒಂದು ವಾರದ ಸಮಯ ಕೊಟ್ಟು, ಹೆಚ್,ಆರ್ ಮ್ಯಾನೇಜರ್ ರಂಗನಾಥ್ರವರನ್ನು ಒತ್ತಾಯಿತು.
ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ ಕೃಷಿ ಜಮೀನನ್ನು ಜಿಲ್ಲೆಯ ಅಭಿವೃದ್ದಿ ಹಾಗೂ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುತ್ತೇವೆಂದು ಕೈಗಾರಿಕೆಗಳನ್ನು ಸ್ಥಾಪನೆ ಮಾಡಿ ಸ್ಥಳಿಯರಿಗೆ ಉದ್ಯೋಗ ಕೊಡದೇ ನಿರ್ಲಕ್ಷ ಮಾಡುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮೌನವಾಗಿರುವುದಕ್ಕೆ ಸ್ಥಳಿಯ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ ವೇಮಗಲ್ ಕೈಗಾರಿಕಾ ಪ್ರದೇಶದ ಶಿವಂ ಆಟೋ ಟೇಕ್ ಕಂಪನಿಯ ಸ್ಥಳಿಯ ಕಾರ್ಮಿಕರನ್ನು ಸಂಪೂರ್ಣವಾಗಿ ನಿರ್ಲಕ್ಷೆ ಮಾಡಿ ತಮಿಳುನಾಡು ಕಾರ್ಮಿಕರಿಗೆ ಖಾಯಂ ನೌಕರಿ ಕೊಟ್ಟು ಹೆಚ್ಚಿನ ವೇತನದ ಜೊತಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸ್ಥಳಿಯ ಕಾರ್ಮಿಕರಿಗೆ ವೇತನ ತಾರತಮ್ಯ ಮೂಲಭೂತ ಸೌಕರ್ಯಗಳಾದ ಊಟ, ರಕ್ಷಾ ಕವಚ, ಹಾಗೂ ಶೌಚಾಲಯ ಮತ್ತಿತರ ಸಮಸ್ಯೆಗಳ ಜೊತೆಗೆ ದ್ವೀಚಕ್ರ ವಾಹನಗಳನ್ನು ಕಂಪನಿ ಮುಂಬಾಗ ನಿಲ್ಲಿಸುವಂತೆ ಶರತ್ತ್ಗಳನ್ನು ವಿಧಿಸಿ, ತೊಂದರೆ ಕೊಡುವ ಆಡಳಿತ ಮಂಡಳಿಯ ಅದಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಿಯ ಮುಖಂಡರಾದ ಲೋಕೆಶ್ ಹಾಗೂ ಮಂಜುನಾಥ್ ಮಾತನಾಡಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸದೇ ವೇತನವನ್ನು ಕಡಿತಗೊಳಿಸಿ, ಪಿ.ಎಪ್, ಇಎಸ್.ಐ ಹಾಗೂ ಕಾರ್ಮಿಕರ ಹಕ್ಕುಗಳನ್ನು ಉಲ್ಲಂಘನೆ ಮಾಡಿದರೆ ಕಂಪನಿಯ ಮುಂದೆ ಬೃಹತ್ ಮಟ್ಟದ ಹೋರಾಟ ಮಾಡುವ ಎಚ್ಚರಿಕೆಯನ್ನು ನೀಡಿದರು.
ಸ್ಥಳಕ್ಕೆ ಬಂದ ವೇಮಗಲ್ ಪಿ,ಎಸ್,ಐ ಲಕ್ಷೀನಾರಾಯಣ ಸಾರ್ ರವರು ಮಾತನಾಡಿ ಆಡಳಿತ ಮಂಡಳಿಗೆ ಒಂದು ವಾರದೊಳಗೆ ಸಂಬಂಧಪಟ್ಟ ಅಧಿಕಾರಿಗಳೊಡನೆ ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದು ಮ್ಯಾನೇಜರ್ ರಂಗನಾಥ್ರವರಿಗೆ ತಿಳಿಸಿ ಕಾರ್ಮಿಕರಿಗೆ ಭರವಸೆ ನೀಡಿದ ನಂತರ ಹೋರಾಟವನ್ನು ಹಿಂಪಡೆಯಲಾಯಿತು.
ಈ ಹೋರಾಟದಲ್ಲಿ ನೊಂದ ಕಾರ್ಮಿಕರು, ಸ್ಥಳಿಯ ಸಾರ್ವಜನಿಕರು, ಜಿಲ್ಲಾದ್ಯಕ್ಷ ಮರಗಲ್ ಶ್ರೀನಿವಾಸ್, ಅಮರನಾರಾಯಣಸ್ವಾಮಿ, ನಟರಾಜ್, ಗಣೇಶ್, ಮುಂತಾದವರಿದ್ದರು.
Read These Next
ಮನೆಯಿಂದ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ
ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...
ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ "ಮತದಾನ ಜಾಗೃತಿ ಜಾಥಾ ...
ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್
ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...
ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ಸಕಲ ಸಿದ್ದತೆಗೆ ಸೂಚನೆ
ಶಿವಮೊಗ್ಗ : ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ...
ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಸಿ ಸುಳ್ಳು : ಸಿ lಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು : ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ...
ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ
ಬೀದರ್ : ಅಧಿಕಾರ, ಅವಕಾಶ, ಸಂಪತ್ತು ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...