2014ರ ಲೋಕಸಭಾ ಚುನಾವಣೆಯಲ್ಲಿ ಇವಿಎಂ ದುರ್ಬಳಕೆಯಾಗಿತ್ತು: ಅಮೆರಿಕದ ಸೈಬರ್ ತಜ್ಞ

Source: sonews | By Staff Correspondent | Published on 22nd January 2019, 12:01 AM | National News | Global News | Special Report | Don't Miss |

ಲಂಡನ್: ಇಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಹ್ಯಾಕ್ ಮಾಡಲು ಸಾಧ್ಯ ಎಂದು ಅಮೆರಿಕ ಮೂಲದ ಸೈಬರ್ ತಜ್ಞ ಸಯೀದ್ ಶುಜಾ ವಾದಿಸಿದ್ದಾರೆ. ಭಾರತದಲ್ಲಿ ಬಳಸುತ್ತಿರುವ ಇವಿಎಂ ಡಿಸೈನ್ ಮಾಡಿರುವ ಈ ತಜ್ಞ ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಗುಜರಾತ್ ಚುನಾವಣೆಯಲ್ಲಿ 'ಇವಿಎಂ ದುರ್ಬಳಕೆ' ನಡೆದಿದೆ ಎಂದಿದ್ದಾರೆ.

ಇವಿಎಂ ಹ್ಯಾಕ್ ಬಗ್ಗೆ ಇರುವ ಕಾರ್ಯಕ್ರಮವನ್ನು ಇಂಡಿಯನ್ ಜರ್ನಲಿಸ್ಟ್ಸ್ ಅಸೋಸಿಯೇಷನ್  (ಯುರೋಪ್) ಆಯೋಜಿಸಿದ್ದು , ಹಿರಿಯ ಕಾಂಗ್ರೆಸ್ ನೇತಾರ ಕಪಿಲ್ ಸಿಬಲ್ ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

ಇವಿಎಂ ಹ್ಯಾಕ್ ಬಗ್ಗೆ ಬಿಜೆಪಿ ನಾಯಕ ಗೋಪಿನಾಥ್ ಮುಂಡೆ ಅವರಿಗೆ ತಿಳಿದಿತ್ತು. ಹಾಗಾಗಿ 2014ರಲ್ಲಿ ಅವರನ್ನು ಹತ್ಯೆ ಮಾಡಲಾಯಿತು ಎಂದು ಇವಿಎಂ ಹ್ಯಾಕ್ ಮಾಡುವುದು ಹೇಗೆ ಎಂಬುದರ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದ ಸಯೀದ್ ಶುಜಾ ಹೇಳಿದ್ದಾರೆ.

ನಿರ್ದಿಷ್ಟ ಪಕ್ಷಕ್ಕೆ ಮತ ದಾಖಲಾಗುವಂತೆ ಇವಿಎಂನ್ನು ಯಾವ ರೀತಿ  ಬಳಸಿಕೊಳ್ಳಬಹುದು ಎಂಬುದರ ಬಗ್ಗೆ 2017ರಲ್ಲಿ ದೆಹಲಿ ವಿಧಾನಸೌಧದಲ್ಲಿ ಆಮ್ ಆದ್ಮಿ ಶಾಸಕ  ಸೌರಭ್ ಭಾರದ್ವಾಜ್  ನೇರ ಪ್ರಾತ್ಯಕ್ಷಿಕೆ ನೀಡಿದ್ದರು.ಆದರೆ ಇವಿಎಂನ್ನು ಯಾವುದೇ ರೀತಿಯಲ್ಲಿ ಹ್ಯಾಕ್ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ ಚುನಾವಣೆ ಆಯೋಗ, ಎಎಪಿ ವಾದವನ್ನು ತಳ್ಳಿ ಹಾಕಿತ್ತು.

ಲಂಡನ್‍ನಲ್ಲಿ ಇವಿಎಂ ಹ್ಯಾಕಥಾನ್: ತಜ್ಞರು ಹೇಳಿದ್ದೇನು?
* ಬ್ಲೂಟೂತ್‍ನಿಂದ ಇವಿಎಂ ಹ್ಯಾಕ್ ಮಾಡಬಹುದಾಗಿದೆ. ಇವಿಎಂ ಹ್ಯಾಕ್ ಮಾಡಬೇಕಾದರೆ ಗ್ರಾಫೈಟ್ ಹೊಂದಿರುವ ಟ್ರಾನ್ಸ್ಮಿಟರ್ ಬೇಕು. ಇಂಥಾ ಟ್ರಾನ್ಸ್ಮಿಟರ್‌ಗಳನ್ನು 2014 ಲೋಕಸಭಾ ಚುನಾವಣೆಯಲ್ಲಿ ಬಳಸಲಾಗಿದೆ ಎಂದು ಸೈಬರ್ ತಜ್ಞ ಸಯೀದ್ ಶುಜಾ ಹೇಳಿದ್ದಾರೆ.

* ಇವಿಎಂ ಮಾಹಿತಿಗಳನ್ನು ಸ್ವಾಧೀನ ಮಾಡಲು ಕೆಲವರು ಯತ್ನಿಸಿದ್ದಾರೆ. ಇವಿಎಂ ವೈರ್‌ಲೆಸ್ ಸಂವಹನ ಮಾಡುವುದಿಲ್ಲ ಎಂದು ಚುನಾವಣಾ ಆಯುಕ್ತರು ಹೇಳಿದ್ದರು. ಆದಾಗ್ಯೂ, 7hz ಕಡಿಮೆ ಕಂಪನಾಂಕದ ಮಾಡ್ಯುಲೇಟರ್ ಬಳಸಿದರೆ ಇದು ಸಾಧ್ಯ. ಇದು ಮಿಲಿಟರಿ ಗ್ರೇಡ್ ಕಂಪನಾಂಕವಾಗಿದೆ.

* 2014ರಲ್ಲಿ ನಾನು ಬಿಜೆಪಿ ನೇತಾರರೊಬ್ಬರನ್ನು ಭೇಟಿಯಾಗಿದ್ದು ಅವರಿಗೆ ಈ ಬಗ್ಗೆ ಗೊತ್ತಿತ್ತು. ಆದರೆ ಅವರ ತಂಡದ ಸದಸ್ಯರೇ ಅವರನ್ನು ಹತ್ಯೆ ಮಾಡಿದರು. ಗೋಪಿನಾಥ್ ಮುಂಡೆ  ಅವರಿಗೆ ಹ್ಯಾಕಿಂಗ್ ವಿಷಯ ಗೊತ್ತಿತ್ತು. ಸರ್ಕಾರದ ಮೋಸದಾಟವನ್ನು ಅವರು ಬಯಲು ಮಾಡಲು ಮುಂದಾಗಿದ್ದರು. ಹಾಗಾಗಿ ಅವರನ್ನು ಹತ್ಯೆ ಮಾಡಲಾಯಿತು ಎಂದು ಶುಜಾ ಆರೋಪಿಸಿದ್ದಾರೆ. 
 2014 ಜೂನ್‍ನಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಮಹಾರಾಷ್ಟ್ರದ ಬಿಜೆಪಿ ನಾಯಕ ಮುಂಡೆ ಸಾವಿಗೀಡಾಗಿದ್ದರು. 

* ದೆಹಲಿಯಲ್ಲಿ ನಾವು ಪ್ರಸಾರವನ್ನು ನಿಲ್ಲಿಸಿದ್ದರಿಂದ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆಲುವು ಸಾಧಿಸಿತು.ದೆಹಲಿ ವಿಧಾನಸಭಾ  ಚುನಾವಣೆಯಲ್ಲಿ ಬಿಜೆಪಿ ಐಟಿ ಸೆಲ್ ಇವಿಎಂ  ಹ್ಯಾಕ್ ಮಾಡಲು ಯತ್ನಿಸಿದ್ದಾಗ ನಾವು ಆ ಕಂಪನಾಂಕದ ಪ್ರಸಾರಕ್ಕೆ ತಡೆಯೊಡ್ಡಿದೆವು. ನಾವು ಎಎಪಿ ಪರವಾಗಿ ಮತ ದಾಖಲಾಗುವಂತೆ ಕಂಪನಾಂಕ ಪ್ರಸಾರವನ್ನ ಬದಲಿಸಿದೆವು. ನಿಜವಾದ ಫಲಿತಾಂಶವು 2009ರ ಫಲಿತಾಂಶವನ್ನೇ ಹೋಲುತ್ತಿತ್ತು.

* ಕಡಿಮೆ ಕಂಪನಾಂಕದ ಪ್ರಸಾರಣವನ್ನು ನಾವು ತಡೆಯಲು ಪ್ರಯತ್ನಿಸಿದ್ದೆವು. ನಾವು  ಹ್ಯಾಕ್ ಮಾಡಲು ಸಾಧ್ಯವಾಗದೇ ಇರುವ ಇವಿಎಂನ್ನು ನೀವು ಬಳಸಿ ನೋಡೋಣ ಎಂದು ಬಿಜೆಪಿ ಐಟಿ ಸೆಲ್ ಸವಾಲೆಸೆದಿತ್ತು.

* 2014ರ ಲೋಕಸಭಾ ಚುನಾವಣೆಯಲ್ಲಿ ದುರ್ಬಳಕೆ ನಡೆದಿತ್ತು  ಎಂದು ಸಯೀದ್ ಶುಜಾ ಆರೋಪಿಸಿದ್ದಾರೆ.
 
 

ಸೈಯದ್ ಶುಜಾ ನಡೆಸಿದ ವಿಡಿಯೊ ಸಂವಾದದಲ್ಲಿ ಹೇಳಿದ್ದೇನು ಎಂಬುದರ ಬಗ್ಗೆ ದಿ ಕ್ವಿಂಟ್ ವರದಿ 

 *ಕಡಿಮೆ ಕಂಪನಾಂಕದ ಸಿಗ್ನಲ್  ಬಳಸಿ ಇವಿಎಂ ಹ್ಯಾಕ್ ಮಾಡುವುದಕ್ಕೆ ಟೆಲಿಕಾಂ ದಿಗ್ಗಜ ರಿಲಾಯನ್ಸ್ ಕಮ್ಯುನಿಕೇಷನ್ಸ್  ಬಿಜೆಪಿಗೆ ಸಹಾಯ ಮಾಡಿತ್ತು.

*ಈ ಬಗ್ಗೆ ಲೇಖನ ಬರೆಯಲು ಪತ್ರಕರ್ತೆ ಗೌರಿ ಲಂಕೇಶ್ ಒಪ್ಪಿದ್ದರು. ಅವರ ಹತ್ಯೆಯಾಯಿತು.

* ಸಮಾಜವಾದಿ ಪಕ್ಷ, ಬಿಎಸ್‍ಪಿ ಮತ್ತು ಎಎಪಿ ಕೂಡಾ ಇವಿಎಂ ಹ್ಯಾಕ್ ಮಾಡುವುದು ಹೇಗೆ ಎಂದು ತಿಳಿಯಲು ತನ್ನನ್ನು ಸಮೀಪಿಸಿತ್ತು.

 

ಚುನಾವಣೆ ಆಯೋಗದಿಂದ ನಿರಾಕರಣೆ

ನವದೆಹಲಿ: ಭಾರತದಲ್ಲಿ ಬಳಸುತ್ತಿರುವ ಎಲೆಕ್ಟ್ರಾನಿಕ್ಸ್ ಮತದಾನ ಯಂತ್ರ (ಇವಿಎಂ) ವನ್ನು ತಾನು ಹ್ಯಾಕ್ ಮಾಡಬಲ್ಲೆ ಎಂದ ಲಂಡನ್ ಮೂಲದ ಹ್ಯಾಕರ್ ಪ್ರತಿಪಾದನೆಯನ್ನು ಚುನಾವಣಾ ಆಯೋಗ ನಿರಾಕರಿಸಿದೆ.

ಪ್ರತಿಪಕ್ಷಗಳು ಹೊಸದಾಗಿ ಈ ಪ್ರಶ್ನೆಗಳನ್ನು ಎತ್ತಿರುವ ಸಂದರ್ಭದಲ್ಲಿ ಸೋಮವಾರ ಸಂಜೆ ನಡೆದ ಹ್ಯಾಕಥಾನ್ ಕಾರ್ಯಕ್ರಮದಲ್ಲಿ ಹ್ಯಾಕರ್ ಸೈಯದ್ ಶುಜಾ ಈ ಹೇಳಿಕೆ ನೀಡಿದ್ದಾರೆ. ಇವಿಎಂ ಯಾವುದೇ ಸಂಪರ್ಕ ಇಲ್ಲದ ಯಂತ್ರ. ಯಾವುದೇ ನಿಸ್ತಂತು ಸಂವಹನದ ಮೂಲಕ ಯಾವುದೇ ದತ್ತಾಂಶವನ್ನು ರವಾನಿಸುವ ಅಥವಾ ಸ್ವೀಕರಿಸುವ ಸಾಮರ್ಥ್ಯ ಈ ಯಂತ್ರಕ್ಕಿಲ್ಲ ಎಂದು ಚುನಾವಣಾ ಆಯೋಗದ ಉನ್ನತ ತಾಂತ್ರಿಕ ತಜ್ಞ ಡಾ. ರಜತ್ ಮೂನಾ ಸ್ಪಷ್ಟಪಡಿಸಿದ್ದಾರೆ. ಆದುದರಿಂದಲೇ ಇದು ‘ತಿರುಚಲು ಸಾಧ್ಯವಾಗದ’ ಯಂತ್ರ ಎಂದು ಭಿಲಾಯಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ನಿರ್ದೇಶಕ ಹಾಗೂ ಇವಿಎಂಗಳ ಕುರಿತ ಚುನಾವಣಾ ಆಯೋಗದ ತಾಂತ್ರಿಕ ತಜ್ಞರ ಸಮಿತಿಯ ಸದಸ್ಯರಾಗಿರುವ ಡಾ. ಮೂನಾ ಹೇಳಿದ್ದಾರೆ.

ಇದನ್ನು ‘‘ಉದ್ದೇಶಿತ ಕೆಸರೆರೆಚಾಟ’’ ಎಂದು ಚುನಾವಣಾ ಆಯೋಗ ಕರೆದಿದೆ. ಈ ವಿಷಯದ ಬಗ್ಗೆ ಯಾವ ಕಾನೂನು ಕ್ರಮ ತೆಗೆದುಕೊಳ್ಳಲು ಸಾಧ್ಯ ಹಾಗೂ ತೆಗೆದುಕೊಳ್ಳಬೇಕು ಎಂಬುದನ್ನು ಪರಿಶೀಲಿಸಲಿದ್ದೇವೆ ಎಂದು ಅದು ಹೇಳಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು 'ಸಾವಿನ ವಲಯ'ವೆಂದು ಘೋಷಿಸಿದ ವಿಶ್ವಸಂಸ್ಥೆ ಪ್ರವೇಶದ್ವಾರದಲ್ಲಿ ಸಾಮೂಹಿಕ ಸಮಾಧಿ: ವಿಶ್ವ ಆರೋಗ್ಯ ಸಂಸ್ಥೆ

ಹಮಾಸ್ ನಿಯಂತ್ರಣದ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯ ಬಳಿಕ ನೆಲೆಸಿರುವ ಭೀಕರ ಪರಿಸ್ಥಿತಿಯನ್ನು ಅವಲೋಕಿಸಲು ಈ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...