ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ಹೊಡೆದಾಟ; ಪರಸ್ಪರ ದೂರು ದಾಖಲು

Source: sonews | By Staff Correspondent | Published on 14th December 2018, 6:03 PM | Coastal News | Don't Miss |

ಭಟ್ಕಳ: ಹಿಂದೂ ಯುವತಿಯರೊಂದಿಗೆ ಮುಸ್ಲಿಮ್ ಯುವಕರು ಮಾತನಾಡಿದನ್ನೆ ಅಪರಾಧವೆನ್ನುವಂತೆ ಬಿಂಬಿಸಿದ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ಮುಸ್ಲಿಮ್ ಯುವಕರೊಂದಿಗೆ ತಗಾದೆ ತೆಗೆದು ಹೊಡೆದಾಟ ನಡೆಸಿದ್ದರ ಪರಿಣಾಮ ಹೊಡೆತದಿಂದ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಗುರುವಾರ ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ತಿಮಕ್ಕಿ ಎಂಬಲ್ಲಿ ಜರಗಿದ್ದು ಘಟನೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ದೂರು ದಾಖಲಾಗಿವೆ. 

ಗಾಯಗೊಂಡ ವ್ಯಕ್ತಿಯನ್ನು ಶ್ರೀರಾಮಸೇನೆ ಉತ್ತರಕನ್ನಡ ಜಿಲ್ಲಾಧ್ಯಕ್ಷ ಜಯಂತ್ ನಾಯ್ಕ ಎಂದು ಗುರುತಿಸಲಾಗಿದ್ದು  ಭಟ್ಕಳ ಸಿಪಿಐ ಗಣೇಶ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಮುಂಜಾಗೃತಾ ಕ್ರಮವನ್ನು ಜರಗಿಸಿದ್ದಾರೆ.

ಘಟನೆ ಹಿನ್ನೆಲೆ: ಮುರುಡೇಶ್ವರದ ಬಸ್ತಿಮಕ್ಕಿ ಎಂಬಲ್ಲಿ ಅಂಗಡಿಯೊಂದರ ಬಳಿ ಅನ್ಯಕೋಮಿನ ಯುವಕರು ಹಿಂದೂ ಯುವತಿಯರನ್ನು ಮಾತನಾಡಿಸಿದ್ದು ಅದನ್ನೇ ಹಿಂದೂ ಯುವತಿಯರನ್ನು ಮುಸ್ಲಿಮ್ ಯುವಕರು ಚುಡಾಯಿಸಿದ್ದಾರೆ ಎಂದು ಭಾವಿಸಿ ಅವರೊಂದಿಗೆ ತಗಾದೆ ತೆಗೆದಿದ್ದಾರೆ. ಯುವಕರು ಯುವತಿಯರನ್ನು ಚುಡಾಯಿಸಿದ ಬಗ್ಗೆ ಅಲ್ಲಗೆಳೆದಿದ್ದು ಯುವತಿಯರೂ ಕೂಡ ತಮಗೆ ಯಾರೂ ಕೂಡ ಚುಡಾಯಿಸಿಲ್ಲ ಎಂದು ಸಾಕ್ಷಿಯನ್ನು ನುಡಿದಿದ್ದಾರೆ. ಅದಾಗ್ಯೂ ಶ್ರೀರಾಮಸೇನೆಯ ಜಯಂತ್ ನಾಯ್ಕ ಮುಸ್ಲಿಮ್ ಯುವಕರೊಂದಿಗೆ ಹೊಡೆದಾಟಕ್ಕೆ ಇಳಿದಿದ್ದು ಈ ಹೊಡೆದಾಟದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸ ಪಡೆಯುತ್ತಿದ್ದಾರೆ. 

ಸುಳ್ಳಾರೋಪ: ಯುವತಿಯರ ವಿಷಯಕ್ಕೆ ಸಂಬಂಧಿಸಿದ ಹೊಡೆದಾಟವನ್ನು ಜಯಂತ್ ನಾಯ್ಕ ಕಡೆಯರು ಅಲ್ಲಗೆಳೆದಿದ್ದು ಇದು ಸುಳ್ಳಾರೋಪವಾಗಿದೆ. ಮಾವಳ್ಳಿ ಗ್ರಾಮ ಪಂಚಾಯತ್  ವಿಷಯದಲ್ಲಿ ಸದಸ್ಯರಾಗಿರುವ ಜಯಂತ್ ನಾಯ್ಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪರಸ್ಪರ ದೂರು ದಾಖಲು: ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಭಟ್ಕಳ ಸಿಪಿಐ ಗಣೇಶ ಅವರು ಈ ಕುರಿತಂತೆ ಎರಡು ಪ್ರತ್ಯೇಕ ದೂರು ದಾಖಲಾಗಿದ್ದು ಸಮಾನ್ ಶೇಖ್ ಹಾಗೂ ಮಲಿಕ್ ರೈಹಾನ್ ಎಂಬುವವರು ಜಯಂತ್ ನಾಯ್ಕರ ಮೇಲೆ ಹಾಗೂ ಜಯಂತ್ ನಾಯ್ಕ ಸಮಾನ್ ಶೇಖ್ ಹಾಗೂ  ಮಲಿಕ್ ರೈಹಾನ್ ರ ಮೇಲೆ ದೂರು ನೀಡಿದ್ದು ಮುರುಢೇಶ್ವರ ಠಾಣೆಯಲ್ಲಿ ದೂರನ್ನು ದಾಖಲಿಸಿಕೊಳ್ಳಲಾಗಿದೆ ಎಂದಿದ್ದಾರೆ. 
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...