ಅಂಕೋಲ:ಟ್ಯಾಂಕರ್ ಮತ್ತು ಕಾರು ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ಕು ಜನ ಸಾವು

Source: S O News Service | By MV Bhatkal | Published on 14th February 2019, 12:48 AM | Coastal News |

ಕಾರವಾರ: ಟ್ಯಾಂಕರ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ಕು ಜನ ಸ್ಥಳದಲ್ಲೇ ಸಾವುಕಂಡು ಒಬ್ಬರು ಗಂಭೀರ ಘಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಾರವಾಡ ಬಳಿ ನಡೆದಿದೆ.

ರಮೇಶ್ ಕೃಷ್ಣಪ್ಪ (30), ಮೀನಾ ಅಲಿಯಾಸ್ ಮೀನಾಕ್ಷಿ (30), ಪ್ರಭಾವತಿ ಚಿಕ್ಕೆಗೌಡಾ (35),
ವಿನಯ್ ಎಸ್  ಒ ವೆಂಕಟರಮಣಪ್ಪ (39) ಮೃತ ದುರ್ದೈವಿಗಳು,

ಅಂಕೋಲಾ ಕಡೆಯಿಂದ ಕಾರವಾರದತ್ತ ಹೊರಟ ಕಾರಿಗೆ ಎದುರಿನಿಂದ ಓವರ್ ಟೇಕ್ ಮಾಡಿಕೊಂಡು ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಟ್ಯಾಂಕರ್ ಚಾಲಕನ ನಿರ್ಲಕ್ಷ್ಯ ದ ಚಾಲನೆಯಿಂದ ಡಿಕ್ಕಿ ಸಂಭವಿಸಿದ್ದು ಕಾರನ್ನು ಸುಮಾರು 100 ಮೀ. ದೂರದ ವರೆಗೂ ನೂಕಿಕೊಂಡು ಹೋಗಿದೆ.

ಘಟನೆ ಸಂಬಂಧ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಕಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿಯ ಬೆಳಕು ಎಲ್ಲೆಡೆ ಪ್ರಕಾಶಿಸಲಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಬೆಳಕು ಕತ್ತಲನ್ನು ದೂರ ಮಾಡಿ, ಎಲ್ಲೆಡೆ ಬೆಳಕು ಮೂಡಿಸುತ್ತದೆ. ಅದೇ ರೀತಿ ಮತದಾನದ ಕುರಿತ ಜಾಗೃತಿಯ ಬೆಳಕನ್ನು ಎಲ್ಲಾ ಮತದಾರರ ...

ಜೆಡಿಎಸ್ ಮತ ಬುಟ್ಟಿಗೆ ’ಕೈ’ ಹಾಕಿದ ಅಂಜಲಿ ತಾಯಿ ; ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮ ಗೌಡರ ಮನೆಗೆ ಭೇಟಿ

ಅಂಕೋಲಾ: ಉ.ಕ ಲೋಕಸಭಾ ಕ್ಷೇತ್ರದ ಅಂಕೋಲಾ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಹಾಲಕ್ಕಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿನ ...