ಕಾರವಾರ: ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸಿದ್ದಪಡಿಸಿರುವ ಗಾಂಧಿ ಸ್ತಬ್ದ ಚಿತ್ರ ವಾಹನವು ಸೋಮವಾರ ಸಿದ್ದಾಪುರ ತಾಲೂಕಿಗೆ ಆಗಮಿಸಿದ್ದು, ತಹಶಿಲ್ಧಾರ ಮಂಜುನಾಥ ಮನವಳ್ಳಿ ಪುಷ್ಪಮಾಲೆ ಅರ್ಪಿಸುವ ಮೂಲಕ ಸ್ವಾಗತಿಸಿದರು.
ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದಿನೇಶ, ಶಿಶುಅಭಿವೃದ್ಧಿ ಯೋಜನಾಧಿಕಾರಿ ಸಂತೋಷ ನಾಯ್ಕ ಮತ್ತು ಬಂಕೇಶ್ವರ ಪ್ರೌಢಶಾಲಾ ವಿದ್ಯಾರ್ಥಿಗಳು ಸ್ಥಬ್ದಚಿತ್ರ ಮೇರವಣಿಗೆಯಲ್ಲಿ ಪಾಲ್ಗೋಂಡಿದ್ದರು. .