ಚಿಕ್ಕನಾಯಕನಹಳ್ಳಿ:ಗುಡಿಸಲಿಗೆ ಬೆಂಕಿ ಬಿದ್ದು ಬಾಲಕಿ ಸಜೀವ ದಹನ

Source: so news | By MV Bhatkal | Published on 17th June 2018, 12:50 PM | State News |

ಚಿಕ್ಕನಾಯಕನಹಳ್ಳಿ: ಗುಡಿಸಲಿಗೆ ಬೆಂಕಿ ತಗುಲಿ ಬಾಲಕಿಯೊಬ್ಬಳು ಜೀವಂತ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ಯೋಗಮಾಧವನಗರ ಕಾಲೋನಿಯ ಗುಡಿಸಲುಗೆ ತಗುಲಿದ ಅಗ್ನಿ ಅವಘಡದಿಂದಾಗಿ ಅನಿತಾ ಎಂಬ 6ವರ್ಷದ ಹೆಣ್ಣು ಮಗು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಾವನ್ನಪ್ಪಿದೆ.

ಯೋಗ ಮಾದವನಗರದಲ್ಲಿ ಅಲೆಮಾರಿಗಳಾದ ದೊಂಬಿದಾಸ ಕುಟುಂಬದವರ ಗುಡಿಸಲಿಗೆ ರಾತ್ರಿ ಬೆಂಕಿ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ. ಅಗ್ನಿ ಅವಘಡಕ್ಕೆ ಸಿಲುಕಿದ 6 ವರ್ಷದ ಮುಗ್ದ ಬಾಲಕಿ ಸಂಪೂರ್ಣ ಸುಟ್ಟು ಹೋಗಿ ಮೂಳೆಗಳು ಮಾತ್ರ ಉಳಿದಿದೆ, ಗುಡಿಸಲು ಸಂಪೂರ್ಣ ಸುಟ್ಟು ಕರಕಲಾಗಿದೆ.
ಯೋಗಮಾದವನಗರದಲ್ಲಿ ಸರ್ಕಾರಿ ಜಾಗದಲ್ಲಿ ಸುಮಾರು 15 ವರ್ಷಗಳಿಂದ ವಾಸವಾಗಿದ್ದ ಈ ಕುಟುಂಬಗಳು ಸುಮಾರು 5 ರಿಂದ 6 ಗುಡಿಸಲುಗಳು ನಿರ್ಮಾಣವಾಗಿದ್ದವು. ಮೃತ ಅನಿತಾ ಪೋಷಕರು ಬೇರೆ ಊರಿಗೆ ವ್ಯಾಪಾರಕ್ಕೆ ಹೋಗಿದ್ದರು.

ಬೆಂಕಿ ನಂದಿಸಲು ಆಗ್ನಿ ಶಾಮಕ ದಳ ಬರುವಷ್ಟರಲ್ಲಿ ಅನಾಹುತ ನಡೆದು ಹೋಗಿದ್ದು, ಈ ಸಂಬಂಧ ಚಿಕ್ಕನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಡಿವೈಎಸ್‍ಪಿಕುಮಾರ್, ಸಿಡಿಪಿಒ ತಿಪ್ಪಯ್ಯ, ಅಲೆಮಾರಿ ಬುಡುಕಟ್ಟು ಮಹಾಸಭಾದ ರಾಜಪ್ಪ ಹುಳಿಯಾರ್, ರಂಗನಾಥ್ ಭೇಟಿ ನೀಡಿ ಪರಿಶೀಲಿಸಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...