ಜಿ.ಎಸ್.ಬಿ. ಸಮಾಜದ ಮುಖಂಡ ಹರಿಶ್ಚಂದ್ರ ಅಣ್ಣಪ್ಪ ಕಾಮತ್ ನಿಧನ

Source: sonews | By Staff Correspondent | Published on 22nd February 2019, 6:05 PM | Coastal News |

ಭಟ್ಕಳ: ಜಿ.ಎಸ್.ಬಿ. ಸಮಾಜದ ಅಧ್ಯಕ್ಷರು, ವಾಣಿಜ್ಯೋಧ್ಯಮಿಗಳೂ ಆದ ಹರಿಶ್ಚಂದ್ರ ಅಣ್ಣಪ್ಪ ಕಾಮತ್ (81) ಅವರು ಗುರುವಾರ ಸಂಜೆ ಹೃದಯಾಘಾತದಿಂದ ನಿಧನರಾದರು. 
 
ಮೃತರು ಕಳೆದ ಹಲವಾರು ವರ್ಷಗಳಿಂದ ಸಾಮಾಜಿಕವಾಗಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿರುತ್ತಿದ್ದರು. ಧಾರ್ಮಿಕ ಕಾರ್ಯಕ್ರಮಗಳನ್ನು ಮುಂಚೂಣಿಯಲ್ಲಿ ನಿಂತು ಮಾಡುತ್ತಿದ್ದ ಅವರು ಸಮಾಜದ ಅಧ್ಯಕ್ಷರಾಗಿ ಯಶಸ್ವೀಯಾಗಿ ಮುನ್ನೆಡೆಸಿಕೊಂಡು ಹೋಗುತ್ತಿದ್ದರು. 

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಅನೇಕ ಗಣ್ಯರು ಆಗಮಿಸಿ ಮೃತರ ಅಂತಿಮ ದರ್ಶನ ಪಡೆದರು. ಮೃತರ ಗೌರವಾರ್ಥ ಸಮಾಜ ಬಾಂಧವರು ತಮ್ಮ ಅಂಗಡಿಗಳನ್ನು ಮುಚ್ಚಿ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...