ಸಿ. ಆರ್.ಪಿ. ಎಫ್. ಯೋಧ ಚಂದ್ರ ಪಾರ್ಥಿವ ಶರೀರ ಹಾಸನಕ್ಕೆ ಆಗಮನ
ಹಾಸನ : ಛತ್ತೀಸ್ಘಡ್ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿಗಳ ಬಾಂಬ್ ದಾಳಿಯಲ್ಲಿ ಹುತಾತ್ಮರಾದ ಸಿ. ಆರ್.ಪಿ. ಎಫ್. ಯೋಧ ಅರಕಲಗೂಡು ತಾಲ್ಲೂಕಿನ ಕಸಬಾ ಹೋಬಳಿಯ ಹರದೂರು ಗ್ರಾಮದ ಚಂದ್ರ (29) ಅವರ ಪಾರ್ಥಿವ ಶರೀರವು ಹಾಸನಕ್ಕೆ ತರಲಾಗಿದ್ದು ನಗರದ ಹಾಸನಾಂಬ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಶೈತ್ಯಾಗಾರದಲ್ಲಿ ಇರಿಸಲಾಗಿದೆ.
ನಾಳೆ ಬೆಳಗ್ಗೆ ಸ್ವಗ್ರಾಮದಲ್ಲಿ ಸಾರ್ವಜನಿಕರ ದರ್ಶನ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.