ಭಟ್ಕಳ: ತಾಲೂಕಿನ ಮುರುಡೇಶ್ವರ ಬೈಲೂರು ಕ್ರಾಸ್ ರಾ.ಹೆ.೬೬ರಲ್ಲಿ ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಜರಗಿದೆ.
ಮೃತ ಬೈಕ್ ಚಾಲಕನನ್ನು ಹೊನ್ನಾವರ ತಲೂಕಿನ ಮಂಕಿ ಪೊಲೀಸ್ ಠಾಣೆ ವ್ಯಾಪ್ತಿಯ ಬಳಕೂರು ಗ್ರಾಮದ ನಿವಾಸಿ ಗಣೇಶ ಗೋವಿಂದ ನಾಯ್ಕ(೨೬) ಎಂದು ಗುರುತಿಸಲಾಗಿದೆ.
ಇವರು ಭಟ್ಕಳ ಕಡೆಯಿಂದ ಹೊನ್ನಾವರ ಕಡೆ ಹೋಗುತ್ತಿದ್ದಾಗ ಅಪರಿಚಿತ ವಾಹನವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಘಟನೆ ತಿಳಿಯುತ್ತಿದ್ದಂತೆ ಮುರುಡೇಶ್ವರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿದ್ದಾರೆ.