ಕಾರವಾರ; ಹೋಳಿ ಹಬ್ಬದ ದಿನದಂದೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದರಿಂದ ಹೋಳಿ ಆಡುವ ಸಾರ್ವಜನಿಕರು ಪರೀಕ್ಷಾರ್ಥಿಗಳಿಗೆ ಬಣ್ಣ ಹಚ್ಚಿ ತೊಂದರೆ ಕೊಡದಿರುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಜಿಲ್ಲೆಯಲ್ಲಿ ದಿನಾಂಕ: 20-03-2019 ಹಾಗೂ 21-03-2019 ರಂದು ಹೋಳಿ ಹಬ್ಬವನ್ನು ಆಚರಣೆ ಪ್ರಯುಕ್ತ ಬಣ್ಣ ಎರಚುವ ಕಾರ್ಯಕ್ರಮ ಇರುತ್ತದೆ. ದಿನಾಂಕ: 21-03-2019 ರಂದು ಬೆಳಿಗ್ಗೆ 09-30 ಗಂಟೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗಲಿದೆ. ಆದ್ದರಿಂದ ಬಣ್ಣ ಎರಚುವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು ಪರೀಕ್ಷೆಯಲ್ಲಿ ಪಾಲ್ಗೋಳ್ಳುವ ವಿದ್ಯಾರ್ಥಿಗಳಿಗೆ ಬಣ್ಣ ಎರಚಿ ತೊಂದರೆಯನ್ನುಂಟು ಮಾಡಬಾರದೆಂದು ಹಾಗೂ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದೇ ಕಾನೂನು ಸುವ್ಯವಸ್ಥೆ ಧಕ್ಕೆಯಾಗದಂತೆ ಶಾಂತರೀತಿಯಲ್ಲಿ ಹೋಳಿ ಹಬ್ಬ (ಬಣ್ಣ) ಆಚರಿಸಲು ಸಾರ್ವಜನಿಕರು ಸಹಕರಿಸಬೇಕೆಂದು ಪೊಲೀಸ ಪ್ರಕಟಣೆಯಲ್ಲಿ ತಿಳಿಸಲಾಗಿದೆ.