ಎಸ್‍ಎಸ್‍ಎಲ್‍ಸಿ ಪರೀಕ್ಷಾರ್ಥಿಗಳಿಗೆ ಬಣ್ಣ ಎರಚದಿರಲು ಮನವಿ 

Source: sonews | By Staff Correspondent | Published on 20th March 2019, 6:41 PM | Coastal News | Don't Miss |

ಕಾರವಾರ; ಹೋಳಿ ಹಬ್ಬದ ದಿನದಂದೆ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದರಿಂದ ಹೋಳಿ ಆಡುವ ಸಾರ್ವಜನಿಕರು ಪರೀಕ್ಷಾರ್ಥಿಗಳಿಗೆ ಬಣ್ಣ ಹಚ್ಚಿ ತೊಂದರೆ ಕೊಡದಿರುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಜಿಲ್ಲೆಯಲ್ಲಿ ದಿನಾಂಕ: 20-03-2019 ಹಾಗೂ 21-03-2019 ರಂದು ಹೋಳಿ ಹಬ್ಬವನ್ನು ಆಚರಣೆ ಪ್ರಯುಕ್ತ ಬಣ್ಣ ಎರಚುವ ಕಾರ್ಯಕ್ರಮ ಇರುತ್ತದೆ. ದಿನಾಂಕ: 21-03-2019 ರಂದು ಬೆಳಿಗ್ಗೆ 09-30 ಗಂಟೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗಲಿದೆ. ಆದ್ದರಿಂದ ಬಣ್ಣ ಎರಚುವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು ಪರೀಕ್ಷೆಯಲ್ಲಿ ಪಾಲ್ಗೋಳ್ಳುವ ವಿದ್ಯಾರ್ಥಿಗಳಿಗೆ ಬಣ್ಣ ಎರಚಿ ತೊಂದರೆಯನ್ನುಂಟು ಮಾಡಬಾರದೆಂದು ಹಾಗೂ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದೇ ಕಾನೂನು ಸುವ್ಯವಸ್ಥೆ ಧಕ್ಕೆಯಾಗದಂತೆ ಶಾಂತರೀತಿಯಲ್ಲಿ ಹೋಳಿ ಹಬ್ಬ (ಬಣ್ಣ) ಆಚರಿಸಲು ಸಾರ್ವಜನಿಕರು ಸಹಕರಿಸಬೇಕೆಂದು ಪೊಲೀಸ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...