ಹೊನ್ನಾವರ ತಾಲೂಕು ಮಾಗೋಡಿನಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ; ಉದ್ವಿಘ್ನ ವಾತವರಣ; ಸೆ.೧೪೪ ಜಾರಿ

Source: sonews | By Staff Correspondent | Published on 14th December 2017, 6:18 PM | Coastal News | State News | Special Report | Don't Miss |

ಹೊನ್ನಾವರ: ತಾಲೂಕಿನ  ಮಾಗೋಡದ ಕೊಡ್ಲಗದ್ದೆ ಸಮೀಪ  ಶಾಲೆಗೆ ತೆರಳಿದಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ದುಷ್ಕರ್ಮಿಗಳು ಗುರುವಾರ  ಹಲ್ಲೆ  ನಡೆಸಿದ್ದು, ಹೊನ್ನಾವರದಲ್ಲಿ ಭಯದ ಸ್ಥಿತಿ ಮರುಕಳಿಸಿದೆ.

ಕೊಡ್ಲಗದ್ದೆಯ ಕಾವ್ಯಾ ಚಂದ್ರಶೇಖರ ನಾಯ್ಕ (14) ಮಾಗೋಡದ ಶಾಲೆಗೆ ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂಗಡಿ ಮುಂಗಟ್ಟುಗಳು ದಿಢೀರ್ ಬಾಗಿಲು ಮುಚ್ಚಿದ್ದು, 144 ಸೆಕ್ಷನ್ ಜಾರಿಯಲ್ಲಿದೆ ಎಂದು ಪೊಲೀಸರು ಘೋಷಿಸಿದ್ದಾರೆ. ಚೂರಿ ಇರಿತಕ್ಕೆ ಸಂಬಂಧಿಸಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಹೊನ್ನಾವರದ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮುಸ್ಲಿಮರ ಮಸೀದಿ,ಮನೆಗಳ ಮೇಲೆ ಕಲ್ಲು ತೂರಾಟ ಕೆಲವಡೆ ಬೆಂಕಿ; ಮಾಗೋಡಿನಲ್ಲಿ ಬುರ್ಖಾಧಾರಿಗಳಿಬ್ಬರು ವಿದ್ಯಾರ್ಥಿನಿಯೊಬ್ಬಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ವದಂತಿ ಹರಡುತ್ತಿದ್ದಂತೆ ಕಿಡಿಗೇಡಿಗಳು ಕೆಲವೆಡೆ ಹಿಂಸಾಚಾರಕ್ಕೆ ಇಳಿದಿದ್ದಾರೆ ಎಂದು ವರದಿಯಾಗಿದೆ.

ಕುಚ್ಚೋಡಿ ಎಂಬಲ್ಲಿ ಮಸೀದಿಯೊಂದರ ಹೊರಗೆ ಇಡಲಾಗಿದ್ದ ನಮಾಝ್ ನಿರ್ವಹಿಸಲು ಬಳಸುವ ಮುಸಲ್ಲಾಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆಂದು ಆರೋಪಿಸಲಾಗಿದೆ. ಇನ್ನೊಂದು ಘಟನೆಯಲ್ಲಿ ಮಾಗೋಡಿನ ಬಾಷಾ ಎಂಬವರ ಮನೆಗೆ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ. ಅಲ್ಲದೆ ಅವರ ಮನೆಯ ಎದುರು ನಿಲ್ಲಿಸಿದ್ದ ಬೈಕನ್ನು ಹಾನಿಗೊಳಿಸಿದ್ದಾರೆ ಎಂದು ಬಾಷಾ ಆರೋಪಿಸಿದ್ದಾರೆ.

ಹೊನ್ನಾವರ ಮತ್ತಿತರ ಕಡೆಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿ ಅಂಗಡಿಯ ಮಾಲಕರು ಕೆಲವೆಡೆ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ಇನ್ನೂ ಕೆಲವಡೆ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಶಾಲೆಗಳಿಗೆ ರಜೆ: ವಿದ್ಯಾರ್ಥಿನಿಯೊಬ್ಬಳಿಗೆ ಬುರ್ಖಾಧಾರಿಗಳು ಹಲ್ಲೆ ನಡೆಸಿದ್ದಾರೆಂಬ ವದಂತಿ ಹರಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊನ್ನಾವರದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸೆಕ್ಷನ್ 144 ಜಾರಿಗೊಳಿಸಿದ್ದು, ಅಲ್ಲಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಹಲ್ಲೆ ಮಾಡಿದವರು ಬುರ್ಖಾಧಾರಿಗಳಲ್ಲ : ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ಇಬ್ಬರು ಬುರ್ಖಾಧಾರಿಗಳು ಚೂರಿಯಿಂದ ಇರಿದಿದ್ದಾರೆ ಎನ್ನುವುದು ಸುಳ್ಳು ಸುದ್ದಿಯಾಗಿದೆ ಎಂದು ಉತ್ತರ ಕನ್ನಡ ಎಸ್ಪಿ ವಿನಾಯಕ ಪಾಟೀಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವಿದ್ಯಾರ್ಥಿನಿ ಶಾಲೆಗೆ ತೆರಳುತ್ತಿದ್ದ ಸಂದರ್ಭ ಇಬ್ಬರು ಬುರ್ಖಾಧಾರಿಗಳು ಆಗಮಿಸಿ  ಬೆದರಿಕೆಯೊಡ್ಡಿ ಚೂರಿಯಿಂದ ಇರಿದಿದ್ದಾರೆ ಎಂದು ವಿದ್ಯಾರ್ಥಿನಿಯದ್ದೆನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಬೆಳಗ್ಗೆಯಿಂದ ವೈರಲ್ ಆಗುತ್ತಿದೆ. ಈ ಬಗ್ಗೆ ಮಾಧ್ಯಮಗಳು ಜಿಲ್ಲಾ ವರಿಷ್ಠಾಧಿಕಾರಿಯವರನ್ನು ಸಂಪರ್ಕಿಸಿದಾಗ ವಿದ್ಯಾರ್ಥಿನಿಗೆ ಬುರ್ಖಾಧಾರಿಗಳಿಬ್ಬರು ಚೂರಿಯಿಂದ ಇರಿದಿದ್ದಾರೆ ಎಂಬುದು ಸುಳ್ಳು ಸುದ್ದಿ. ಇಬ್ಬರು ಅಪರಿಚಿತರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆಕೆ ಹೇಳಿಕೆ ನೀಡಿದ್ದಾಳೆ. ಅದರಂತೆ ನಾವು ದೂರನ್ನು ದಾಖಲಿಸಿಕೊಂಡಿದ್ದೇವೆ ಎಂದು ತಿಳಿಸಿದರು.

"ಅಪರಿಚಿತ ಇಬ್ಬರು ಆಕೆಯನ್ನು ಚೂರಿಯಿಂದ ಇರಿದಿದ್ದಾರೆಯೇ" ಎಂಬ ಪ್ರಶ್ನೆಗೆ ಹಲ್ಲೆ ನಡೆಸಿದ್ದಾರೆ ಎಂದು ಮಾತ್ರ ಆಕೆ ದೂರಿನಲ್ಲಿ ತಿಳಿಸಿದ್ದಾಳೆ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.

ವದಂತಿಗಳನ್ನು ನಂಬದಂತೆ ಮನವಿ: ಉತ್ತರಕನ್ನಡ ಜಿಲ್ಲಾದ್ಯಂತ ವಿವಿಧ ಸಾಮಾಜಿಕ ಜಾಲಾತಾಣಗಳಲ್ಲಿ ಘಟನೆಗಳನ್ನು ವೈಭವೀಕರಿಸಿ ಸುಳ್ಳು ವದಂತಿಗಳನ್ನು ಹರಡಲಾಗುತ್ತಿದ್ದು  ಸಾರ್ವಜನಿಕರು ಯಾವುದೇ ಕಾರಣಕ್ಕೂ ಕಿವಿಗೊಡಬಾರದೆಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. ವಿದ್ಯಾರ್ಥಿನಿಯ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ಕುರಿತಂತೆ ಪೊಲೀಸರು ಈಗಾಗಲೆ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಅವರು ತಿಳೀಸಿದ್ದಾರೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...