ಹುಬ್ಬಳ್ಳಿ: ಧಾರವಾಡ ಜಿಲ್ಲೆ ಬೆಟದೂರು ಗ್ರಾಮದಲ್ಲಿ ಒಂದೇ ದಿನದಲ್ಲಿ ೧೦೧ ಶೌಚಾಲಯ ನಿರ್ಮಾಣಕ್ಕೆ ಅನಂತ ಕುಮಾರ್ ಚಾಲನೆ

Source: so english | By Arshad Koppa | Published on 18th September 2017, 8:11 AM | State News |

ಹುಬ್ಬಳ್ಳಿ, ಸೆ ೧೭: ಸ್ವಚ್ಚತಾ ಅಭಿಯಾನದ ಅಂಗವಾಗಿ ಧಾರವಾಡ ಜಿಲ್ಲೆ ಬೆಟದೂರು ಗ್ರಾಮದಲ್ಲಿ ಒಂದೇ ದಿನದಲ್ಲಿ ೧೦೧ ಶೌಚಾಲಯ ನಿರ್ಮಾಣಕ್ಕೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಚಾಲನೆ ನೀಡಿದರು. ಧಾರವಾಡ ಜಿಲ್ಲೆಯನ್ನ ಬಯಲು ಬಹಿರ್ದಸೆ ಮುಕ್ತ ಜಿಲ್ಲೆಯಾಗಿಸಲು ಧಾರವಡ ಜಿಲ್ಲಾ ಪಂಚಾಯತಿ ಕೇಂದ್ರ ಸರ್ಕಾರ ಸ್ವಚ್ಚತಾ ಮಿಷನ್ ನಡಿ ಶೌಚಾಲಯ ನಿರ್ಮಾಣ ಕಾರ್ಯ ಆರಂಭಿಸಿದೆ. ಈಗಾಗಲೇ ಧಾರವಾಡ ಜಿಲ್ಲೆಯಲ್ಲಿ ೧ ಲಕ್ಷ ೪೪ ಸಾವಿರ ಕುಟುಂಬಗಳ ಪೈಕಿ ೧ ಲಕ್ಷ ೨೦ ಸಾವಿರ ಕುಟುಂಬಗಳು ಶೌಚಾಲಯ ವ್ಯವಸ್ಥೆ ಹೊಂದಿದ್ದು, ಇನ್ನುಳಿದ ೨೪ ಸಾವಿರ ಕುಟುಂಬಗಳಿಗೆ ಶೌಚಾಲಯ ನಿರ್ಮಿಸಿಕೊಡುವ ಗುರಿ ಹೊಂದಲಾಗಿದೆ. ಈಗಾಗಲೇ ೧೩ ಸಾವಿರ ಶೌಚಾಲಯಗಳ ನಿರ್ಮಾಣಕ್ಕೆ ಕಾಮಗಾರಿ ಆದೇಶ ನೀಡಲಾಗಿದೆ. ಇವತ್ತು ಬೆಟದೂರು ಗ್ರಾಮಕ್ಕೆ ಆಗಮಿಸಿದ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ೧೦೧ ಶೌಚಾಲಯ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಬಳಿಕ ಗ್ರಾಮದ ಪಂಚಾಯತಿ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ  ಬಯಲು ಬಹಿರ್ದಸೆ ಮುಕ್ತ ಜಿಲ್ಲೆಯನ್ನಾಗಿಸಲು ಅಧಿಕಾರಿಗಳು ಹಾಗೂ ನಾಗರಿಕರು ಪಣತೊಟ್ಟಿದ್ದಾರೆ ಎಂದು ಶ್ಲಾಘಿಸಿದರು. ಇದೇ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನ ಗ್ರಾಮಸ್ಥರ ಸಮ್ಮುಖದಲ್ಲಿ ಕೆಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಬಳಿಕ ಸಚಿವರು ವೀರಯೋಧ ಹನುಮಂತಪ್ಪ ಕೊಪ್ಪದ ಸಮಾಧಿಗೆ ನಮಿಸಿ, ಕೊಪ್ಪದ ಮನೆಗೆ ಭೇಟಿ ನೀಡಿ ಕುಟುಂಬದವರನ್ನ ಮಾತನಾಡಿಸಿದರು.
 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...