ಹುಬ್ಬಳ್ಳಿಯಲ್ಲಿ ಮತ್ತೆ ಹೆಚ್ಚಿದ ನಾಯಿಯ ದಾಳಿ

Source: so english | By Arshad Koppa | Published on 19th August 2017, 8:28 AM | State News | Guest Editorial |

ಹುಬ್ಬಳ್ಳಿ- ಧಾರವಾಡ  ಮಹಾನಗರ ಪಾಲಿಕೆ ವಾರ್ಡ್ ನಂಬರ್ ೬೬ ರ ವ್ಯಾಪ್ತಿಯಲ್ಲಿ ಬರುವ ಜವಳಿ ಪ್ಲಾಟ್ ನಲ್ಲಿ ಹುಚ್ಚು ನಾಯಿಯೊಂದು ೬ ಜನ ಮಕ್ಕಳು ಸೇರಿದಂತೆ ೧೦ ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದೆ . ಮಕ್ಕಳು  ಮನೆಯ ಮುಂದೆ ಆಟ ಆಡುತ್ತಿದ್ದ ಸಂದರ್ಭದಲ್ಲಿ ಹುಚ್ಚು ನಾಯಿ ಮಕ್ಕಳ ಮೇಲೆ ಏಕಾಏಕಿ ದಾಳಿ ಮಾಡಿದೆ . ಇದನ್ನು ಕಂಡ ಅಲ್ಲಿನ ಜನ ನಾಯಿ ದಾಳಿಯನ್ನು ತಡೆಯಲು ಬಂದಿದ್ದಾರೆ . ಆಗ ಹುಚ್ಚು ನಾಯಿ ಅವರ ಮೇಲೆಯೂ ದಾಳಿ ಮಾಡಿದೆ ಹೀಗಾಗಿ ೬ ಜನ ಮಕ್ಕಳು ಸೇರಿದಂತೆ ೧೦ ಕ್ಕೂ ಹೆಚ್ಚು ಜನರಿಗೆ ಹುಚ್ಚು ನಾಯಿ ಕಡಿದಿದೆ . ಪರಿಣಾಮ ಗಾಯಾಳುಗಳನ್ನು ನಗರದ ಚಿಟಗುಬ್ನಿ ಆಸ್ಪತ್ರೆ ಮತ್ತು ಗಂಭೀರವಾಗಿ ಗಾಯಗೊಂಡವರನ್ನು ಕಿಮ್ಸ್ ದಾಖಲು ಮಾಡಲಾಗಿದೆ . ಇನ್ನು ನಗರದಲ್ಲಿ ಪದೆ ಪದೆ ನಾಯಿ ಹಾವಳಿ ಹೆಚ್ಚಾಗಿದ್ದು ಪಾಲಿಕೆ ಯಾವುದೇ ಕ್ರಮ ಕೈಗೊಂಡಿಲ್ಲಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ‘ಸೇ ನೋ ಚೀನಾ ಪ್ರಾಡಕ್ಟ್ ಆಂಧೋಲನ’ 
ಹುಬ್ಬಳ್ಳಿ ಆ.17- ಚೀನಾ ವಸ್ತುಗಳನ್ನು ಬಹಿಷ್ಕರಿಸುವಂತೆ ‘ಸೇ ನೋ ಚೀನಾ ಪ್ರಾಡಕ್ಟ್ ಆಂಧೋಲನವನ್ನು ಆ.23 ಮತ್ತು 24 ರಂದು ಸಂಜೆ 5 ಗಂಟೆಗೆ ನಗರದ ಇಂದಿರಾ ಗ್ಲಾಸ್‍ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕ ಮತ್ತು ಹುಬ್ಬಳ್ಳಿ ನಿವಾಸಿ ಶ್ರೀನಿವಾಸ ಮಟ್ಟಿ ತಿಳಿಸಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಬ್ಬಗಳು ಹತ್ತಿರ ಬರುತ್ತಿರುವುದರಿಂದ ಮಾರುಕಟ್ಟೆಗೆ ಚೀನಾ ವಸ್ತುಗಳು ಲಗ್ಗೆಯಿಡುತ್ತವೆ. ಮಾರುಕಟ್ಟೆಗೆ ಆಗಮಿಸುವ ಜನರಿಗೆ ಚೀನಾ ವಸ್ತುಗಳನ್ನು ಕೊಳ್ಳದಿರುವಂತೆ ತಿಳುವಳಿಕೆ ನೀಡಲಾಗುವುದು ಎಂದರು.
ನಗರದ ಪ್ರತಿಷ್ಠಿತ ಮಾರುಕಟ್ಟೆ ಪ್ರದೇಶಗಳಾದ ಶಾ ಬಜಾರ, ದುರ್ಗದಬೈಲ್, ಮಾಲ್‍ಗಳಲ್ಲಿ ಹೋಗಿ ಜನರಿಗೆ ತಿಳುವಳಿಕೆ ನೀಡಲಾಗುತ್ತದೆ, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಿಂದ ಪ್ರಚಾರ ಮತ್ತು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ 30 ರಿಂದ 40 ಜನರು ನನ್ನ ಜೊತೆ ಕೈಗೂಡಿಸಿದ್ದಾರೆ ಎಂದರು.
ಈ ಒಂದು ಆಂಧೋಲನಕ್ಕೆ ಬೆಂಬಲಿಸುವವರು ಅಂದು ಸಂಜೆ 5 ಗಂಟೆಗೆ ನಗರದ ಇಂದಿರಾ ಗ್ಲಾಸ್ ಹೌಸ್‍ಗೆ ಬರುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...