ಹುಬ್ಬಳ್ಳಿ: ಆ ೧೨ ರಂದು ಕು.ಶೃತಿ ಮುಸಳೆ ಸ್ಥಾಪಿಸಿರುವ ಶೃತಿ ನೃತ್ಯ ಅಕಾಡೆಮಿ(ರಿ)ಯ ಉದ್ಟಾಟನೆ

Source: so english | By Arshad Koppa | Published on 12th August 2017, 8:33 AM | State News | Guest Editorial |

ಹುಬ್ಬಳ್ಳಿ : ಬಾಲ್ಯದಿಂದಲೂ ನೃತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಕು.ಶೃತಿ ಮುಸಳೆ ಸ್ಥಾಪಿಸಿರುವ ಶೃತಿ ನೃತ್ಯ ಅಕಾಡೆಮಿ(ರಿ)ಯ ಉದ್ಘಾಟನಾ ಸಮಾರಂಭ ಇದೇ ದಿ.೧೨ರಂದು ಸಂಜೆ ೫ಗಂಟೆಗೆ ಇಲ್ಲಿನ ಆದರ್ಶನಗರದ ಡಾ.ಡಿ.ಎಸ್.ಕರ್ಕಿ ಭವನದಲ್ಲಿ ನಡೆಯಲಿದೆ.
ನಗರದ ಪತ್ರಕರ್ತರ ಭವನದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷೆ ಶೃತಿ ಮುಸಳೆ ಅವರು, ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ್ ಅಕಾಡೆಮಿಯನ್ನು ಉದ್ಘಾಟಿಸಲಿದ್ದಾರೆಂದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪಂ.ಶಂಕರಾಚಾರ್ಯ, ವರದಾ ಕಡ್ಲಾಸ್ಕರ, ರಂಗಾಯಣ ಮಾಜಿ ಅಧ್ಯಕ್ಷ ಸುಭಾಸ ನರೇಂದ್ರ ಆಗಮಿಸಲಿದ್ದು, ಇದೇ ಸಂದರ್ಭದಲ್ಲಿ ಮಂಗಳೂರಿನ ಉದಯೋನ್ಮುಖ ನೃತ್ಯ ಕಲಾವಿದ ಅಭಿಲಾಷ ಉಡಪರವರಿಗೆ ಪ್ರಥಮ ಸನ್ಮಾನವನ್ನು ಅರ್ಪಿಸಲಿದ್ದೇವೆ. ಅಲ್ಲದೇ ಇದೇ ವೇಳೆ ಸಂಸ್ಥೆಯ ಲಾಂಛನ ಬಿಡುಗಡೆಗೊಳ್ಳಲಿದೆ ಅವರು ತಿಳಿಸಿದರು.
ಉದ್ಘಾಟನೆ ಬಳಿಕ ಸಂಸ್ಥೆಯ ಸಂಸ್ಥಾಪಕಿ ಕು.ಶೃತಿ ಮುಸಳೆ ಮತ್ತು ಅಭಿಲಾಷ ಉಡಪ, ವಿಕಲ ಚೇತನ ಬಾಲಕಿ ಕು.ವೈಭವಿ ಕುಲಕರ್ಣಿ ಅವರಿಂದ ನೃತ್ಯ ಪ್ರದರ್ಶನ ಜರುಗಲಿದೆ ಎಂದರು.
ಇದಕ್ಕೂ ಮುನ್ನ ಅಂದು ಬೆಳಿಗ್ಗೆ ೧೦ಗಂಟೆಗೆ ನಗರದ ಗೋಕುಲರಸ್ತೆ ಗ್ರೀನಗಾರ್ಡನ್ ಉದ್ಯಾನವನದಲ್ಲಿ ಪರಿಸರ ಜನಜಾಗೃತಿ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಪ್ನಾ ಮುಸಳೆ, ಕಿರಣ.ಎಚ್.ಎಸ್., ಮುರಳಿಧರ ಮುಸಳೆ, ಪಾಲಿಕೆ ಸದಸ್ಯ ಲಕ್ಷ್ಮಣ ಗಂಡಗಾಳೇಕರ ಮತ್ತಿತರರಿದ್ದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...