ಹುಬ್ಬಳ್ಳಿ:ಹುಬ್ಬಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ-ಇಬ್ಬರು ಕುಖ್ಯಾತ ಅಂತರರಾಜ್ಯ ಕಳ್ಳರ ಬಂಧನ.

Source: so english | By Arshad Koppa | Published on 11th August 2017, 9:12 AM | State News | Special Report |

ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳ ರಾಜ್ಯಗಳ ಪೊಲೀಸರಿಗೆ ಚಳ್ಳೆಹಣ್ಣ ತಿನಿಸಿ, ಮನೆ ಕಳ್ಳತನ, ದರೋಡೆ ಕೃತ್ಯದಲ್ಲಿ ಭಾಗಿಯಾಗಿದ್ದ, ಇಬ್ಬರು ಕುಖ್ಯಾತ ಅಂತರ ರಾಜ್ಯ ಮನೆ ಕಳ್ಳರನ್ನು ಬಂಧಿಸುವಲ್ಲಿ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. 


ಒಟ್ಟು 42 ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಬೆಳಗಾವಿ ಮೂಲದ ಪ್ರಕಾಶ್ ಪಾಟೀಲ್, ಗೋವಾ ಮೂಲದ ರವಿ ಧನರಾಜ್ ನನ್ನ ಬಂಧಿಸಲಾಗಿದೆ. ಮತ್ತೋರ್ವ ಆರೋಪಿ ತಂಗರಾಜ್ಯ ಪರಾರಿಯಾಗಿದ್ದಾನೆ. ಬಂಧಿತ ಆರೋಪಿಗಳಿಂದ 23 ಲಕ್ಷ ಮೌಲ್ಯದ 832  ಗ್ರಾಂ ಚಿನ್ನ ಆಭರಣ, ಒಂದು ಕೇಜಿ ಬೆಳ್ಳಿ.
ಒಂದು ಮೇಡ್ ಇನ್ ಯುಎಸ್ ಎ ಪಿಸ್ತೂಲ್.(7.65 ಎಂ.ಎಂ) 
ಮೂರು ಜೀವಂತ ಗುಂಡುಗಳು,
ಬಜಾಜ್ ಬೈಕ್ , ನಾಲ್ಕು ಮೊಬೈಲ್. ಮನೆಗಳ್ಳತನಕ್ಕೆ ಬಳಸುತ್ತಿದ್ದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 
ಆರೋಪಿಗಳು ಹುಬ್ಬಳ್ಳಿಯ ಲ್ಲಿ ಬಾಡಿಗೆ ಮನೆ ಮಾಡಿ, ಒಂಟಿ ಮನೆಗಳನ್ನ ಟಾರ್ಗೆಟ್ ಮಾಡುತ್ತಿದ್ದರು, ಬೀಗ ಹಾಕಿದ ಮನೆಗಳನ್ನ ಟಾರ್ಗೆಟ್ ಮಾಡಿ, ದರೋಡೆ ಮಾಡುತ್ತಿದ್ದರು. ಯಾರಾದರು ಕಂಡ್ರೆ ಅಂತವರನ್ನ ಪಿಸ್ತೂಲ್ ತೊರಿಸಿ ಬೆದರಿಸಿ ಪರಾರಿಯಾಗುತ್ತಿದ್ದರು ಎನ್ನಲಾಗಿದೆ. ಎರಡು ತಿಂಗಳ ಹಿಂದೇ ಹುಬ್ಬಳ್ಳಿಯ 
ಸಿಸಿಬಿ ಸರ್ಕಲ್ ಇನ್ಸ್ಪೆಕ್ಟರ್  ಮಹಾಂತೇಶ್ ಸಜ್ಜನ್ ಅವರ ನವನಗರ ಮನೆ ದರೋಡೆ ಸೇರಿದಂತೆ ಅವಳಿ ನಗರದಲ್ಲಿ ಎರಡು ಮನೆಗಳ್ಳತನ ಪ್ರಕರಣದಲ್ಲಿ ಅವಳಿ ನಗರ ಪೊಲೀಸರಿಗೆ ಬೇಕಾಗಿದ್ದರು.  ಪ್ರಕರಣದಲ್ಲಿ ಆರೋಪಿಗಳು ಭಾಗಿಯಾಗಿದ್ದರು. ರಾಜ್ಯದಲ್ಲಿ 10 ಮನೆಗಳ್ಳತನ ಪ್ರಕರಣಗಳು, ಮಹಾರಾಷ್ಟ್ರ ರಾಜ್ಯದಲ್ಲಿ 10 ಹಾಗೂ ಗೋವಾ ರಾಜ್ಯದ 6 ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಆರೋಪಿ ಗಳ ಬಂಧನದ ಕುರಿತು ಮಾಹಿತಿ ನೀಡಿದ ಹುಬ್ಬಳ್ಳಿ ಧಾರವಾಡ ಉಪ ‌ಪೋಲೀಸ್ ಆಯುಕ್ತ, ಪಿಎಸ್  ನ್ಯಾಮಗೌಡ ಆರೋಪಿಗಳ ಬಂಧಿಸಿದ ಪೊಲೀಸರಿಗೆ ಬಹುಮಾನ  ಘೋಷಿಸಿದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...