ಹೊನ್ನಾವರ ; ಅಕ್ರಮ ಜಾನುವಾರು ಸಾಗಾಟ ಆರೋಪ; ಇಬ್ಬರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ; ನಾಲ್ವರ ಬಂಧನ

Source: sonews | By Staff Correspondent | Published on 8th March 2018, 10:56 PM | Coastal News | State News | Don't Miss |

ಹೊನ್ನಾವರ: ಅಂಕೋಲದಿಂದ ಭಟ್ಕಳಕ್ಕೆ ಬುಲೇರೊ ವಾಹನದಲ್ಲಿ 2ಎಮ್ಮೆ ಹಾಗೂ 1 ಎತ್ತನ್ನು ಸಾಗಾಟ ಮಾಡುತ್ತಿದ್ದಾಗ ಹೆದ್ದಾರಿಯಲ್ಲಿ ವಾಹನವನ್ನು ತಡೆದ ನೂರಕ್ಕೂ ಅಧಿಕ ಸಂಘಪರಿವಾರಕ್ಕೆ ಸೇರಿದ ಕಾರ್ಯಕರ್ತರೆನ್ನಲಾದವರು ಹೊನ್ನಾವರ ತಾಲೂಕಿನ ಕರ್ಕಿಯಲ್ಲಿ ಹೆದ್ದಾರಿಯನ್ನು ತಡೆದು ಭಟ್ಕಳದ ಇಬ್ಬರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ   ನಡೆದ ಘಟನೆ  ಬುಧವಾರ ತಡರಾತ್ರಿ ನಡೆದಿದೆ.

ಹಲ್ಲೆಗೊಳಗಾದ ಯುವಕರನ್ನು ಭಟ್ಕಳದ ಮಗ್ದೂಮ್ ಕಾಲೋನಿಯ ನೂರುಲ್ ಅಮೀನ್(40) ಹಾಗೂ ಮುಗಳೀಹೊಂಡದ ಗುಫ್ರಾನ್ ಪೋತೆ(35) ಎಂದು ಗುರುತಿಸಲಾಗಿದೆ. ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ಪಾಟೀಲ್ ಮಾಹಿತಿ ನೀಡಿದ್ದಾರೆ.ಅಲ್ಲದೆ ನೂರಕ್ಕೂ ಹೆಚ್ಚು ಮಂದಿಯ ವಿರುದ್ಧ ಕಾನೂನು ಕೈಗೆತ್ತಿಗೊಂಡಿರುವ ಪ್ರಕರಣವನ್ನು ದಾಖಲಿಸಲಾಗಿದೆ. ಗಾಯಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಭಟ್ಕಳದಲ್ಲಿ ತ್ವೇಷಮಯ ವಾತವರಣ ನಿರ್ಮಾಣಗೊಂಡಿದ್ದು ಪೊಲೀಸರು ಕಟ್ಟೆಚ್ಚರದ ಕ್ರಮ ಜರುಗಿಸಿದ್ಧಾರೆ.

ಘಟನೆಯ ವಿವರ: ಬುಧವಾರ ರಾತ್ರಿ ಅಂಕೋಲದಿಂದ ಎರಡು ಎಮ್ಮೆ ಹಾಗೂ ಒಂದು ಎತ್ತನ್ನು ತಮ್ಮ ಬುಲೆರೋ ವಾಹನದಲ್ಲಿ ಸಾಗಿಸಿಕೊಂಡು ಬರುತ್ತಿದ್ದ ವಿಷಯವನ್ನು ಮೊದಲೇ ಅರಿತುಕೊಂಡಿದ್ದ ಹೊನ್ನಾವರದ ನೂರಾರು ಮಂದಿ ಸಂಘಪರಿವಾರದ ಕಾರ್ಯಕರ್ತರು ರಾ.ಹೆ. ಯಲ್ಲಿ ತಡರಾತ್ರಿ ವಾಹನವನ್ನು ತಡೆದು ಅವರ ಮೇಲೆ ರಾಡು, ಬಾಂಬು ಹಾಗೂ ಸಲಾಕೆಗಳಿಂದ ಹಲ್ಲೆ ಮಾಡಿದ್ದಾರೆ. ವಾಹನವನ್ನು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಜಖಂಗೊಳಿಸಿದ್ದಾರೆ. ಘಟನೆಯನ್ನು ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಹಲ್ಲೆಕೋರರಿಂದ ಇಬ್ಬರ ಪ್ರಾಣವನ್ನು ರಕ್ಷಿಸಿದ್ದು ಗಾಯಾಳುಗಳನ್ನು ಭಟ್ಕಳಕ್ಕೆ ಸಾಗಿಸಿದರೆ ಅಲ್ಲಿ ಪರಿಸ್ಥಿತಿ ಹದಗಡೆಬಹುದು ಎನ್ನುವ ಉದ್ದೇಶದಿಂದ ಕಾರವಾರ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಅಲ್ಲಿ ಅವರನ್ನು ಚಿಕಿತ್ಸೆ ನೀಡಿದ್ದಾರೆ. ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದು ನೂರಕ್ಕೂ ಅಧಿಕ ಮಂದಿಯ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಗುರುವಾರ ಗಾಯಳುಗಳ ಸಂಬಂಧಿಕರು ಕಾರವಾರ ಆಸ್ಪತ್ರೆಗೆ ಭೇಟಿ ನೀಡಿದ್ದು ಅವರ ಸ್ಥಿತಿಯನ್ನು ಕಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಮುಂದಾಗಿದ್ದು ಅಂಬುಲನ್ಸ್ ನಲ್ಲಿ  ಅವರನ್ನು ಕರೆದುಕೊಂಡು ಹೋಗುತ್ತಿರಬೇಕಾದರೆ ಭಟ್ಕಳದ ಸರ್ಕಲ್ ಬಳಿ ನೂರಾರು ಮಂದಿ ಸೇರಿದ್ದು ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಮಧ್ಯಸ್ಥಿಕೆಯನ್ನು ವಹಿಸಿ ವಾತವರಣ ತಿಳಿಗೊಳಿಸಿದ್ದಾರೆ. ಅಲ್ಲದೆ ಗಾಯಾಳುಗಳನ್ನು ಭೇಟಿಯಾಗಲು ಯಾರಿಗೂ ಅವಕಾಶ ಮಾಡಿಕೊಡದೆ ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲಾಗಿದೆ. 

ಆರೋಪಿಗಳು ಕಾನೂನು ಕೈಗೆತ್ತಿಕೊಂಡಿದ್ದು ಹೊಡೆಯುವಂತಹ ಹಕ್ಕನ್ನು ಅವರಿಗೆ ನೀಡಿದ್ದು ಯಾರು ಎನ್ನುವ ಪ್ರತಿರೋಧದ ಮಾತುಗಳು ಎಲ್ಲೆಡೆ ಕೇಳಿಬರುತ್ತಿದ್ದು ಅರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಕೂಗು ಕೇಳಿಬರುತ್ತಿದೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...