ಸೆ.17 ರಿಂದ ‘ಸೆಕ್ಯುರಿಟಿ ಗಾಡ್ರ್ಸ್’ ಹುದ್ದೆಗಳಿಗಾಗಿ ಸಂದರ್ಶನ ಶಿಬಿರ

Source: sonews | By Staff Correspondent | Published on 12th September 2018, 5:25 PM | Coastal News | Interview | Don't Miss |

ಕಾರವಾರ: ಜಿಲ್ಲಾ ಯೋಜನಾ ಉದ್ಯೋಗ ವಿನಿಮಯ ಕಚೇರಿ, ವತಿಯಿಂದ ಸೆಪ್ಟಂಬರ 17 ರಿಂದ 19ರವರೆಗೆ ಬೆಳಗ್ಗೆ 10.30 ರಿಂದ ಸಂಜೆ 4.30 ರ ವರೆಗೆ “ಸೆಕ್ಯುರಿಟಿ ಇಂಟಲಿಜೆನ್ಸ್ ಸರ್ವೀಸಸ್” (SIS), ಬೆಂಗಳೂರು ಇವರ ಮೂಲಕ ‘ಸೆಕ್ಯುರಿಟಿ ಗಾಡ್ರ್ಸ್’ ಹುದ್ದೆಗಳಿಗಾಗಿ ಸಂದರ್ಶನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. 

ಎಸ್.ಎಸ್.ಎಲ್.ಸಿ., ಪಿಯುಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನ ಶಿಬಿರಗಳಲ್ಲಿ ಭಾಗವಹಿಸಬಹುದಾಗಿರುತ್ತದೆ.
  
ಸೆಪ್ಟಂಬರ 17 ರಂದು ಯೋಜನಾ ಉದ್ಯೋಗ ವಿನಿಮಯ ಕಛೇರಿ, ಶ್ರೀಮತಿ ಪ್ರೇಮಾಬಾಯಿ ರಾಯ್ಕರ, ಪಂಜಾಬ್ ನ್ಯಾಶನಲ ಬ್ಯಾಂಕ ಹತ್ತಿರ, ಓಲ್ಡ, ಎಸ್.ಬಿ.ಎಮ್. ಬ್ಯಾಂಕ್ ಎದುರು, ಕಾರವಾರದಲ್ಲಿ ಅಂಕೋಲಾ, ಜೋಯಿಡಾ, ಹಳಿಯಾಳ, ದಾಂಡೇಲಿ ಹಾಗೂ ಕಾರವಾರ ತಾಲ್ಲೂಕುಗಳ ಅಭ್ಯರ್ಥಿಗಳು ಭಾಗವಹಿಸಬಹುದಾಗಿರುತ್ತದೆ.
 
ಸೆಪ್ಟಂಬರ 18 ರಂದು ಹೊನ್ನಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್.ಡಿ.ಎಮ್.) ಕಾಲೇಜನಲ್ಲಿ ಹೊನ್ನಾವರ, ಕುಮಟಾ, ಭಟ್ಕಳ ತಾಲ್ಲೂಕುಗಳ ಅಭ್ಯರ್ಥಿಗಳು ಹಾಗೂ ಸೆ.: 19 ರಂದು ಶಿರಸಿಯ ಮಲೆನಾಡ ಎಜ್ಯೂಕೇಶನ್ ಸೊಸೈಟಿ (ಎಮ್.ಇ.ಎಸ್.), ಕರಿಯರ್ ಗೈಡೆನ್ಸ ಸೆಂಟರ್‍ದಲ್ಲಿ ಸಿದ್ದಾಪುರ, ಯಲ್ಲಾಪುರ, ಮುಂಡಗೋಡ ಹಾಗೂ ಶಿರಸಿ ತಾಲ್ಲೂಕಗಳ ಅಭ್ಯರ್ಥಿಗಳಿಗಾಗಿ ಆಯ್ಕೆ ಸಂದರ್ಶನ ನಡೆಯಲಿದೆ.
 ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ (SIS), ಬೆಂಗಳೂರು ಇವರ ದೂರವಾಣಿ ಸಂಖ್ಯೆ +91-7353698997 ಅಥವಾ ಮೊಬೈಲ್ ಸಂಖ್ಯೆ +91-9481403800,                           +91-9481274298  ಸಂಪರ್ಕಿಸುವಂತೆ , ಜಿಲ್ಲಾ ಯೋಜನಾ ಉದ್ಯೋಗ ವಿನಿಮಯ  ಕಚೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Read These Next

ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ

ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...

ರಾಜ್ಯ ವಿಧಾನಸಭಾ ಚುನಾವಣೆ: ಮತದಾರರ ಪಟ್ಟಿಯಿಂದ ಶೇ.20ರಷ್ಟು ಮುಸ್ಲಿಮರ ಹೆಸರು ನಾಪತ್ತೆ!

ಅಬುಸಲೇಹ್ ಶರೀಫ್ ಭಾರತದಲ್ಲಿ ಮುಸ್ಲಿಂ ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಯ ಬಗ್ಗೆ ಅಧ್ಯಯನ ನಡೆಸಲು 2005ರಲ್ಲಿ ...

ಕೈಗೆ ರಕ್ತದ ಕಲೆಯೂ ಆಗಿಲ್ಲ, ಕತ್ತಿ ರಕ್ತದಿಂದ ತೊಯ್ದೂ ಇಲ್ಲ… ಈ ಅಪಾಯಕಾರಿ ರಾಜಕಾರಣದ ಕುತಂತ್ರವನ್ನು ಅರಿತು ಮತದಾರರು ಮತ ಚಲಾಯಿಸಬೇಕು..

ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯಾಧ್ಯಕ್ಷ ಮುಹಮ್ಮದ್ ಅತ್ಹರುಲ್ಲಾ ಶರೀಫ್ ಅವರೊಂದಿಗೆ ಮುಂಬರುವ ವಿಧಾನಸಭಾ ಚುನಾವಣೆಯನ್ನು ...

ವಿವೇಕಾನಂದರ ಹಿಂದೂ ಧರ್ಮಕ್ಕೂ, ಗೋಡ್ಸೆ ಹಿಂದೂ ಧರ್ಮಕ್ಕೂ ಅಜಗಜಾಂತರ ವ್ಯತ್ಯಾಸ -ಡಾ.ರಾಮ್ ಪುನಿಯಾನಿ

ಓದು, ತಲೆ ಬುಡ ಯಾವುದೂ ಇಲ್ಲದೇ ಅಂಗಡಿ ಮುಂಗಟ್ಟಿನಲ್ಲಿ ನಿಂತು ಇತರರನ್ನು ಹೀಯಾಳಿಸಿ ಸುಖ ಪಡುವ, ಕನಸುಗಳಲ್ಲಿಯೇ ತೇಲಾಡಿ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...