ಪಿಡಿಪಿ ಯಿಂದ  ಮೈತ್ರಿ  ಕಡಿದುಕೊಂಡ ಬಿಜೆಪಿ; ಮುಖ್ಯಮಂತ್ರಿ ಹುದ್ದೆಗೆ ಮಹೆಬೂಬ ರಾಜಿನಾಮೆ

Source: S O News service | By Staff Correspondent | Published on 19th June 2018, 4:39 PM | National News |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜೊತೆಗಿನ ಮೈತ್ರಿಯನ್ನು ಬಿಜೆಪಿ ಕಡಿದುಕೊಳ್ಳಲು ನಿರ್ಧರಿಸಿದ್ದು, ಈ ಸಂಬಂಧ ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ.

ಇದರೊಂದಿಗೆ ಮೂರು ವರ್ಷಗಳ ಹಿಂದೆ ರಚನೆಯಾಗಿದ್ದ ಪಿಡಿಪಿ-ಬಿಜೆಪಿ ನೇತೃತ್ವದ ಸರಕಾರ ಈಗ ಮುರಿದು ಬಿದ್ದಿದ್ದು ಈ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಮಹೆಬೂಬ ಮುಫ್ತಿ ತನ್ನ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿಯೊಂದಿಗೆ ಬಿಜೆಪಿಯ ಮೈತ್ರಿ ಮುಂದುವರಿಸಲು ಸಾಧ್ಯವಿಲ್ಲ. ಈ ಕಾರಣದಿಂದಾಗಿ ಪಿಡಿಪಿಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದೇವೆ  ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್  ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಚೆನ್ನಾಗಿಲ್ಲ. ಉಗ್ರವಾದ ಮತ್ತು ಹಿಂಸಾಚಾರ ಮುಂದುವರಿದಿದೆ. ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಲಹೆ ಪಡೆದು  ಪಿಡಿಪಿಯೊಂದಿಗೆ ಇರುವ ಮಹಾಮೈತ್ರಿಯನ್ನು ಕಡಿದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. 

ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಬಿಜೆಪಿ ಮನವಿ ಮಾಡಿದೆ ಎಂದು ರಾಮ್ ಮಾಧವ್ ಮಾಹಿತಿ ನೀಡಿದ್ದಾರೆ.

ಪಿಡಿಪಿ ಮುಖ್ಯಮಂತ್ರಿ ಸ್ಥಾನ ಹಾಗೂ ಬಿಜೆಪಿ ಉಪಮುಖ್ಯಮಂತ್ರಿ ಹುದ್ದೆಯನ್ನು ಹಂಚಿಕೊಂಡಿದ್ದವು. ಆದರೆ, ಇದೀಗ  ಏಕಾಏಕಿ ಜಮ್ಮು-ಕಾಶ್ಮೀರದ ಮೈತ್ರಿ ಸರಕಾರದಿಂದ  ಕೇಂದ್ರದ ಆಡಳಿತಾರೂಢ ಬಿಜೆಪಿ ಹೊರ ಬಂದಿರುವುದು ಅಚ್ಚರಿ ಮೂಡಿಸಿದೆ.  

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...