ಭಟ್ಕಳ ಜನತಾ ಪಿಎಲ್​ಡಿ ಬ್ಯಾಂಕ್ ಚುನಾವಣೆ 19 ರಂದು  

Source: sonews | By MV Bhatkal | Published on 5th August 2018, 1:20 PM | Coastal News |

ಭಟ್ಕಳ: ತಾಲೂಕಿನ ಜನತಾ ಕೋ-ಆಫ್ ಸೊಸೈಟಿ ಮತ್ತು ಪಿಎಲ್​ಡಿ ಬ್ಯಾಂಕ್​ಗಳ ಚುನಾವಣೆ ಆ.19 ರಂದು ನಡೆಯಲಿದ್ದು, ನೂಕಾಟ ಗೌಜು ಗದ್ದಲದ ನಡುವೆ ಮೊದಲ ದಿನ ದಾಖಲೆ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಕೆಯಾಗಿದೆ. ವಿಧಾನಸಭೆಯ ಚುನಾವಣೆಯ ಬಳಿಕ ಬಿಜೆಪಿ ವಿಎಸ್​ಎಸ್ ಬ್ಯಾಂಕಿನ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ಸ್ವೀಕರಿಸಿತ್ತು. ಆದರೆ, 6 ಸ್ಥಾನಗಳಲ್ಲಿ ಹೀನಾಯ ಸೋಲು ಕಂಡ ಬಳಿಕ ಗೇಮ್ ಪ್ಲಾನ್ ಬದಲಿಸಿದೆ. ಜನತಾ ಬ್ಯಾಂಕಿನಲ್ಲಿ ಮಾಜಿ ಶಾಸಕ ಮಂಕಾಳ ವೈದ್ಯರು ಅಧ್ಯಕ್ಷರಾಗಿದ್ದರೆ, ಪಿಎಲ್​ಡಿ ಬ್ಯಾಂಕಿನಲ್ಲಿ ಶಾಸಕ ಸುನೀಲ ನಾಯ್ಕ ಮಾಜಿ ಅಧ್ಯಕ್ಷರು. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳೆರಡು ಈ ಚುನಾವಣೆಯನ್ನು ಪ್ರತಿಷ್ಠೆಯ ವಿಷಯವಾಗಿ ತೆಗೆದುಕೊಂಡಿವೆ. ಅಧಿಕಾರ ಪಡೆಯಲು ಎರಡು ಪಕ್ಷಗಳು ಪಣತೊಟ್ಟಿವೆ.
ಶನಿವಾರ ನಾಮಪತ್ರ ಸಲ್ಲಿಸಲು ಮೊದಲ ದಿನವಾಗಿದ್ದರಿಂದ ಬೆಳಗ್ಗೆ 7 ಗಂಟೆಯಿಂದಲೇ ಬ್ಯಾಂಕಿನ ಆವರಣದಲ್ಲಿ ಉಮೇದುವಾರರೊಂದಿಗೆ ನೂರಾರು ಸಂಖ್ಯೆಯ ಜನರು ಸೇರಿದ್ದರು. ಮೊದಲು ನಾಮ ಪತ್ರ ಸಲ್ಲಿಸಿದರೆ ಬೇಕಾಗಿರುವ ಚಿಹ್ನೆ ಪಡೆಯಲು ಅವಕಾಶ ಇದೆ. 11 ಗಂಟೆಗೆ ನಾಮಪತ್ರ ಸಲ್ಲಿಸಲು ಸಮಯ ಆರಂಭವಾಗುತ್ತಿದ್ದಂತೆ ಮೊದಲು ನಾಮ ಪತ್ರ ಸಲ್ಲಿಸಲು ಸದಸ್ಯರು ಮುಗಿಬಿದ್ದಿದ್ದರು. ಬ್ಯಾಂಕಿನ ಜಿ.ಎಂ ಸದಸ್ಯರನ್ನು ವಿನಂತಿಸಿ ಸರದಿಯ ಸಾಲಿನಲ್ಲಿ ಬರುವಂತೆ ಮನವೊಲಿಸಿದ್ದರಿಂದ ಪರಿಸ್ಥಿತಿ ಶಾಂತಗೊಂಡಿತು.
ಮೊದಲ ದಿನ ನಾಮ ಪತ್ರ ಸಲ್ಲಿಸಿದ ಘಟನಾನುಘಟಿಗಳು
ಶಾಸಕ ಸುನೀಲ ನಾಯ್ಕ, ಕಾಸ್ಕಾರ್ಡ್ ಬ್ಯಾಂಕಿನ ಉಪಾಧ್ಯಕ್ಷ ಈಶ್ವರ ನಾಯ್ಕ, ಬ್ಯಾಂಕಿನ ಅಧ್ಯಕ್ಷ ಮಹೇಶ ನಾಯ್ಕ, ಮಾಜಿ ಅಧ್ಯಕ್ಷ ದೇವಿದಾಸ ನಾಯ್ಕ, ಬ್ಲಾಕ್ ಕಾಂಗ್ರೆಸ್ ಮುಖಂಡ ವಿಠಲ್ ನಾಯ್ಕ, ಈರಪ್ಪ ಗರ್ಡಿಕರ್ ಸೇರಿ ಒಟ್ಟು 44 ಸದಸ್ಯರು ನಾಮಪತ್ರ ಸಲ್ಲಿಸಿದ್ದಾರೆ

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...