ಜಿದ್ದಾ: ಐಎಫ್ಎಫ್  ಕುಟುಂಬ ಸಮ್ಮಿಲನ “ ಸಂಭ್ರಮ-2019”  ವಿಜೃಂಭಣೆಯಿಂದ ಸಂಭ್ರಮಿಸಿದ ಅನಿವಾಸಿ ಕನ್ನಡಿಗರು

Source: so news | By MV Bhatkal | Published on 14th March 2019, 1:11 AM | Guest Editorial | Don't Miss |

ಜಿದ್ದಾ:  ಇಂಡಿಯಾ ಫ್ರೆಟರ್ನಿಟಿ ಫಾರಂ ಕರ್ನಾಟಕ ಚಾಪ್ಟರ್ ಜಿದ್ದಾ ಇದರ ವತಿಯಿಂದ ಫ್ರೆಟರ್ನಿಟಿ ಫೆಸ್ಟ್ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಂಗವಾಗಿ  ಬೃಹತ್ ಕುಟುಂಬ ಸಮ್ಮಿಲನ “ ಸಂಭ್ರಮ 2019” ಇತ್ತೀಚಿಗೆ ಜಿದ್ದಾದ ಮದ್ಹಲ ಸಭಾಂಗಣದಲ್ಲಿ ನಡೆಯಿತು. 
ಇಂಡಿಯಾ ಫ್ರೆಟರ್ನಿಟಿ ಫಾರಂ ರೀಜನಲ್ ಅಧ್ಯಕ್ಷ  ಫಯಾಝುದ್ದೀನ್ ಚೆನ್ನೈ  ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.
ಐ ಎಫ್ ಎಫ್ ಜಿಲ್ಲಾ ಸಮಿತಿ ಸದಸ್ಯ  ಅಬ್ದುಲ್ ಮಜೀದ್ ವಿಟ್ಲ ದಿಕ್ಸೂಚಿ ಭಾಷಣ ಮಾಡಿ ಮಾತನಾಡಿ ಪ್ರಸಕ್ತ ಭಾರತದ ಸ್ಥಿತಿಗತಿಗಳನ್ನು ವಿವರಿಸಿದರು,ಮತ್ತು ಕುಟುಂಬ ಸಮ್ಮಿಲನದ ಮಹತ್ವವನ್ನು ತಿಳಿಸಿದರು.
ಐ ಎಫ್ ಎಫ್ ಕರ್ನಾಟಕ ಚಾಪ್ಟರ್ ಅಧ್ಯಕ್ಷ  ಹಾರಿಸ್ ಗೂಡಿನಬಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮ ದಲ್ಲಿ    ಪತ್ರಕರ್ತ ಆರೀಫ್ ಕಲ್ಕಟ್ಟ ರನ್ನು ಐ ಎಫ್ ಎಫ್ ವತಿಯಿಂದ ಸನ್ಮಾನಿಸಲಾಯಿತು.
ಮುಖ್ಯ ಅಥಿತಿಗಳಾಗಿ ಲುಲು ಹೈಪರ್ ಮಾರ್ಕೆಟ್ ಜನರಲ್ ಮ್ಯಾನೇಜರ್ ಮುಹಮ್ಮದ್ ಅಶ್ರಫ್ ಕೆ ಸಿ ರೋಡ್, ಇಂಡಿಯನ್ ಸೋಶಿಯಲ್  ಫಾರಂ ಪಶ್ಚಿಮ ವಲಯ ಕರ್ನಾಟಕ ಚಾಪ್ಟರ್ ಅಧ್ಯಕ್ಷ ಮುಹಮ್ಮದ್ ಅಲಿ ಮೂಳೂರ್, ಐ ಎಫ್ ಎಫ್ ಕಾರ್ಯದರ್ಶಿ ಆರಿಫ್ ಬಜ್ಪೆ,ಉದ್ಯಮಿ ಲಿಯಾಖತ್ ಮಾಸ್ಟರ್ ಟ್ರೇಡರ್ಸ್ ಅಂಡ್ ಟ್ರಾನ್ಸ್ಪೋರ್ಟ್,
ಎನ್ ಸಿ ಎಂ ಎಸ್ ನ ಜನರಲ್ ಮ್ಯಾನೇಜರ್ ರಹೀಂ ಬಜ್ಪೆ ಸಾದಾ ಜನರಲ್ ಸೆಕ್ರೆಟರಿ ಐ ಪಿ ಡಬ್ಲ್ಯೂ ಎಫ್ 
ಕಮರ್, ಹಿದಾಯ ಫೌಂಡೇಶನ್ ಅಧ್ಯಕ್ಷ ಜಾವೇದ್ ಕಲ್ಲಡ್ಕ, ಐ ಎಫ್ ಎಫ್ ಜಿದ್ದಾ ವಲಯ ಅಧ್ಯಕ್ಷ ಮುದ್ದಸ್ಸರ್  ಅಬ್ದುಲ್,
ಐ ಎಫ್ ಎಫ್ ಕರ್ನಾಟಕ ಚಾಪ್ಟರ್ ಅಧ್ಯಕ್ಷ ಹಾರಿಸ್ ಗೂಡಿನಬಳಿ,. ಫಿರೋಜ್ ಕಲ್ಲಡ್ಕ,ಮುತ್ತಲಿಬ್ ಪಡುಬಿದ್ರೆ , ಶಾಕಿರ್ ಹಕ್ ನೆಲ್ಯಾಡಿ‌ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕ್ರೀಡೆಗಳು ನಡೆಸಲಾಯಿತು.ವಿಶೇಷವಾಗಿ ಲುಲು ಹೈಪರ್ ಮಾರ್ಕೆಟ್ ಪ್ರಾಯೋಜಕತ್ವದಲ್ಲಿ ನಡೆದ ಮಹಿಳೆಯ ಡೆಸರ್ಟ್ ಫುಡ್ ಸ್ಪರ್ಧೆ ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿತು.ಡೆಸರ್ಟ್ ಫುಡ್ ತೀರ್ಪುಗಾರರಾಗಿ ಲುಲು ಹೈಪರ್ ಮಾರ್ಕೆಟ್ ನ ಚೀಫ್ ಚೆಫ್ ಹನೀಫ್ ಕೆ ಎಂ ಹಾಗು ಸಹ ತೀರ್ಪುಗಾರರಾಗಿ ಬಾಸ್ಕಿನ್ ರಾಬಿನ್ಸ್ ನ ಡ್ಯಾನಿಷ್ ಸಹಕರಿಸಿದರು.ಹನೀಫ್ ಮತ್ತು ಡ್ಯಾನಿಷ್ ರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

    

Read These Next

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...