ಲಿಂಗಾನುಪಾತ ಸಮತೋಲನ ಕಾಪಾಡಬೇಕು ನ್ಯಾಯಾಧೀಶ ಶಿವಶಂಕರೇಗೌಡ

Source: sonews | By Staff Correspondent | Published on 11th October 2018, 11:31 PM | Coastal News | Don't Miss |

ಕಾರವಾರ  : ಹೆಣ್ಣು-ಗಂಡು ಎಂಬ ತಾರತಮ್ಯ ಹೊಗಲಾಡಿಸಿ ಲಿಂಗಾನುಪಾತದ ಸಮತೋಲನ ಕಾಪಾಡಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಸತ್ರ ನಾಯಾಧೀಶ ಟಿ.ಜಿ.ಶಿವಶಂಕರೇಗೌಡ ಹೇಳಿದರು. 

ಅವರು ಗುರುವಾರ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ನ್ಯಾಲಯ ಸಭಾಂಗಣದಲ್ಲಿ À ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.  ಹೆಣ್ಣು ಮಕ್ಕಳು ಸದೃಡರಾಗದೇ ಹೊರತು ಸದೃಡ ಸಮಾಜ ನಿರ್ಮಾಣ ಮಾಡುವುದು ಅಸಾದ್ಯವಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಮುಂದೆ ಬರುತ್ತಿದ್ದಾರೆ. ಮಹಿಳಾ ನ್ಯಾಯವಾದಿಗಳ ಮತ್ತು ನ್ಯಾಯಾಧೀಶರ ಸಂಖ್ಯೆ ಹೆಚ್ಚಾಗುತ್ತಿರುವುದು ಸಂತೋಷಕರ ವಿಷಯವಾಗಿದೆ ಎಂದು ತಿಳಿಸಿದರು. 

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಕೆ.ಪವಾರ ಮಾತನಾಡಿ ಸಮಾಜದಲ್ಲಿ ಹೆಣ್ಣನ್ನು ನಕರಾತ್ಮಕ ದೃಷ್ಠಿಕೋನದಿಂದ ನೋಡದೇ ಸಕರಾತ್ಮಕವಾಗಿ ನೋಡಿ  ಹೆಣ್ಣು ಮಕ್ಕಳ ರಕ್ಷಣೆಗೆ ಮುಂದಾಗಬೇಕು ಎಂದರು 

ನ್ಯಾಯವಾದಿ ಶುಭಾ ಗಾಂವಕರ ವಿಶೇಷ ಉಪನ್ಯಾಸ ನೀಡಿ ಮಹಿಳೆಯರು ತಮ್ಮ ರಕ್ಷಣೆಗಾಗಿ ಇರುವ ಕಾನೂನು ಕಾಯ್ದೆಗಳನ್ನು ತಿಳಿದುಕೊಳ್ಳಬೇಕು. ದೌರ್ಜನ್ಯದ ವಿರುದ್ದ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಅರಿವನ್ನು ಹೊಂದುವುದು ಅತ್ಯವಶ್ಯಕ. ದೌರ್ಜನ್ಯಕ್ಕೊಳಗಾದ ಮಹಿಳೆಯರು ದೂರು ನೀಡಲು ಮುಂದಾಗಬೇಕು. ಮುಚ್ಚಿಟ್ಟಷ್ಟು ದೌರ್ಜನ್ಯ ಹೆಚ್ಚುತ್ತದೆ. ತಪ್ಪಿತಸ್ಥರು ಇನ್ನೂ ಹೆಚ್ಚಾಗಿ ಈ ರೀತಿಯ ವರ್ತನೆ ಮುಂದುವರೆಸುತ್ತಾರೆ. ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಕೇವಲ ಮಹಿಳೆಯರು ಭಾಗವಹಿಸುವದಲ್ಲ ಬದಲಾಗಿ ಪುರುಷರು ಭಾಗವಹಿಸಿ ಮಹಿಳೆಯರ ಮೇಲೆ ಆಗುವ ಶೋಷಣೆಗಳ ಬಗ್ಗೆ ಅರಿತುಕೊಳ್ಳಬೇಕು ಎಂದರು. 

ನ್ಯಾಯವಾದಿ ಸಂಧ್ಯಾ ಪ.ತಳೆಕಲ್ ಮಹಿಳಾ ಆಸ್ತಿ, ಹಕ್ಕು ಹಾಗೂ ಲೈಂಗಿಕ ಅಪರಾದಗಳಿಂದ ಮಕ್ಕಳ ರಕ್ಷಣೆ ಕುರಿತು ಉಪನ್ಯಾಸ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಟಿ.ಗೋವಿಂದಯ್ಯ, ನ್ಯಾಯಾಧೀಶರಾದ ರಾಜೀವ ಗೋಳಸಾರ, ವಿಸ್ಮಿತಾ ಮೂರ್ತಿ, ವಿನುತಾ ಡಿ.ಎಸ್. ವೆಂಕಟೇಶ ಕೆ.ಎನ್.ಮತ್ತು ಇತರರು ಉಪಸ್ಥಿತರಿದ್ದರು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...