ಕಲ್ಬುರ್ಗಿ ಹತ್ಯೆ ತನಿಖೆ ಎಸ್‌ಐಟಿ ಹೆಗಲಿಗೆ

Source: so news | By MV Bhatkal | Published on 16th June 2018, 6:01 PM | State News | Don't Miss |

ಬೆಂಗಳೂರು-ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಖ್ಯಾತ ಸಂಶೋಧಕ ಎಂಎಂ ಕಲ್ಬುರ್ಗಿ ಹತ್ಯೆಯ ಪ್ರಕರಣವನ್ನು ವಹಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಗೌರಿ ಹತ್ಯೆ ಪ್ರಕರಣದ ತನಿಖೆಯು ಪೂರ್ಣಗೊಂಡು ಆರೋಪಪಟ್ಟಿ ಸಲ್ಲಿಸಿದ ನಂತರ ಎಂಎಂ ಕಲ್ಬುರ್ಗಿ ಹತ್ಯೆಯ ಪ್ರಕರಣವನ್ನು ವಹಿಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ಸಂಬಂಧ ಒಂದೆರಡು ವಾರಗಳಲ್ಲಿ ಅಧಿಸೂಚನೆ ಹೊರಡಿಸಲಿದೆ ಎಂದು ಗೃಹ ಇಲಾಖೆಯ ಮೂಲಗಳು ತಿಳಿಸಿವೆ.
ಎಂಎಂ ಕಲ್ಬುರ್ಗಿ ಹತ್ಯೆಯ ನಡೆದು ವರ್ಷಗಳೆ ಕಳೆದಿರುವುದರಿಂದ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸುವುದು ಸಾಧ್ಯವಾಗಲಿದೆಯೇ ಇಲ್ಲವೇ ಎನ್ನುವುದರ ಪರಾಮರ್ಶೆ ನಡೆಸಲಾಗುತ್ತಿದೆ ಅಲ್ಲದೇ ಗೌರಿ ಹತ್ಯೆ ಪತ್ತೆಗೆ ರಚಿಸಲಾಗಿದ್ದ ಎಸ್‌ಐಟಿ ತಂಡದ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಗೃಹ ಇಲಾಖೆ ಮುಂದಾಗಿದೆ
ಈ ನಡುವೆ ಗೌರಿ ಹತ್ಯೆಯಂತೆ ಎಂಎಂ ಕಲ್ಬುರ್ಗಿ ಹತ್ಯೆ ಪ್ರಕರಣವನ್ನು ಭೇದಿಸುವುದು ಕಷ್ಟಕರ ಏಕೆಂದರೆ ಮೂರು ವರ್ಷಗಳ ಹಿಂದೆ ನಡೆದಿರುವ ಎಂಎಂ ಕಲ್ಬುರ್ಗಿ ಹತ್ಯೆಯ ಸಂಬಂಧ ಆ ಪ್ರದೇಶದ ದೂರವಾಣಿ ಕರೆಗಳನ್ನು ಪರಿಶೀಲನೆ ನಡೆಸುವುದು ಆಸಾಧ್ಯ ಗೌರಿ ಹತ್ಯೆಯ ಸಂಬಂಧ ಕೇವಲ ೫ ತಿಂಗಳಲ್ಲಿ ೧.೫ ಕೋಟಿಗೆ ಹೆಚ್ಚು ಕರೆಗಳ ವಿವರಗಳನ್ನು ದಾಖಲಿಸಿದ್ದೇವೆ ಎಂದು ಎಸ್‌ಐಟಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಗೌರಿ ಹತ್ಯೆಗೆ ಬಳಸಿದ ಮಾಧರಿಯ ಪಿಸ್ತೂಲನ್ನು ಎಂಎಂ ಕಲ್ಬುರ್ಗಿ ಹತ್ಯೆಗೂ ಬಳಸಿದ್ದಾರೆ ಎನ್ನುವ ಮಾಹಿತಿ ಇದ್ದರೂ ಅದನ್ನು ಆಧರಿಸಿ ಹಂತಕರನ್ನು ಪತ್ತೆಹಚ್ಚುವುದು ಆಸಾಧ್ಯ ಇದಲ್ಲದೇ ಗೌರಿ ಹತ್ಯೆ ಸಂಬಂಧ ಬಂಧಿತರಾಗಿರುವ ಪರಶುರಾಮ್ ವಾಘ್ಮೋರೆ ಅಮೋಲ್ ಕಾಳೆ ಸೇರಿದಂತೆ ಐವರು ನಮಗೆ ಎಂಎಂ ಕಲ್ಬುರ್ಗಿಯ ಹತ್ಯೆ ಸಂಬಂಧ ಯಾವುದೇ ಮಾಹಿತಿ ನೀಡಿಲ್ಲ ವಿಚಾರಣೆಯಲ್ಲಿ ಅವರ ಕೈವಾಡವಿಲ್ಲದಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.
ಗೌರಿ ಹತ್ಯೆಯ ನಂತ ವಿಚಾರವಾದಿ ಕೆ,ಎಸ್ ಭಗವಾನ್ ಕೊಲೆಗೆ ಬಂಧಿತ ಆರೋಪಿಗಳು ಸಂಚು ರೂಪಿಸಿದ್ದರು ಇವರ ಹಿಟ್‌ಲಿಸ್ಟ್‌ನಲ್ಲಿ ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್ ಕೂಡಾ ಇರುವುದು ತನಿಖೆಯಲ್ಲಿ ಕಂಡುಬಂದಿದೆ ಆರೋಪಿಗಳು ಹಿಂದೂ ವಿರೋಧಿಗಳನ್ನು ಹತ್ಯೆಗೈಯುವುದನ್ನು ಗುರಿಯಾಗಿಸಿಕೊಂಡಿದ್ದರು ಎನ್ನುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...